ಮಹಿಳೆ ನಗರದಲ್ಲಿ ಮನೆ ಮಾಡಿರುವ ಬಗ್ಗೆ ತಿಳಿದುಕೊಂಡಿದ್ದ ಹಂತಕ
ಇಬ್ರು ಮನೆಯೊಳಗೆ ಹೋಗಿದ್ದು ಬಳಿಕ ಮಹಿಳೆಗೆ ಚಾಕು ಇರಿದು ಹತ್ಯೆ
ಇಬ್ಬರು ಯಾವ ಊರಿನವರು, ನಗರಕ್ಕೆ ಬಂದು ಎಷ್ಟು ವರ್ಷ ಆಗಿತ್ತು?
ಬೆಂಗಳೂರು: ಜೊತೆಗಾರನೇ ಚಾಕು ಇರಿದು ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಸುಂಕದಕಟ್ಟೆ ಬಳಿ ನಡೆದಿದೆ.
ಬಿಡದಿ ಮೂಲದ ದಿವ್ಯಾ (30) ಕೊಲೆಯಾದ ಮಹಿಳೆ. ಈಕೆಯ ಜೊತೆಗಾರ ಶಾಂತಕುಮಾರ್ ಕೊಲೆ ಮಾಡಿದ ವ್ಯಕ್ತಿ. ಈ ಇಬ್ಬರು ಬಿಡದಿ ಮೂಲದವರು ಆಗಿದ್ದಾರೆ. 4 ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದು ವಾಸಿಸತೊಡಗಿದ್ದರು. ಆದರೆ ಮದುವೆ ಆಗಿರುವ ಬಗ್ಗೆ ಅನುಮಾನವಿದೆ. ಈ ಮೊದಲು ಕಾಮಾಕ್ಷಿಪಾಳ್ಯದಲ್ಲಿ ಇಬ್ಬರು ಮನೆ ಮಾಡಿದ್ದರು. ಆ ನಂತರ ಇಬ್ಬರ ನಡುವೆ ಜಗಳವಾಗಿದ್ದರಿಂದ ಮಹಿಳೆ ಏಕಾಂಗಿಯಾಗಿ ವಾಸಿಸತೊಡಗಿದಳು.
ಇದನ್ನೂ ಓದಿ: VIDEO: ಅಬ್ಬಬ್ಬಾ! ಬರೋಬ್ಬರಿ 13 ಅಡಿ ಹೆಬ್ಬಾವು ನೋಡಿ ಶಾಕ್ ಆದ ಗ್ರಾಮಸ್ಥರು; ಆಮೇಲೇನಾಯ್ತು?
5 ದಿನದ ಹಿಂದೆ ಬೆಂಗಳೂರಿನ ಸುಂಕದಕಟ್ಟೆಯ ಸೊಲ್ಲಾಪುರಂ ಲೇಔಟ್ನಲ್ಲಿ ಮಹಿಳೆ ಬಾಡಿಗೆ ಮನೆ ಮಾಡಿದ್ದಳು. ಈ ಬಗ್ಗೆ ಆರೋಪಿ ತಿಳಿದುಕೊಂಡಿದ್ದ. ರಾತ್ರಿ 9:30ಕ್ಕೆ ಬಾಡಿಗೆ ಮನೆ ಬಳಿ ಬಂದಿದ್ದು ಇಬ್ಬರು ಜೊತೆಯಲ್ಲೇ ಮನೆಯೊಳಗೆ ಹೋಗಿದ್ದಾರೆ. ಮನೆ ಒಳಗೆ ಯಾವುದೋ ವಿಷಯಕ್ಕೆ ಇಬ್ಬರ ನಡುವೆ ಗಲಾಟೆ ಶುರುವಾಗಿದೆ. ಈ ವೇಳೆ ಚಾಕು ತೆಗೆದುಕೊಂಡು ಮಹಿಳೆಗೆ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಹಿಳೆ ನಗರದಲ್ಲಿ ಮನೆ ಮಾಡಿರುವ ಬಗ್ಗೆ ತಿಳಿದುಕೊಂಡಿದ್ದ ಹಂತಕ
ಇಬ್ರು ಮನೆಯೊಳಗೆ ಹೋಗಿದ್ದು ಬಳಿಕ ಮಹಿಳೆಗೆ ಚಾಕು ಇರಿದು ಹತ್ಯೆ
ಇಬ್ಬರು ಯಾವ ಊರಿನವರು, ನಗರಕ್ಕೆ ಬಂದು ಎಷ್ಟು ವರ್ಷ ಆಗಿತ್ತು?
ಬೆಂಗಳೂರು: ಜೊತೆಗಾರನೇ ಚಾಕು ಇರಿದು ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಸುಂಕದಕಟ್ಟೆ ಬಳಿ ನಡೆದಿದೆ.
ಬಿಡದಿ ಮೂಲದ ದಿವ್ಯಾ (30) ಕೊಲೆಯಾದ ಮಹಿಳೆ. ಈಕೆಯ ಜೊತೆಗಾರ ಶಾಂತಕುಮಾರ್ ಕೊಲೆ ಮಾಡಿದ ವ್ಯಕ್ತಿ. ಈ ಇಬ್ಬರು ಬಿಡದಿ ಮೂಲದವರು ಆಗಿದ್ದಾರೆ. 4 ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದು ವಾಸಿಸತೊಡಗಿದ್ದರು. ಆದರೆ ಮದುವೆ ಆಗಿರುವ ಬಗ್ಗೆ ಅನುಮಾನವಿದೆ. ಈ ಮೊದಲು ಕಾಮಾಕ್ಷಿಪಾಳ್ಯದಲ್ಲಿ ಇಬ್ಬರು ಮನೆ ಮಾಡಿದ್ದರು. ಆ ನಂತರ ಇಬ್ಬರ ನಡುವೆ ಜಗಳವಾಗಿದ್ದರಿಂದ ಮಹಿಳೆ ಏಕಾಂಗಿಯಾಗಿ ವಾಸಿಸತೊಡಗಿದಳು.
ಇದನ್ನೂ ಓದಿ: VIDEO: ಅಬ್ಬಬ್ಬಾ! ಬರೋಬ್ಬರಿ 13 ಅಡಿ ಹೆಬ್ಬಾವು ನೋಡಿ ಶಾಕ್ ಆದ ಗ್ರಾಮಸ್ಥರು; ಆಮೇಲೇನಾಯ್ತು?
5 ದಿನದ ಹಿಂದೆ ಬೆಂಗಳೂರಿನ ಸುಂಕದಕಟ್ಟೆಯ ಸೊಲ್ಲಾಪುರಂ ಲೇಔಟ್ನಲ್ಲಿ ಮಹಿಳೆ ಬಾಡಿಗೆ ಮನೆ ಮಾಡಿದ್ದಳು. ಈ ಬಗ್ಗೆ ಆರೋಪಿ ತಿಳಿದುಕೊಂಡಿದ್ದ. ರಾತ್ರಿ 9:30ಕ್ಕೆ ಬಾಡಿಗೆ ಮನೆ ಬಳಿ ಬಂದಿದ್ದು ಇಬ್ಬರು ಜೊತೆಯಲ್ಲೇ ಮನೆಯೊಳಗೆ ಹೋಗಿದ್ದಾರೆ. ಮನೆ ಒಳಗೆ ಯಾವುದೋ ವಿಷಯಕ್ಕೆ ಇಬ್ಬರ ನಡುವೆ ಗಲಾಟೆ ಶುರುವಾಗಿದೆ. ಈ ವೇಳೆ ಚಾಕು ತೆಗೆದುಕೊಂಡು ಮಹಿಳೆಗೆ ಇರಿದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ