newsfirstkannada.com

ದ.ಕನ್ನಡದಲ್ಲಿ ಮತ್ತೆ 6 ಮಂದಿ ಶಸ್ತ್ರಸಜ್ಜಿತ ನಕ್ಸಲರ ತಂಡ ಪ್ರತ್ಯಕ್ಷ.. ನಕ್ಸಲ್‌ ಕಾರಿಡಾರ್ ಆಗುತ್ತಿದೆಯಾ ಪಶ್ಚಿಮ ಘಟ್ಟ?

Share :

Published April 6, 2024 at 10:55am

Update April 6, 2024 at 10:57am

    ಎಎನ್​ಎಫ್ ಕೂಂಬಿಂಗ್ ಕಾರ್ಯಚರಣೆ ನಡುವೆ ಮತ್ತೆ ನಕ್ಸಲರು ಪ್ರತ್ಯಕ್ಷ

    ಮೋಸ್ಟ್ ವಾಂಡೆಟ್ ನಕ್ಸಲ್ ವಿಕ್ರಮ ಗೌಡ, ಮುಂಡಗಾರು ಲತಾ‌ ತಂಡ ಪ್ರತ್ಯಕ್ಷ ಶಂಕೆ

    ನಕ್ಸಲರು ಪ್ರತ್ಯಕ್ಷದಿಂದ ದಕ್ಷಿಣ ಕನ್ನಡದಲ್ಲಿ ಭಯದ ವಾತವರಣ ನಿರ್ಮಾಣವಾಗಿದೆ

ಮಂಗಳೂರು: ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಕ್ಸಲರ ತಂಡ ಪ್ರತ್ಯಕ್ಷವಾದ ಘಟನೆ ಬೆಳಕಿಗೆ ಬಂದಿದೆ. ಎಎನ್​ಎಫ್ ಕೂಂಬಿಂಗ್ ಕಾರ್ಯಚರಣೆ ನಡುವೆ ಮತ್ತೆ ನಕ್ಸಲರು ಪ್ರತ್ಯಕ್ಷವಾಗಿದ್ದಾರೆ.

ರಾತ್ರಿ 7 ಕ್ಕೆ ಬಿಳಿನೆಲೆ ಚೇರು ಎಂಬಲ್ಲಿ ನಕ್ಸಲರ ತಂಡ ಕಾಣಿಸಿಕೊಂಡಿದೆ. ಚೇರು ಗ್ರಾಮದ ಮನೆಯೊಂದಕ್ಕೆ 6 ಮಂದಿ ಶಸ್ತ್ರಸಜ್ಜಿತ ನಕ್ಸಲರ ತಂಡ ಭೇಟಿ ನೀಡಿದೆ. ಮನೆಗೆ ಬಂದು ಊಟ ಮಾಡಿ ಮೊಬೈಲ್ ಚಾರ್ಜ್ ಮಾಡಿ ತೆರಳಿದ್ದಾರೆ. ಅಷ್ಟು ಮಾತ್ರವಲ್ಲದೆ, ನಕ್ಸಲರು ಮನೆಯಿಂದ ಅಕ್ಕಿ ತೆಗೆದುಕೊಂಡು ಹೋದಿದ್ದಾರೆ ಎಂದು ತಿಳಿದುಬಂದಿದೆ. ಮೋಸ್ಟ್ ವಾಂಡೆಟ್ ನಕ್ಸಲ್ ವಿಕ್ರಮ ಗೌಡ , ಮುಂಡಗಾರು ಲತಾ‌ ತಂಡ ಪ್ರತ್ಯಕ್ಷವಾದ ಶಂಕೆ ವ್ಯಕ್ತವಾಗಿದೆ.

ಕೆಲ ದಿನಗಳ ಇಂದೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮಕ್ಕೆ ನಕ್ಸಲರ ತಂಡ ಭೇಟಿ ನೀಡಿತ್ತು. ಇದೀಗ ಬಿಳಿನೆಲೆ ನಕ್ಸಲರ ತಂಡ ಕಾಣಿಸಿಕೊಂಡಿದೆ. ಸದ್ಯ ದಕ್ಷಿಣ ಕನ್ನಡದಲ್ಲಿ ಭಯದ ವಾತವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: ಇವರು ವಿಶ್ವದ ದೀರ್ಘಾಯುಷಿ.. 2ನೇ ವಿಶ್ವಯುದ್ಧ ಕಣ್ಣಾರೆ ಕಂಡ ಏಕೈಕ ವ್ಯಕ್ತಿ, ಅಜ್ಜನ ಲೈಫ್​ಸ್ಟೈಲ್ ರೋಚಕ..!

ಪಶ್ಚಿಮ ಘಟ್ಟ ಪ್ರದೇಶ ಮತ್ತೆ ನಕ್ಸಲ್‌ ಕಾರಿಡಾರ್ ಆಗುತ್ತಿದೆಯಾ ಎಂಬ ಅನುಮಾನ ಕಾಡುತ್ತಿದೆ. ಮತ್ತೊಂದೆಡೆ ಜನರಲ್ಲೂ ಆತಂಕ ಮನೆ ಮಾಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದ.ಕನ್ನಡದಲ್ಲಿ ಮತ್ತೆ 6 ಮಂದಿ ಶಸ್ತ್ರಸಜ್ಜಿತ ನಕ್ಸಲರ ತಂಡ ಪ್ರತ್ಯಕ್ಷ.. ನಕ್ಸಲ್‌ ಕಾರಿಡಾರ್ ಆಗುತ್ತಿದೆಯಾ ಪಶ್ಚಿಮ ಘಟ್ಟ?

https://newsfirstlive.com/wp-content/uploads/2024/03/Naxal-1.jpg

    ಎಎನ್​ಎಫ್ ಕೂಂಬಿಂಗ್ ಕಾರ್ಯಚರಣೆ ನಡುವೆ ಮತ್ತೆ ನಕ್ಸಲರು ಪ್ರತ್ಯಕ್ಷ

    ಮೋಸ್ಟ್ ವಾಂಡೆಟ್ ನಕ್ಸಲ್ ವಿಕ್ರಮ ಗೌಡ, ಮುಂಡಗಾರು ಲತಾ‌ ತಂಡ ಪ್ರತ್ಯಕ್ಷ ಶಂಕೆ

    ನಕ್ಸಲರು ಪ್ರತ್ಯಕ್ಷದಿಂದ ದಕ್ಷಿಣ ಕನ್ನಡದಲ್ಲಿ ಭಯದ ವಾತವರಣ ನಿರ್ಮಾಣವಾಗಿದೆ

ಮಂಗಳೂರು: ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಕ್ಸಲರ ತಂಡ ಪ್ರತ್ಯಕ್ಷವಾದ ಘಟನೆ ಬೆಳಕಿಗೆ ಬಂದಿದೆ. ಎಎನ್​ಎಫ್ ಕೂಂಬಿಂಗ್ ಕಾರ್ಯಚರಣೆ ನಡುವೆ ಮತ್ತೆ ನಕ್ಸಲರು ಪ್ರತ್ಯಕ್ಷವಾಗಿದ್ದಾರೆ.

ರಾತ್ರಿ 7 ಕ್ಕೆ ಬಿಳಿನೆಲೆ ಚೇರು ಎಂಬಲ್ಲಿ ನಕ್ಸಲರ ತಂಡ ಕಾಣಿಸಿಕೊಂಡಿದೆ. ಚೇರು ಗ್ರಾಮದ ಮನೆಯೊಂದಕ್ಕೆ 6 ಮಂದಿ ಶಸ್ತ್ರಸಜ್ಜಿತ ನಕ್ಸಲರ ತಂಡ ಭೇಟಿ ನೀಡಿದೆ. ಮನೆಗೆ ಬಂದು ಊಟ ಮಾಡಿ ಮೊಬೈಲ್ ಚಾರ್ಜ್ ಮಾಡಿ ತೆರಳಿದ್ದಾರೆ. ಅಷ್ಟು ಮಾತ್ರವಲ್ಲದೆ, ನಕ್ಸಲರು ಮನೆಯಿಂದ ಅಕ್ಕಿ ತೆಗೆದುಕೊಂಡು ಹೋದಿದ್ದಾರೆ ಎಂದು ತಿಳಿದುಬಂದಿದೆ. ಮೋಸ್ಟ್ ವಾಂಡೆಟ್ ನಕ್ಸಲ್ ವಿಕ್ರಮ ಗೌಡ , ಮುಂಡಗಾರು ಲತಾ‌ ತಂಡ ಪ್ರತ್ಯಕ್ಷವಾದ ಶಂಕೆ ವ್ಯಕ್ತವಾಗಿದೆ.

ಕೆಲ ದಿನಗಳ ಇಂದೆ ಸುಬ್ರಹ್ಮಣ್ಯ ಸಮೀಪದ ಐನೆಕಿದು ಗ್ರಾಮಕ್ಕೆ ನಕ್ಸಲರ ತಂಡ ಭೇಟಿ ನೀಡಿತ್ತು. ಇದೀಗ ಬಿಳಿನೆಲೆ ನಕ್ಸಲರ ತಂಡ ಕಾಣಿಸಿಕೊಂಡಿದೆ. ಸದ್ಯ ದಕ್ಷಿಣ ಕನ್ನಡದಲ್ಲಿ ಭಯದ ವಾತವರಣ ನಿರ್ಮಾಣವಾಗಿದೆ.

ಇದನ್ನೂ ಓದಿ: ಇವರು ವಿಶ್ವದ ದೀರ್ಘಾಯುಷಿ.. 2ನೇ ವಿಶ್ವಯುದ್ಧ ಕಣ್ಣಾರೆ ಕಂಡ ಏಕೈಕ ವ್ಯಕ್ತಿ, ಅಜ್ಜನ ಲೈಫ್​ಸ್ಟೈಲ್ ರೋಚಕ..!

ಪಶ್ಚಿಮ ಘಟ್ಟ ಪ್ರದೇಶ ಮತ್ತೆ ನಕ್ಸಲ್‌ ಕಾರಿಡಾರ್ ಆಗುತ್ತಿದೆಯಾ ಎಂಬ ಅನುಮಾನ ಕಾಡುತ್ತಿದೆ. ಮತ್ತೊಂದೆಡೆ ಜನರಲ್ಲೂ ಆತಂಕ ಮನೆ ಮಾಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More