newsfirstkannada.com

×

ತೀವ್ರ ಹೃದಯಾಘಾತ.. ಗಂಡನ ಸಾವಿಗೆ 7ನೇ ಮಹಡಿಯಿಂದ ಹಾರಿ ಪ್ರಾಣ ಬಿಟ್ಟ ನವವಧು; ಆಗಿದ್ದೇನು?

Share :

Published February 27, 2024 at 1:25pm

    ದೆಹಲಿಯ ಮೃಗಾಲಯಕ್ಕೆ ಪ್ರವಾಸ ಕೈಗೊಂಡಿದ್ದ ಯುವಜೋಡಿ

    ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಅಭಿಷೇಕ್, ಅಂಜಲಿ

    ರಾತ್ರಿಯೇ 7ನೇ ಮಹಡಿಗೆ ಹೋಗಿ ಕೆಳಗೆ ಹಾರಿ ಪ್ರಾಣ ಬಿಟ್ಟ ಪತ್ನಿ

ನವದೆಹಲಿ: ಮದುವೆಯಾದ ಮೂರು ತಿಂಗಳಿಗೆ ದಂಪತಿ ದುರಂತ ಅಂತ್ಯ ಕಂಡ ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ. ಮೃತಪಟ್ಟವರನ್ನ 25 ವರ್ಷದ ಅಭಿಷೇಕ್ ಹಾಗೂ ಅಂಜಲಿ ಎಂದು ಗುರುತಿಸಲಾಗಿದೆ. ಕಳೆದ ನವೆಂಬರ್ 30ರಂದು ಈ ಜೋಡಿಗೆ ಗಾಜಿಯಾಬಾದ್‌ನಲ್ಲಿ ಮದುವೆಯಾಗಿತ್ತು.

ಅಭಿಷೇಕ್ ಅಹ್ಲುವಾಲಿ ಹಾಗೂ ಅಂಜಲಿ ಮದುವೆಯಾದ ಬಳಿಕ ದೆಹಲಿಯ ಮೃಗಾಲಯಕ್ಕೆ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಅಭಿಷೇಕ್‌ ಅವರಿಗೆ ಹಠಾತ್‌ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ತನ್ನ ಸ್ನೇಹಿತರಿಗೆ ಕರೆ ಮಾಡಿದ ಅಂಜಲಿ ಸಹಾಯ ಕೇಳಿದ್ದಾರೆ. ಆಗ ಅಭಿಷೇಕ್ ಅವರನ್ನು ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಅಷ್ಟರಲ್ಲಾಗಲೇ ವೈದ್ಯರು ಅಭಿಷೇಕ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ. ಅಭಿಷೇಕ್ ಸಾವಿನ ಸುದ್ದಿ ಕೇಳಿದ ಕುಟುಂಬಸ್ಥರು ದಿಗ್ಭ್ರಾಂತರಾಗಿದ್ದಾರೆ. ಮದುವೆಯಾಗಿ ಮೂರು ತಿಂಗಳು ಕಳೆದಿದ್ದ ಮನೆಗೆ ಅಭಿಷೇಕ್ ಮೃತದೇಹವನ್ನು ತೆಗೆದುಕೊಂಡು ಹೋಗಲಾಗಿದೆ. ರಾತ್ರಿ 9 ಗಂಟೆ ಸುಮಾರಿಗೆ ಅಭಿಷೇಕ್ ಮೃತದೇಹವನ್ನು ಮನೆಗೆ ತಂದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಆಸ್ತಿ ವಿಚಾರಕ್ಕೆ ಗಲಾಟೆ; ತಂದೆ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ

ಅಭಿಷೇಕ್ ಮೃತದೇಹದ ಮುಂದೆ ಎಲ್ಲರೂ ಕಣ್ಣೀರು ಹಾಕುತ್ತಿದ್ದಾಗ ಆಕೆಯ ಪತ್ನಿ ಅಂಜಲಿ ಅಪಾರ್ಟ್‌ಮೆಂಟ್‌ನ 7ನೇ ಮಹಡಿಗೆ ಹೋಗಿ ಕೆಳಗೆ ಹಾರಿದ್ದಾಳೆ. ಅಭಿಷೇಕ್ ಸಾವನ್ನಪ್ಪಿದ 24 ಗಂಟೆಯಲ್ಲೇ ಅಂಜಲಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ. 3 ತಿಂಗಳ ಹಿಂದೆ ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಈಗ ಶೋಕ ಸಾಗರ ಆವರಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ತೀವ್ರ ಹೃದಯಾಘಾತ.. ಗಂಡನ ಸಾವಿಗೆ 7ನೇ ಮಹಡಿಯಿಂದ ಹಾರಿ ಪ್ರಾಣ ಬಿಟ್ಟ ನವವಧು; ಆಗಿದ್ದೇನು?

https://newsfirstlive.com/wp-content/uploads/2024/02/Uttarpradesh-Couple.jpg

    ದೆಹಲಿಯ ಮೃಗಾಲಯಕ್ಕೆ ಪ್ರವಾಸ ಕೈಗೊಂಡಿದ್ದ ಯುವಜೋಡಿ

    ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಅಭಿಷೇಕ್, ಅಂಜಲಿ

    ರಾತ್ರಿಯೇ 7ನೇ ಮಹಡಿಗೆ ಹೋಗಿ ಕೆಳಗೆ ಹಾರಿ ಪ್ರಾಣ ಬಿಟ್ಟ ಪತ್ನಿ

ನವದೆಹಲಿ: ಮದುವೆಯಾದ ಮೂರು ತಿಂಗಳಿಗೆ ದಂಪತಿ ದುರಂತ ಅಂತ್ಯ ಕಂಡ ದಾರುಣ ಘಟನೆ ದೆಹಲಿಯಲ್ಲಿ ನಡೆದಿದೆ. ಮೃತಪಟ್ಟವರನ್ನ 25 ವರ್ಷದ ಅಭಿಷೇಕ್ ಹಾಗೂ ಅಂಜಲಿ ಎಂದು ಗುರುತಿಸಲಾಗಿದೆ. ಕಳೆದ ನವೆಂಬರ್ 30ರಂದು ಈ ಜೋಡಿಗೆ ಗಾಜಿಯಾಬಾದ್‌ನಲ್ಲಿ ಮದುವೆಯಾಗಿತ್ತು.

ಅಭಿಷೇಕ್ ಅಹ್ಲುವಾಲಿ ಹಾಗೂ ಅಂಜಲಿ ಮದುವೆಯಾದ ಬಳಿಕ ದೆಹಲಿಯ ಮೃಗಾಲಯಕ್ಕೆ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಅಭಿಷೇಕ್‌ ಅವರಿಗೆ ಹಠಾತ್‌ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ತನ್ನ ಸ್ನೇಹಿತರಿಗೆ ಕರೆ ಮಾಡಿದ ಅಂಜಲಿ ಸಹಾಯ ಕೇಳಿದ್ದಾರೆ. ಆಗ ಅಭಿಷೇಕ್ ಅವರನ್ನು ಗುರು ತೇಗ್ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸಫ್ದರ್ಜಂಗ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಅಷ್ಟರಲ್ಲಾಗಲೇ ವೈದ್ಯರು ಅಭಿಷೇಕ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ. ಅಭಿಷೇಕ್ ಸಾವಿನ ಸುದ್ದಿ ಕೇಳಿದ ಕುಟುಂಬಸ್ಥರು ದಿಗ್ಭ್ರಾಂತರಾಗಿದ್ದಾರೆ. ಮದುವೆಯಾಗಿ ಮೂರು ತಿಂಗಳು ಕಳೆದಿದ್ದ ಮನೆಗೆ ಅಭಿಷೇಕ್ ಮೃತದೇಹವನ್ನು ತೆಗೆದುಕೊಂಡು ಹೋಗಲಾಗಿದೆ. ರಾತ್ರಿ 9 ಗಂಟೆ ಸುಮಾರಿಗೆ ಅಭಿಷೇಕ್ ಮೃತದೇಹವನ್ನು ಮನೆಗೆ ತಂದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: ಆಸ್ತಿ ವಿಚಾರಕ್ಕೆ ಗಲಾಟೆ; ತಂದೆ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ

ಅಭಿಷೇಕ್ ಮೃತದೇಹದ ಮುಂದೆ ಎಲ್ಲರೂ ಕಣ್ಣೀರು ಹಾಕುತ್ತಿದ್ದಾಗ ಆಕೆಯ ಪತ್ನಿ ಅಂಜಲಿ ಅಪಾರ್ಟ್‌ಮೆಂಟ್‌ನ 7ನೇ ಮಹಡಿಗೆ ಹೋಗಿ ಕೆಳಗೆ ಹಾರಿದ್ದಾಳೆ. ಅಭಿಷೇಕ್ ಸಾವನ್ನಪ್ಪಿದ 24 ಗಂಟೆಯಲ್ಲೇ ಅಂಜಲಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾಳೆ. 3 ತಿಂಗಳ ಹಿಂದೆ ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಈಗ ಶೋಕ ಸಾಗರ ಆವರಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More