newsfirstkannada.com

ಜಲಪಾತ ಕಂಡು ಸ್ನಾನಕ್ಕೆ ಇಳಿದ ಯುವಕ; ನೀರಿನಲ್ಲಿ ಮುಳುಗಿ ಸಾವು

Share :

Published February 5, 2024 at 8:03am

    ಮೂವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದ ಯುವಕ

    ಜಲಪಾತದಲ್ಲಿ ಸ್ನಾನಕ್ಕೆ ಇಳಿದಾಗ ನಡೆದ ದುರ್ಘಟನೆ

    ಇಲ್ಲಿಯವರೆಗೆ ಸುಮಾರು 24 ಮಂದಿ ಮೃತಪಟ್ಟಿದ್ದಾರೆ

ಕೊಡಗು: ಪ್ರವಾಸಕ್ಕೆಂದು ಬಂದ‌ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪಿರುವ ಘಟನೆ ಕೊಡಗು ಜಿಲ್ಲೆ ನಾಪೋಕ್ಲು ಸಮೀಪದ ಚೆಯ್ಯಂಡಾಣೆಯ ಚೇಲವಾರ ಫಾಲ್ಸ್‌ನಲ್ಲಿ ನಡೆದಿದೆ. ಕೇರಳದ ಮಟ್ಟನ್ನೂರು ನಿವಾಸಿ ಮಹಮ್ಮದ್ ಅಶ್ರಫ್ ಎಂಬುವವರ ಪುತ್ರ ರಾಶೀದ್ ಮೃತ ದುರ್ದೈವಿಯಾಗಿದ್ದಾನೆ.

ಮೂರು ಜನ ಸ್ನೇಹಿತರೊಂದಿಗೆ ಚೇಲಾವರ ಜಲಪಾತ ವೀಕ್ಷಣೆಗೆ ಬಂದಿದ್ದ ರಾಶೀದ್, ಜಲಪಾತದಲ್ಲಿ ಸ್ನಾನಕ್ಕೆ ಇಳಿದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಹಲವು ವರ್ಷಗಳಿಂದ ಈ ಜಲಪಾತದಲ್ಲಿ ಸುಮಾರು 24 ಮಂದಿ ಮೃತಪಟ್ಟಿದ್ದಾರೆ. ಜಲಪಾತದ ಮೃತ್ಯು ಕೂಪಕ್ಕೆ ಶಾಶ್ವತ ಪರಿಹಾರವನ್ನು ಮಾಡಬೇಕಾಗಿದೆ. ಇದಕ್ಕೆ ಜಿಲ್ಲಾಡಳಿತ ಹೆಚ್ಚಿನ ಹೊತ್ತು ಕೊಡಬೇಕಾಗಿದೆ ಎಂದು ಜನರು ಆಗ್ರಹಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಜಲಪಾತ ಕಂಡು ಸ್ನಾನಕ್ಕೆ ಇಳಿದ ಯುವಕ; ನೀರಿನಲ್ಲಿ ಮುಳುಗಿ ಸಾವು

https://newsfirstlive.com/wp-content/uploads/2024/02/chelavara-falls-kodagu.jpg

    ಮೂವರು ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದ ಯುವಕ

    ಜಲಪಾತದಲ್ಲಿ ಸ್ನಾನಕ್ಕೆ ಇಳಿದಾಗ ನಡೆದ ದುರ್ಘಟನೆ

    ಇಲ್ಲಿಯವರೆಗೆ ಸುಮಾರು 24 ಮಂದಿ ಮೃತಪಟ್ಟಿದ್ದಾರೆ

ಕೊಡಗು: ಪ್ರವಾಸಕ್ಕೆಂದು ಬಂದ‌ ಯುವಕ ನೀರಿನಲ್ಲಿ ಮುಳುಗಿ ಸಾವನ್ನಪಿರುವ ಘಟನೆ ಕೊಡಗು ಜಿಲ್ಲೆ ನಾಪೋಕ್ಲು ಸಮೀಪದ ಚೆಯ್ಯಂಡಾಣೆಯ ಚೇಲವಾರ ಫಾಲ್ಸ್‌ನಲ್ಲಿ ನಡೆದಿದೆ. ಕೇರಳದ ಮಟ್ಟನ್ನೂರು ನಿವಾಸಿ ಮಹಮ್ಮದ್ ಅಶ್ರಫ್ ಎಂಬುವವರ ಪುತ್ರ ರಾಶೀದ್ ಮೃತ ದುರ್ದೈವಿಯಾಗಿದ್ದಾನೆ.

ಮೂರು ಜನ ಸ್ನೇಹಿತರೊಂದಿಗೆ ಚೇಲಾವರ ಜಲಪಾತ ವೀಕ್ಷಣೆಗೆ ಬಂದಿದ್ದ ರಾಶೀದ್, ಜಲಪಾತದಲ್ಲಿ ಸ್ನಾನಕ್ಕೆ ಇಳಿದಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ಹಲವು ವರ್ಷಗಳಿಂದ ಈ ಜಲಪಾತದಲ್ಲಿ ಸುಮಾರು 24 ಮಂದಿ ಮೃತಪಟ್ಟಿದ್ದಾರೆ. ಜಲಪಾತದ ಮೃತ್ಯು ಕೂಪಕ್ಕೆ ಶಾಶ್ವತ ಪರಿಹಾರವನ್ನು ಮಾಡಬೇಕಾಗಿದೆ. ಇದಕ್ಕೆ ಜಿಲ್ಲಾಡಳಿತ ಹೆಚ್ಚಿನ ಹೊತ್ತು ಕೊಡಬೇಕಾಗಿದೆ ಎಂದು ಜನರು ಆಗ್ರಹಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More