newsfirstkannada.com

10 ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಿಡಿಲು ಬಡಿದು ಸಾವು

Share :

Published May 3, 2024 at 11:28pm

    ನವವಿವಾಹಿತ ಸಾವು, ಕುಟುಂಬಸ್ಥರ ಆಕ್ರಂದನ ಹೇಳತೀರದು

    ಒಳ್ಳೆಯ ಜೀವನ ನಡೆಸಬೇಕು ಎನ್ನುವಷ್ಟರಲ್ಲಿ ವಿಧಿಯ ಆಟ

    ಮದುವೆಯಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದ ನವ ವಿವಾಹಿತ

ಮಂಗಳೂರು: 10 ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದಲ್ಲಿ ನಡೆದಿದೆ.

ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಸಾವನ್ನಪ್ಪಿದ ದುರ್ದೈವಿ. ಸೋಮಸುಂದರ್ 10 ದಿನಗಳ ಹಿಂದಷ್ಟೇ ಮದುವೆಯಾಗಿ ಹೊಸ ಜೀವನಕ್ಕೆ ಕಾಲಿರಿಸಿದ್ದನು. ಸಂಜೆ ಸಮಯದಲ್ಲಿ ಮಳೆ ಸುರಿಯುತ್ತಿದ್ದ ಕಾರಣ ಅಂಗಳದಲ್ಲಿದ್ದ ಅಡಿಕೆಗಳನ್ನು ರಾಶಿ ಮಾಡುತ್ತಿದ್ದನು.

ಇದನ್ನೂ ಓದಿ: ಬಿಸಿಲಿನ ತಾಪಮಾನ; ರಾಯಚೂರನ್ನೇ ಸೈಡ್ ಮಾಡಿದ ಮಂಡ್ಯ.. ಎಷ್ಟು ಡಿಗ್ರಿ ಸೆಲ್ಸಿಯಸ್​ ದಾಖಲಾಯ್ತು?

ಇದೇ ವೇಳೆ ನವವಿವಾಹಿತನಿಗೆ ಭಯಾನಕವಾಗಿ ಸಿಡಿಲು ಬಡಿದಿದೆ. ತಕ್ಷಣ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ವ್ಯಕ್ತಿ ಮೃತಪಟ್ಟಿದ್ದಾನೆ. ಇದರಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

10 ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಿಡಿಲು ಬಡಿದು ಸಾವು

https://newsfirstlive.com/wp-content/uploads/2024/05/MNG_DIED.jpg

    ನವವಿವಾಹಿತ ಸಾವು, ಕುಟುಂಬಸ್ಥರ ಆಕ್ರಂದನ ಹೇಳತೀರದು

    ಒಳ್ಳೆಯ ಜೀವನ ನಡೆಸಬೇಕು ಎನ್ನುವಷ್ಟರಲ್ಲಿ ವಿಧಿಯ ಆಟ

    ಮದುವೆಯಾಗಿ ಹೊಸ ಜೀವನಕ್ಕೆ ಕಾಲಿಟ್ಟಿದ್ದ ನವ ವಿವಾಹಿತ

ಮಂಗಳೂರು: 10 ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಿಡಿಲು ಬಡಿದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದಲ್ಲಿ ನಡೆದಿದೆ.

ಸುಬ್ರಹ್ಮಣ್ಯ ಗ್ರಾಮದ ಪರ್ವತಮುಖಿ ನಿವಾಸಿ ಸೋಮಸುಂದರ್ (34) ಸಾವನ್ನಪ್ಪಿದ ದುರ್ದೈವಿ. ಸೋಮಸುಂದರ್ 10 ದಿನಗಳ ಹಿಂದಷ್ಟೇ ಮದುವೆಯಾಗಿ ಹೊಸ ಜೀವನಕ್ಕೆ ಕಾಲಿರಿಸಿದ್ದನು. ಸಂಜೆ ಸಮಯದಲ್ಲಿ ಮಳೆ ಸುರಿಯುತ್ತಿದ್ದ ಕಾರಣ ಅಂಗಳದಲ್ಲಿದ್ದ ಅಡಿಕೆಗಳನ್ನು ರಾಶಿ ಮಾಡುತ್ತಿದ್ದನು.

ಇದನ್ನೂ ಓದಿ: ಬಿಸಿಲಿನ ತಾಪಮಾನ; ರಾಯಚೂರನ್ನೇ ಸೈಡ್ ಮಾಡಿದ ಮಂಡ್ಯ.. ಎಷ್ಟು ಡಿಗ್ರಿ ಸೆಲ್ಸಿಯಸ್​ ದಾಖಲಾಯ್ತು?

ಇದೇ ವೇಳೆ ನವವಿವಾಹಿತನಿಗೆ ಭಯಾನಕವಾಗಿ ಸಿಡಿಲು ಬಡಿದಿದೆ. ತಕ್ಷಣ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ವ್ಯಕ್ತಿ ಮೃತಪಟ್ಟಿದ್ದಾನೆ. ಇದರಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More