newsfirstkannada.com

ಶಾಲೆಯ ಮುಂಭಾಗವೇ ಯುವಕನ ಕತ್ತು ಕೊಯ್ದು ಕೊಲೆ.. ಇಷ್ಟಕ್ಕೆಲ್ಲಾ ಕಾರಣ ಅದೊಂದೇ..?

Share :

Published May 11, 2024 at 10:32am

    ನವೋದಯ ಶಾಲೆಯ ಮುಂಭಾಗವೇ ನಡೆದ ಹತ್ಯೆ

    ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್

    10ಕ್ಕೂ ಹೆಚ್ಚು ಯುವಕರಿಂದ ಅಟ್ಯಾಕ್​.. ಕುತ್ತಿಗೆ, ಎದೆಗೆ ಚಾಕುವಿನಿಂದ ಇರಿದು ಹತ್ಯೆ

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ನಡುರಸ್ತೆಯಲ್ಲಿ ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ನಡೆದಿದೆ. ಹೇಮಂತ್ ಕುಮಾರ್( 27) ಕೊಲೆಯಾದ ದುರ್ದೈವಿ.

ಹೇಮಂತ್ ಕುಮಾರ್ ಮೇಲೆ ಯುವಕರ ಗುಂಪೊಂದು ಏಕಾಏಕಿ ಅಟ್ಯಾಕ್ ಮಾಡಿದೆ. ಆತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಆರೋಪಿಗಳು ಕುತ್ತಿಗೆ, ಎದೆಗೆ ಚಾಕುವಿನಿಂದ ಇರಿದಿದ್ದಾರೆ.

ಇದನ್ನೂ ಓದಿ: ಮದುವೆ ಆಗಲು ನಿರಾಕರಿಸಿದ ಪ್ರಿಯಕರ.. ಮನನೊಂದು ನೇಣಿಗೆ ಶರಣಾದ ಯುವತಿ

ಮಿಟ್ಟೆ ಅಲಿಯಾಸ್ ನರಸಿಂಹಮೂರ್ತಿ ಗ್ಯಾಂಗ್ ನಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. 10 ಕ್ಕೂ ಹೆಚ್ಚು ಯುವಕರಿಂದ ಅಟ್ಯಾಕ್ ನಡೆದಿದೆ. ಕಿರಾತಕರು ಕೊಲೆ ಮಾಡಿ ರಸ್ತೆ ಬದಿಯಲ್ಲಿ ಎಸೆದು ಹೋಗಿದ್ದಾರೆ.

ಇದನ್ನೂ ಓದಿ: RCB: ಪ್ಲೇ ಆಫ್​ಗೆ ಹೋಗಲು ಆರ್​ಸಿಬಿಗಿರುವ ಕಠಿಣ ಸವಾಲುಗಳಿವು! ಇದರಲ್ಲಿ ಪಾಸ್​ ಆದ್ರೆ ‘ಕಪ್​ ನಮ್ದೇ’

ನಿನ್ನೆ ತಡ ರಾತ್ರಿ ನಡೆದಿರುವ ಘಟನೆ ಇದಾಗಿದ್ದು, ವಾಕಿಂಗ್ ಮಾಡುವ ವೇಳೆ ಹೇಮಂತ್ ಕುಮಾರ್ ಮೃತ ದೇಹ ಕಂಡು ಜನರು ಬೆಚ್ಚಿಬಿದ್ದಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೋಲೀಸರು ಬಲೆ ಬೀಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಶಾಲೆಯ ಮುಂಭಾಗವೇ ಯುವಕನ ಕತ್ತು ಕೊಯ್ದು ಕೊಲೆ.. ಇಷ್ಟಕ್ಕೆಲ್ಲಾ ಕಾರಣ ಅದೊಂದೇ..?

https://newsfirstlive.com/wp-content/uploads/2024/05/Doddaballapura.jpg

    ನವೋದಯ ಶಾಲೆಯ ಮುಂಭಾಗವೇ ನಡೆದ ಹತ್ಯೆ

    ಆರೋಪಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್

    10ಕ್ಕೂ ಹೆಚ್ಚು ಯುವಕರಿಂದ ಅಟ್ಯಾಕ್​.. ಕುತ್ತಿಗೆ, ಎದೆಗೆ ಚಾಕುವಿನಿಂದ ಇರಿದು ಹತ್ಯೆ

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ನಡುರಸ್ತೆಯಲ್ಲಿ ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ನಡೆದಿದೆ. ಹೇಮಂತ್ ಕುಮಾರ್( 27) ಕೊಲೆಯಾದ ದುರ್ದೈವಿ.

ಹೇಮಂತ್ ಕುಮಾರ್ ಮೇಲೆ ಯುವಕರ ಗುಂಪೊಂದು ಏಕಾಏಕಿ ಅಟ್ಯಾಕ್ ಮಾಡಿದೆ. ಆತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಆರೋಪಿಗಳು ಕುತ್ತಿಗೆ, ಎದೆಗೆ ಚಾಕುವಿನಿಂದ ಇರಿದಿದ್ದಾರೆ.

ಇದನ್ನೂ ಓದಿ: ಮದುವೆ ಆಗಲು ನಿರಾಕರಿಸಿದ ಪ್ರಿಯಕರ.. ಮನನೊಂದು ನೇಣಿಗೆ ಶರಣಾದ ಯುವತಿ

ಮಿಟ್ಟೆ ಅಲಿಯಾಸ್ ನರಸಿಂಹಮೂರ್ತಿ ಗ್ಯಾಂಗ್ ನಿಂದ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. 10 ಕ್ಕೂ ಹೆಚ್ಚು ಯುವಕರಿಂದ ಅಟ್ಯಾಕ್ ನಡೆದಿದೆ. ಕಿರಾತಕರು ಕೊಲೆ ಮಾಡಿ ರಸ್ತೆ ಬದಿಯಲ್ಲಿ ಎಸೆದು ಹೋಗಿದ್ದಾರೆ.

ಇದನ್ನೂ ಓದಿ: RCB: ಪ್ಲೇ ಆಫ್​ಗೆ ಹೋಗಲು ಆರ್​ಸಿಬಿಗಿರುವ ಕಠಿಣ ಸವಾಲುಗಳಿವು! ಇದರಲ್ಲಿ ಪಾಸ್​ ಆದ್ರೆ ‘ಕಪ್​ ನಮ್ದೇ’

ನಿನ್ನೆ ತಡ ರಾತ್ರಿ ನಡೆದಿರುವ ಘಟನೆ ಇದಾಗಿದ್ದು, ವಾಕಿಂಗ್ ಮಾಡುವ ವೇಳೆ ಹೇಮಂತ್ ಕುಮಾರ್ ಮೃತ ದೇಹ ಕಂಡು ಜನರು ಬೆಚ್ಚಿಬಿದ್ದಿದ್ದಾರೆ. ಆರೋಪಿಗಳ ಪತ್ತೆಗಾಗಿ ಪೋಲೀಸರು ಬಲೆ ಬೀಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More