ಕಲ್ಲು ಹಾಗೂ ಲಾಂಗ್ನಿಂದ ಪೊಲೀಸ್ ಕಾನ್ಸ್ಸ್ಟೇಬಲ್ ಮೇಲೆ ಹಲ್ಲೆ
ಅಟ್ಟಾಡಿಸಿಕೊಂಡು ಕಾನ್ಸ್ಸ್ಟೇಬಲ್ಗೆ ಹೊಡೆದ ಯುವಕರ ಗುಂಪು
ಜಗಳ ತಡೆಯಲು ಹೋದ ಶರತ್ಗೆ ಮನಬಂದಂತೆ ಹೊಡೆದ ನಾಲ್ವರು
ಹಾಸನ: ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್ಸ್ಟೇಬಲ್ ಮೇಲೆ ಕಲ್ಲು ಹಾಗೂ ಲಾಂಗ್ನಿಂದ ಹಲ್ಲೆ ನಡೆಸಿದ ಘಟನೆ ಹೊಳೇನರಸೀಪುರ ತಾಲ್ಲೂಕಿನ ಮಳಲಿ ದೇವಸ್ಥಾನದಲ್ಲಿ ನಡೆದಿದೆ. ಯಸಳೂರು ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಶರತ್ ಈ ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ.
ಜಗಳ ಬಿಡಿಸಲು ಹೋದ ಕಾನ್ಸ್ಸ್ಟೇಬಲ್
ಕಾನ್ಸ್ಸ್ಟೇಬಲ್ ಶರತ್ ಜೂ.15 ರಂದು ಸಾಂದರ್ಭಿಕ ರಜೆ ಪಡೆದಿದ್ದರು. ರಜೆ ಪಡೆದು ತಮ್ಮ ಗ್ರಾಮದ ದೀಪಕ್ ಎಂಬುವವರ ಮಗಳ ಹುಟ್ಟಹಬ್ಬದ ಕಾರ್ಯಕ್ರಮಕ್ಕೆ ಮಳಲಿ ದೇವಸ್ಥಾನಕ್ಕೆ ಹೋಗಿದ್ದರು. ಆದರೆ ಈ ವೇಳೆ ದೇವಸ್ಥಾನದ ಬಳಿಯಿರುವ ಸೋನಾ ಶ್ರೇಯ ಕನ್ವೆನ್ಷನ್ ಹಾಲ್ ಮುಂಭಾಗ ತನ್ನ ಗ್ರಾಮದ ಯುವಕರು ಚೇತನ್ ಎಂಬ ಯುವಕನಿಗೆ ಅವಾಚ್ಯ ಶಬ್ದಗಳಿಂದ ಬೈಯ್ದು ಹಲ್ಲೆ ಮಾಡುತ್ತಿದ್ದನ್ನು ಗಮನಿಸಿದ್ದಾರೆ. ಈ ವೇಳೆ ಶರತ್ ಜಗಳ ಬಿಡಿಸಲು ಹೋಗುತ್ತಾರೆ.
ಲಾಂಗ್ನಿಂದ ಹಲ್ಲೆ
ಜಗಳ ಬಿಡಿಸಲು ಹೋದ ಶರತ್ಗೆ ಮಿಥುನ್, ಲೋಹಿತ್, ನಟರಾಜು ಹಾಗೂ ಇತರರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಈ ವೇಳೆ ನಟರಾಜ ಎಂಬಾತ ಕಲ್ಲಿನಿಂದ ಶರತ್ ತಲೆಗೆ ಹೊಡೆದು ಕಾರಿನಿಂದ ಲಾಂಗ್ ತಂದಿದ್ದಾನೆ. ತಕ್ಷಣವೇ ಶರತ್ ಕನ್ವೆನ್ಷನ್ ಹಾಲ್ ಒಳಗೆ ಶರತ್ ಓಡಿ ಹೋಗಿದ್ದಾರೆ.
ಬಳಿಕ ಕನ್ವೆನ್ಷನ್ ಹಾಲ್ಗೆ ನುಗ್ಗಿದ ತಂಡ ಲಾಂಗ್ನಿಂದ ಮನಬಂದಂತೆ ಶರತ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ವೇಳೆಗೆ ಕಾನ್ಸ್ಸ್ಟೇಬಲ್ ಹಾಲ್ನಲ್ಲೇ ಕಾನ್ಸ್ಸ್ಟೇಬಲ್ ಶರತ್ ಕುಸಿದು ಬಿದ್ದಿದ್ದಾನೆ.
ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸದ್ಯ ಗಾಯಾಳುವಿಗೆ ಹಾಸನದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಳೇನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಪೇದೆ ಮೇಲೆ ಲಾಂಗ್ನಿಂದ ಹಲ್ಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಕಲ್ಲು ಹಾಗೂ ಲಾಂಗ್ನಿಂದ ಪೊಲೀಸ್ ಕಾನ್ಸ್ಸ್ಟೇಬಲ್ ಮೇಲೆ ಹಲ್ಲೆ
ಅಟ್ಟಾಡಿಸಿಕೊಂಡು ಕಾನ್ಸ್ಸ್ಟೇಬಲ್ಗೆ ಹೊಡೆದ ಯುವಕರ ಗುಂಪು
ಜಗಳ ತಡೆಯಲು ಹೋದ ಶರತ್ಗೆ ಮನಬಂದಂತೆ ಹೊಡೆದ ನಾಲ್ವರು
ಹಾಸನ: ಜಗಳ ಬಿಡಿಸಲು ಹೋದ ಪೊಲೀಸ್ ಕಾನ್ಸ್ಸ್ಟೇಬಲ್ ಮೇಲೆ ಕಲ್ಲು ಹಾಗೂ ಲಾಂಗ್ನಿಂದ ಹಲ್ಲೆ ನಡೆಸಿದ ಘಟನೆ ಹೊಳೇನರಸೀಪುರ ತಾಲ್ಲೂಕಿನ ಮಳಲಿ ದೇವಸ್ಥಾನದಲ್ಲಿ ನಡೆದಿದೆ. ಯಸಳೂರು ಪೊಲೀಸ್ ಠಾಣೆಯ ಕಾನ್ಸ್ಸ್ಟೇಬಲ್ ಶರತ್ ಈ ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ.
ಜಗಳ ಬಿಡಿಸಲು ಹೋದ ಕಾನ್ಸ್ಸ್ಟೇಬಲ್
ಕಾನ್ಸ್ಸ್ಟೇಬಲ್ ಶರತ್ ಜೂ.15 ರಂದು ಸಾಂದರ್ಭಿಕ ರಜೆ ಪಡೆದಿದ್ದರು. ರಜೆ ಪಡೆದು ತಮ್ಮ ಗ್ರಾಮದ ದೀಪಕ್ ಎಂಬುವವರ ಮಗಳ ಹುಟ್ಟಹಬ್ಬದ ಕಾರ್ಯಕ್ರಮಕ್ಕೆ ಮಳಲಿ ದೇವಸ್ಥಾನಕ್ಕೆ ಹೋಗಿದ್ದರು. ಆದರೆ ಈ ವೇಳೆ ದೇವಸ್ಥಾನದ ಬಳಿಯಿರುವ ಸೋನಾ ಶ್ರೇಯ ಕನ್ವೆನ್ಷನ್ ಹಾಲ್ ಮುಂಭಾಗ ತನ್ನ ಗ್ರಾಮದ ಯುವಕರು ಚೇತನ್ ಎಂಬ ಯುವಕನಿಗೆ ಅವಾಚ್ಯ ಶಬ್ದಗಳಿಂದ ಬೈಯ್ದು ಹಲ್ಲೆ ಮಾಡುತ್ತಿದ್ದನ್ನು ಗಮನಿಸಿದ್ದಾರೆ. ಈ ವೇಳೆ ಶರತ್ ಜಗಳ ಬಿಡಿಸಲು ಹೋಗುತ್ತಾರೆ.
ಲಾಂಗ್ನಿಂದ ಹಲ್ಲೆ
ಜಗಳ ಬಿಡಿಸಲು ಹೋದ ಶರತ್ಗೆ ಮಿಥುನ್, ಲೋಹಿತ್, ನಟರಾಜು ಹಾಗೂ ಇತರರು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾರೆ. ಈ ವೇಳೆ ನಟರಾಜ ಎಂಬಾತ ಕಲ್ಲಿನಿಂದ ಶರತ್ ತಲೆಗೆ ಹೊಡೆದು ಕಾರಿನಿಂದ ಲಾಂಗ್ ತಂದಿದ್ದಾನೆ. ತಕ್ಷಣವೇ ಶರತ್ ಕನ್ವೆನ್ಷನ್ ಹಾಲ್ ಒಳಗೆ ಶರತ್ ಓಡಿ ಹೋಗಿದ್ದಾರೆ.
ಬಳಿಕ ಕನ್ವೆನ್ಷನ್ ಹಾಲ್ಗೆ ನುಗ್ಗಿದ ತಂಡ ಲಾಂಗ್ನಿಂದ ಮನಬಂದಂತೆ ಶರತ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆ ವೇಳೆಗೆ ಕಾನ್ಸ್ಸ್ಟೇಬಲ್ ಹಾಲ್ನಲ್ಲೇ ಕಾನ್ಸ್ಸ್ಟೇಬಲ್ ಶರತ್ ಕುಸಿದು ಬಿದ್ದಿದ್ದಾನೆ.
ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸದ್ಯ ಗಾಯಾಳುವಿಗೆ ಹಾಸನದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೊಳೇನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಪೇದೆ ಮೇಲೆ ಲಾಂಗ್ನಿಂದ ಹಲ್ಲೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ