ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ
ಪೊಲೀಸ್ ಕಾನ್ಸ್ಟೇಬಲ್ಗಳನ್ನ ಅಮಾನತುಗೊಳಿಸಿ ಆದೇಶ..!
ಆದೇಶ ಹೊರಡಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ
ಮೈಸೂರು: ಪೊಲೀಸರ ಕಿರುಕುಳದಿಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಕೇಸ್ಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳನ್ನ ಅಮಾನತುಗೊಳಿಸಿದ್ದಾರೆ.
ಜಿಲ್ಲೆಯ ಬಿಳಿಗೆರೆ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ಗಳಾದ ನಂಜೇಶ್ ಮತ್ತು ಪ್ರಸನ್ನ ಕುಮಾರ್ ಅಮಾನತು. ನನಗೆ ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಯುವಕ ಆತ್ಮಹತ್ಯೆಗೂ ಮುನ್ನ ಹೇಳಿದ್ದನು. ಈ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯತೆ, ಬೇಜವಾಬ್ದಾರಿತನ ಹಾಗೂ ಕರ್ತವ್ಯ ಲೋಪವೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರು ಇಬ್ಬರು ಕಾನ್ಸ್ಟೇಬಲ್ಗಳನ್ನು ಅಮಾನತು ಮಾಡಿದ್ದಾರೆ.
ನವೆಂಬರ್ 12 ರಂದು ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದಲ್ಲಿ ಕಿರಣ್ ಕುಮಾರ್ ಎಂಬ ಯುವಕನನ್ನು ಪೊಲೀಸರು ಠಾಣೆಗೆ ಕರೆದೊಕೊಂಡು ಬಂದಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಯುವಕ ಮನೆಗೆ ಬಂದಿದ್ದ. ಬಳಿಕ ನವೆಂಬರ್ 13 ರಂದು ಪೆಟ್ರೋಲ್ ಅನ್ನು ತನ್ನ ಮೈ ಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು. ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ
ಪೊಲೀಸ್ ಕಾನ್ಸ್ಟೇಬಲ್ಗಳನ್ನ ಅಮಾನತುಗೊಳಿಸಿ ಆದೇಶ..!
ಆದೇಶ ಹೊರಡಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ
ಮೈಸೂರು: ಪೊಲೀಸರ ಕಿರುಕುಳದಿಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಕೇಸ್ಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಬ್ಬರು ಪೊಲೀಸ್ ಕಾನ್ಸ್ಟೇಬಲ್ಗಳನ್ನ ಅಮಾನತುಗೊಳಿಸಿದ್ದಾರೆ.
ಜಿಲ್ಲೆಯ ಬಿಳಿಗೆರೆ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ಗಳಾದ ನಂಜೇಶ್ ಮತ್ತು ಪ್ರಸನ್ನ ಕುಮಾರ್ ಅಮಾನತು. ನನಗೆ ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಯುವಕ ಆತ್ಮಹತ್ಯೆಗೂ ಮುನ್ನ ಹೇಳಿದ್ದನು. ಈ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿ ನಿರ್ಲಕ್ಷ್ಯತೆ, ಬೇಜವಾಬ್ದಾರಿತನ ಹಾಗೂ ಕರ್ತವ್ಯ ಲೋಪವೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರು ಇಬ್ಬರು ಕಾನ್ಸ್ಟೇಬಲ್ಗಳನ್ನು ಅಮಾನತು ಮಾಡಿದ್ದಾರೆ.
ನವೆಂಬರ್ 12 ರಂದು ನಂಜನಗೂಡು ತಾಲೂಕಿನ ನಗರ್ಲೆ ಗ್ರಾಮದಲ್ಲಿ ಕಿರಣ್ ಕುಮಾರ್ ಎಂಬ ಯುವಕನನ್ನು ಪೊಲೀಸರು ಠಾಣೆಗೆ ಕರೆದೊಕೊಂಡು ಬಂದಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಯುವಕ ಮನೆಗೆ ಬಂದಿದ್ದ. ಬಳಿಕ ನವೆಂಬರ್ 13 ರಂದು ಪೆಟ್ರೋಲ್ ಅನ್ನು ತನ್ನ ಮೈ ಮೇಲೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದನು. ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ