ಮಗಳು ಕಾಣೆಯಾಗಿದ್ದಕ್ಕೆ ಠಾಣೆಗೆ ದೂರು ನೀಡಿದ್ದ ತಂದೆ
ಅನೈತಿಕ ಸಂಬಂಧದ ಹಿನ್ನೆಲೆ ಮಹಿಳೆಯನ್ನ ಹತ್ಯೆ ಮಾಡಿದ್ರಾ?
ಇಬ್ಬರು ವ್ಯಕ್ತಿಗಳ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ
ಚಿಕ್ಕಬಳ್ಳಾಪುರ: 5 ದಿನಗಳ ಹಿಂದೆ ನಾಪತ್ತೆಯಾಗಿದ್ದೆ ಮಹಿಳೆಯ ಶವ ಪತ್ತೆಯಾಗಿದೆ. ಮಹಿಳೆಯ ಕುತ್ತಿಗೆಯನ್ನು ಬರ್ಬರವಾಗಿ ಕುಯ್ದು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಘಟನೆಯು ಚಿಕ್ಕಬಳ್ಳಾಪುರ ನಗರದ ಚಾಮರಾಜಪೇಟೆಯಲ್ಲಿ ನಡೆದಿದೆ.
ನಗರದ ವಾಪಸಂದ್ರದ ನಿವಾಸಿ ದೀಪಾ (35) ಕೊಲೆಯಾದ ಮಹಿಳೆ. ಸುಧಾಕರ್ ಮತ್ತು ಸುರೇಶ್ ಎನ್ನುವವರು ಕೊಲೆ ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ದೀಪಾ ಅವರು 5 ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈ ಸಂಬಂಧ ಮಹಿಳೆಯ ತಂದೆ ಸುಬ್ಬಾನಾಯ್ಡು ಠಾಣೆಯಲ್ಲಿ ದೂರು ನೀಡಿದ್ದರು. ಸದ್ಯ ಕಾಣೆಯಾಗಿದ್ದ ಮಹಿಳೆಯ ಶವ ಚಾಮರಾಜಪೇಟೆಯಲ್ಲಿ ಸುಧಾಕರ್ ಎನ್ನುವವರ ರೂಮ್ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಉಂಟು ಮಾಡಿದೆ.
ಮಹಿಳೆಯನ್ನು 5 ದಿನಗಳ ಹಿಂದೆಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಗಳು ಕಾಣೆಯಾಗಿದ್ದಕ್ಕೆ ಠಾಣೆಗೆ ದೂರು ನೀಡಿದ್ದ ತಂದೆ
ಅನೈತಿಕ ಸಂಬಂಧದ ಹಿನ್ನೆಲೆ ಮಹಿಳೆಯನ್ನ ಹತ್ಯೆ ಮಾಡಿದ್ರಾ?
ಇಬ್ಬರು ವ್ಯಕ್ತಿಗಳ ಮೇಲೆ ಅನುಮಾನ ವ್ಯಕ್ತಪಡಿಸಲಾಗಿದೆ
ಚಿಕ್ಕಬಳ್ಳಾಪುರ: 5 ದಿನಗಳ ಹಿಂದೆ ನಾಪತ್ತೆಯಾಗಿದ್ದೆ ಮಹಿಳೆಯ ಶವ ಪತ್ತೆಯಾಗಿದೆ. ಮಹಿಳೆಯ ಕುತ್ತಿಗೆಯನ್ನು ಬರ್ಬರವಾಗಿ ಕುಯ್ದು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಈ ಘಟನೆಯು ಚಿಕ್ಕಬಳ್ಳಾಪುರ ನಗರದ ಚಾಮರಾಜಪೇಟೆಯಲ್ಲಿ ನಡೆದಿದೆ.
ನಗರದ ವಾಪಸಂದ್ರದ ನಿವಾಸಿ ದೀಪಾ (35) ಕೊಲೆಯಾದ ಮಹಿಳೆ. ಸುಧಾಕರ್ ಮತ್ತು ಸುರೇಶ್ ಎನ್ನುವವರು ಕೊಲೆ ಮಾಡಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ. ದೀಪಾ ಅವರು 5 ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈ ಸಂಬಂಧ ಮಹಿಳೆಯ ತಂದೆ ಸುಬ್ಬಾನಾಯ್ಡು ಠಾಣೆಯಲ್ಲಿ ದೂರು ನೀಡಿದ್ದರು. ಸದ್ಯ ಕಾಣೆಯಾಗಿದ್ದ ಮಹಿಳೆಯ ಶವ ಚಾಮರಾಜಪೇಟೆಯಲ್ಲಿ ಸುಧಾಕರ್ ಎನ್ನುವವರ ರೂಮ್ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಹಲವು ಅನುಮಾನಗಳನ್ನು ಉಂಟು ಮಾಡಿದೆ.
ಮಹಿಳೆಯನ್ನು 5 ದಿನಗಳ ಹಿಂದೆಯೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಚಾಕುವಿನಿಂದ ಕತ್ತು ಸೀಳಿ ಬರ್ಬರವಾಗಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ