/newsfirstlive-kannada/media/post_attachments/wp-content/uploads/2025/04/rcr-accident.jpg)
ರಾಯಚೂರು: ಕುರಿ ಖರೀದಿಗೆ ಹೊರಟ್ಟಿದ್ದ ಬೊಲೆರೋ ಪಿಕಪ್ ವಾಹನ ಹಳ್ಳದ ಸೇತುವೆಗೆ ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ದೇವದುರ್ಗ ತಾಲೂಕಿನ ಅಮರಾಪುರ ಕ್ರಾಸ್ ಬಳಿ ನಡೆದಿದೆ.
ಇದನ್ನೂ ಓದಿ:50 ಕೋಟಿ ರೂಪಾಯಿ ನಾಯಿ ಮಾಲೀಕನಿಗೆ ಬಿಗ್ ಶಾಕ್.. ಲಾಕ್ ಮಾಡಿದ ED; ಅಸಲಿಗೆ ಏನಾಯಿತು?
ನಾಗರಾಜ್, ಸೋಮ, ನಾಗಭೂಷಣ, ಮುರಳಿ ಮೃತ ದುರ್ದೈಗಳಾಗಿದ್ದಾರೆ. ಮೃತ ನಾಲ್ವರು ಸಹ ತೆಲಂಗಾಣದ ಹಿಂದೂಪುರದವರು. ತೆಲಂಗಾಣದ ಹಿಂದೂಪುರದಿಂದ ಶಹಾಪೂರ ಸಂತೆಗೆ ಹೊರಟ್ಟಿದ್ದ ವೇಳೆ ಈ ದುರ್ಘಟನೆ ನಡೆದಿದೆ.
ಈ ವಿಚಾರ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಗಬ್ಬೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲದೇ ಈ ಘಟನೆ ಸಂಬಂಧ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ