newsfirstkannada.com

ಆಟ ಆಡುತ್ತಿದ್ದ ಮಗು ಮೇಲೆ ಶಾಲಾ ಬಸ್​ ಹತ್ತಿಸಿದ ಹಂತಕ.. ಸ್ಥಳದಲ್ಲೇ ಸಾವು

Share :

Published January 31, 2024 at 10:16pm

Update January 31, 2024 at 10:30pm

    ಕಲಬುರಗಿ ನಗರದ ಸಂಗಮೇಶ್ವರ ಕಾಲೋನಿಯಲ್ಲಿ ನಡೆದ ಘಟನೆ

    ಉದ್ರಿಕ್ತರಿಂದ ಬಸ್​​ ಮೇಲೆ ಕಲ್ಲು ತೂರಾಟ, ಗಾಜು ಫುಲ್​ ಪುಡಿ ಪುಡಿ

    ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ

ಕಲಬುರಗಿ: ಮನೆ‌ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಶಾಲಾ ಬಸ್ ಹರಿದು ಹೋದ ಘಟನೆ ನಗರದ ಸಂಗಮೇಶ್ವರ ಕಾಲೋನಿಯಲ್ಲಿ ನಡೆದಿದೆ. ಮನೋಜ್ (2) ಸ್ಥಳದಲ್ಲೆ ಮೃತಪಟ್ಟ ಬಾಲಕ.

ಮನೆ‌ ಮುಂದೆ ಮಗುವಿನ ಮೇಲೆ ಚಾಲಕ ಬಸ್​​ ಹರಿಸಿದ್ದಾರೆ. ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಬಳಿಕ ವಾಹನ ಬಿಟ್ಟು ಶಾಲಾ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಇನ್ನೂ ಮಗುವನ್ನು ಕಳೆದುಕೊಂಡ ದುಃಖದಲ್ಲಿ ಕುಟುಂಬಸ್ಥರು ಬಸ್ಸಿನ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ. ಪರಿಣಾಮ ಬಸ್ಸಿನ ಗಾಜು ಪುಡಿ ಪುಡಿಯಾಗಿದೆ.

ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಳಿಕ ಶಾಲಾ ವಾಹನವನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ವಶಪಡಿಸಿಕೊಂಡ ಬಸ್​​ ನ್ಯಾಶನಲ್ ಪಬ್ಲಿಕ್ ಶಾಲೆಗೆ ಸೇರಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಆಟ ಆಡುತ್ತಿದ್ದ ಮಗು ಮೇಲೆ ಶಾಲಾ ಬಸ್​ ಹತ್ತಿಸಿದ ಹಂತಕ.. ಸ್ಥಳದಲ್ಲೇ ಸಾವು

https://newsfirstlive.com/wp-content/uploads/2024/01/death-2024-01-31T195345.306.jpg

    ಕಲಬುರಗಿ ನಗರದ ಸಂಗಮೇಶ್ವರ ಕಾಲೋನಿಯಲ್ಲಿ ನಡೆದ ಘಟನೆ

    ಉದ್ರಿಕ್ತರಿಂದ ಬಸ್​​ ಮೇಲೆ ಕಲ್ಲು ತೂರಾಟ, ಗಾಜು ಫುಲ್​ ಪುಡಿ ಪುಡಿ

    ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ

ಕಲಬುರಗಿ: ಮನೆ‌ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಶಾಲಾ ಬಸ್ ಹರಿದು ಹೋದ ಘಟನೆ ನಗರದ ಸಂಗಮೇಶ್ವರ ಕಾಲೋನಿಯಲ್ಲಿ ನಡೆದಿದೆ. ಮನೋಜ್ (2) ಸ್ಥಳದಲ್ಲೆ ಮೃತಪಟ್ಟ ಬಾಲಕ.

ಮನೆ‌ ಮುಂದೆ ಮಗುವಿನ ಮೇಲೆ ಚಾಲಕ ಬಸ್​​ ಹರಿಸಿದ್ದಾರೆ. ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಬಳಿಕ ವಾಹನ ಬಿಟ್ಟು ಶಾಲಾ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಇನ್ನೂ ಮಗುವನ್ನು ಕಳೆದುಕೊಂಡ ದುಃಖದಲ್ಲಿ ಕುಟುಂಬಸ್ಥರು ಬಸ್ಸಿನ ಮೇಲೆ ಕಲ್ಲು ಎತ್ತಿ ಹಾಕಿದ್ದಾರೆ. ಪರಿಣಾಮ ಬಸ್ಸಿನ ಗಾಜು ಪುಡಿ ಪುಡಿಯಾಗಿದೆ.

ಈ ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬಳಿಕ ಶಾಲಾ ವಾಹನವನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಪೊಲೀಸರು ವಶಪಡಿಸಿಕೊಂಡ ಬಸ್​​ ನ್ಯಾಶನಲ್ ಪಬ್ಲಿಕ್ ಶಾಲೆಗೆ ಸೇರಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More