newsfirstkannada.com

VIDEO: ಐಸ್‌ಕ್ರೀಂ ತಿನ್ನುತ್ತಿದ್ದ ಬಾಲಕನ ಮೇಲೆ ಹರಿದ ವಾಟರ್ ಟ್ಯಾಂಕರ್; ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

Share :

Published June 7, 2023 at 9:53am

    ಅಣ್ಣನ ಜೊತೆ ಐಸ್‌ಕ್ರೀಂ ತರಲು ಹೋದ ಭುವನ್

    ಬಾಲಕನ ಪಾಲಿಗೆ ಯಮನಾದ ವಾಟರ್ ಟ್ಯಾಂಕರ್

    ಅಪಘಾತದ ಬಳಿಕ ಟ್ರ್ಯಾಕ್ಟರ್‌ ಬಿಟ್ಟು ಚಾಲಕ ಪರಾರಿ

 

ಆನೇಕಲ್: ವಾಟರ್ ಟ್ಯಾಂಕರ್‌ ಚಾಲಕನ ನಿರ್ಲಕ್ಷ್ಯಕ್ಕೆ 4 ವರ್ಷದ ಮಗು ಬಲಿಯಾಗಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಸಿ ಕೆ ಪಾಳ್ಯದಲ್ಲಿ ನಡೆದಿದೆ. ವಾಟರ್ ಟ್ಯಾಂಕರ್ ಚಕ್ರಕ್ಕೆ ಸಿಲುಕಿದ ಬಾಲಕ ಭುವನ್ ಸಾವನ್ನಪ್ಪಿದ್ರೆ, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

4 ವರ್ಷದ ಭುವನ್ ತನ್ನ ಅಣ್ಣನ ಜೊತೆ ಬೇಕರಿಯಲ್ಲಿ ಐಸ್‌ಕ್ರೀಮ್ ತೆಗೆದುಕೊಂಡು ಬರುವಾಗ ಈ ಘಟನೆ ನಡೆದಿದೆ. ವಾಟರ್ ಟ್ಯಾಂಕರ್ ಚಾಲಕ ಕುಡಿದ ಮತ್ತಿನಲ್ಲಿ ಟ್ರ್ಯಾಕ್ಟರ್ ಓಡಿಸುತ್ತಿದ್ದ ಎನ್ನಲಾಗಿದೆ. ಅಪಘಾತದ ಬಳಿಕ ಕಿರಾತಕ ಚಾಲಕ ವಾಟರ್ ಟ್ಯಾಂಕರ್ ಬಿಟ್ಟು ಪರಾರಿಯಾಗಿದ್ದಾನೆ.

ಬಾಲಕನನ್ನು ಬಲಿ ಪಡೆದ ಟ್ರ್ಯಾಕ್ಟರ್‌ನ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಅಪಘಾತದ ನಿಜಕ್ಕೂ ಭಯಾನಕವಾಗಿದ್ದು, ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೇಕಲ್ ಸಮೀಪ ವಾಟರ್ ಟ್ಯಾಂಕರ್‌ಗಳ ಹಾವಳಿ ಮಿತಿ ಮೀರಿದ್ದು, ಬಹಳಷ್ಟು ದೂರುಗಳು ಕೇಳಿ ಬಂದಿವೆ.

VIDEO: ಐಸ್‌ಕ್ರೀಂ ತಿನ್ನುತ್ತಿದ್ದ ಬಾಲಕನ ಮೇಲೆ ಹರಿದ ವಾಟರ್ ಟ್ಯಾಂಕರ್; ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ

https://newsfirstlive.com/wp-content/uploads/2023/06/Tractor.jpg

    ಅಣ್ಣನ ಜೊತೆ ಐಸ್‌ಕ್ರೀಂ ತರಲು ಹೋದ ಭುವನ್

    ಬಾಲಕನ ಪಾಲಿಗೆ ಯಮನಾದ ವಾಟರ್ ಟ್ಯಾಂಕರ್

    ಅಪಘಾತದ ಬಳಿಕ ಟ್ರ್ಯಾಕ್ಟರ್‌ ಬಿಟ್ಟು ಚಾಲಕ ಪರಾರಿ

 

ಆನೇಕಲ್: ವಾಟರ್ ಟ್ಯಾಂಕರ್‌ ಚಾಲಕನ ನಿರ್ಲಕ್ಷ್ಯಕ್ಕೆ 4 ವರ್ಷದ ಮಗು ಬಲಿಯಾಗಿರುವ ದಾರುಣ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಸಿ ಕೆ ಪಾಳ್ಯದಲ್ಲಿ ನಡೆದಿದೆ. ವಾಟರ್ ಟ್ಯಾಂಕರ್ ಚಕ್ರಕ್ಕೆ ಸಿಲುಕಿದ ಬಾಲಕ ಭುವನ್ ಸಾವನ್ನಪ್ಪಿದ್ರೆ, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

4 ವರ್ಷದ ಭುವನ್ ತನ್ನ ಅಣ್ಣನ ಜೊತೆ ಬೇಕರಿಯಲ್ಲಿ ಐಸ್‌ಕ್ರೀಮ್ ತೆಗೆದುಕೊಂಡು ಬರುವಾಗ ಈ ಘಟನೆ ನಡೆದಿದೆ. ವಾಟರ್ ಟ್ಯಾಂಕರ್ ಚಾಲಕ ಕುಡಿದ ಮತ್ತಿನಲ್ಲಿ ಟ್ರ್ಯಾಕ್ಟರ್ ಓಡಿಸುತ್ತಿದ್ದ ಎನ್ನಲಾಗಿದೆ. ಅಪಘಾತದ ಬಳಿಕ ಕಿರಾತಕ ಚಾಲಕ ವಾಟರ್ ಟ್ಯಾಂಕರ್ ಬಿಟ್ಟು ಪರಾರಿಯಾಗಿದ್ದಾನೆ.

ಬಾಲಕನನ್ನು ಬಲಿ ಪಡೆದ ಟ್ರ್ಯಾಕ್ಟರ್‌ನ ಅಪಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಅಪಘಾತದ ನಿಜಕ್ಕೂ ಭಯಾನಕವಾಗಿದ್ದು, ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆನೇಕಲ್ ಸಮೀಪ ವಾಟರ್ ಟ್ಯಾಂಕರ್‌ಗಳ ಹಾವಳಿ ಮಿತಿ ಮೀರಿದ್ದು, ಬಹಳಷ್ಟು ದೂರುಗಳು ಕೇಳಿ ಬಂದಿವೆ.

Load More