/newsfirstlive-kannada/media/post_attachments/wp-content/uploads/2024/09/muniratna_hk_patil.jpg)
ಬೆಂಗಳೂರು: ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ನಾಯ್ಡುರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಸ್ಪೀಕರ್ ಯು.ಟಿ ಖಾದರ್ ಅವರಿಗೆ ಕಾನೂನು ಸಚಿವ ಹೆಚ್​​.ಕೆ ಪಾಟೀಲ್ ಪತ್ರ ಬರೆದಿದ್ದಾರೆ.
ಸಮುದಾಯಗಳ ವಿರುದ್ಧ ಹೇಯ, ಅಸಭ್ಯವಾದ ಭಾಷೆ ಬಳಸಿರುವುದು ಕ್ಷಮೆಗೆ ಅರ್ಹರಲ್ಲ. ಶಾಸಕರನ್ನ ನಿಯಂತ್ರಣಕ್ಕೆ ತರಲು, ನೀತಿ-ನಿರೂಪಣಾ ಸಮಿತಿ ರಚನೆ ಮಾಡಬೇಕು. ಸದನದ ಒಳಗೆ ಹಾಗೂ ಹೊರಗೆ ಅಸಭ್ಯವಾಗಿ ವರ್ತಿಸುವ ಸದಸ್ಯರ ವರ್ತನೆ ನಿಯಂತ್ರಿಸಬೇಕು. ಮುನಿರತ್ನ ಘಟನೆಯಿಂದ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಮೌಲ್ಯಗಳಿಗೆ, ಸಂಪ್ರದಾಯಗಳಿಗೆ ಅವಮಾನವಾಗಿದೆ. ಹೀಗಾಗಿ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಈ ಕೂಡಲೇ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅಮಾನತು ಮಾಡಬೇಕು ಎಂದು ವಿಧಾನಸಭಾ ಸ್ಪೀಕರ್ ಯುಟಿ ಖಾದರ್​​ ಅವರಿಗೆ ಸಚಿವ ಹೆಚ್.ಕೆ ಪಾಟೀಲ್ ಒತ್ತಾಯಿಸಿದ್ದಾರೆ.
ಚಲುವರಾಜು ಎನ್ನುವವರಿಗೆ ಬೆದರಿಕೆ, ಜಾತಿ ನಿಂದನೆ ಮಾಡಿರುವ ಆರೋಪ ಹಾಗೂ ಅ*ಚಾರ ಕೇಸ್​ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಸದ್ಯ ಜೈಲಿನಲ್ಲಿದ್ದಾರೆ. ಜಾತಿ ನಿಂದನೆ ಕೇಸ್​ನಲ್ಲಿ ಜಾಮೀನು ಸಿಕ್ಕಿದ್ದರೂ ಮಹಿಳೆಯೊಬ್ಬರ ಮೇಲೆ ಅಸಭ್ಯ ವರ್ತನೆ ಎನ್ನುವ ಪ್ರಕರಣದಲ್ಲಿ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಶಾಕಸರ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಹೀಗಾಗಿ ಮುನಿರತ್ನ ಮತ್ತೆ ಜೈಲು ಸೇರುವಂತೆ ಆಗಿದೆ. ಈ ಪ್ರಕರಣಗಳ ತನಿಖೆಗೆ ಸರ್ಕಾರ ಎಸ್ಐಟಿ ತಂಡ ರಚನೆ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ