/newsfirstlive-kannada/media/post_attachments/wp-content/uploads/2024/05/KLR_BOY_DIED.jpg)
ಕೋಲಾರ: ಕೆಟ್ಟು ನಿಂತಿದ್ದ ಟಿಪ್ಪರ್​​ಗೆ ಬೈಕ್​ವೊಂದು ಭಯಾನಕವಾಗಿ ಡಿಕ್ಕಿಯಾದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ಕೆಜಿಎಫ್ ತಾಲೂಕಿನ ನಾಗಶೆಟ್ಟಿಹಳ್ಳಿ ಬಳಿ ನಡೆದಿದೆ.
ತಾಲೂಕಿನ ಐಪಲ್ಲಿ ಗ್ರಾಮದ ಬಾಲಾಜಿ (22) ಮೃತ ಯುವಕ. ಕೆಲಸದ ನಿಮಿತ್ತ ತೆರಳುತ್ತಿದ್ದಾಗ ರಾತ್ರಿ ಮಳೆಯಲ್ಲಿ ಕೆಟ್ಟು ನಿಂತಿದ್ದ ಟಿಪ್ಪರ್​ಗೆ ಬೈಕ್ ಭೀಕರವಾಗಿ ಡಿಕ್ಕಿಯಾಗಿದೆ. ಇದರಿಂದಾಗಿ ಯುವಕನು ಗಂಭೀರವಾಗಿ ಗಾಯಗೊಂಡಿದ್ದನು. ತಕ್ಷಣ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಈ ಸಂಬಂಧ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us