/newsfirstlive-kannada/media/post_attachments/wp-content/uploads/2024/08/Vijayapura-Bike-Accident-1.jpg)
ವಿಜಯಪುರ: ಅತಿವೇಗ ಸಾವಿಗೆ ಆಹ್ವಾನ ಅನ್ನೋದು ಗೊತ್ತಿದ್ರೂ ವಾಹನ ಸವಾರರು ಬುದ್ಧಿ ಕಲಿಯಲ್ಲ. ಅಪಘಾತದಲ್ಲಿ ಯಾರೋ ಮಾಡಿದ ತಪ್ಪಿಗೆ ಮತ್ಯಾರೋ ಬಲಿಯಾಗುವುದು ಮತ್ತೊಂದು ದುರಂತ. ವಿಜಯಪುರ ನಗರದ ಮನಗೂಳಿ ಅಗಸಿ ಬಳಿ ಇಂತಹದೇ ಘನಘೋರ ಘಟನೆ ಇಂದು ನಡೆದು ಹೋಗಿದೆ.
/newsfirstlive-kannada/media/post_attachments/wp-content/uploads/2024/08/Vijayapura-Bike-Accident.jpg)
ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ ಹೊಡೆದಿರೋ ಭೀಕರ ಅಪಘಾತ ಹಾಡಹಗಲೇ ವಿಜಯಪುರ ನಗರದಲ್ಲಿ ನಡೆದಿದೆ. ಕಾರು ಡಿಕ್ಕಿಯಾದ ಬಳಿಕ ಬೈಕ್ನಲ್ಲಿದ್ದ ವಕೀಲನನ್ನು ಅರ್ಧ ಕಿಲೋಮೀಟರ್ವರೆಗೂ ಎಳೆದುಕೊಂಡು ಹೋಗಿದೆ. ಈ ಕರುಣಾಜನಕ ದೃಶ್ಯ ನೋಡಿದ ವಿಜಯಪುರದ ಜನ ಬೆಚ್ಚಿ ಬಿದ್ದಿದ್ದಾರೆ.
ಇದನ್ನೂ ಓದಿ: ಮೈ ಮೇಲೆ ಸೀರೆ ಇರಲ್ಲ, ಆದ್ರೂ ರೇಪ್ ಆಗಿರಲ್ಲ; ಒಂದೇ ರೀತಿ 9 ಮಹಿಳೆಯರ ಹತ್ಯೆ; ಬೆಚ್ಚಿ ಬೀಳಿಸಿದ ಸ್ಯಾರಿ ಕಿಲ್ಲರ್!
ದಾರುಣವಾಗಿ ಸಾವನ್ನಪ್ಪಿದ ವಕೀಲನನ್ನು ರವಿ ಮೇಲಿನಕೇರಿ ಎಂದು ಗುರುತಿಸಲಾಗಿದೆ. ಇವರಿಗೆ 35 ವರ್ಷ ವಯಸ್ಸು. ರವಿ ಮೇಲಿನಕೇರಿ ಅವರು ಇಂಡಿ ತಾಲ್ಲೂಕಿನ ಅಗರಖೇಡ ಗ್ರಾಮದ ನಿವಾಸಿ.
ಇದನ್ನೂ ಓದಿ: ಫಸ್ಟ್ ನೈಟ್ನಲ್ಲೇ ಮಚ್ಚಿನಿಂದ ಹೊಡೆದಾಟ.. ವಧು-ವರರ ಸಾವಿನ ಕೇಸ್ಗೆ ಹೊಸ ಟ್ವಿಸ್ಟ್; ಅಸಲಿಗೆ ಆಗಿದ್ದೇನು?
ಭೀಕರ ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಕಾರಿನ ಸಮೇತ ಪರಾರಿಯಾಗಿದ್ದಾರೆ. ವಿಜಯಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us