newsfirstkannada.com

ಕೆಟ್ಟು ನಿಂತ ಟಿಪ್ಪರ್​ಗೆ ವೇಗವಾಗಿ ಬಂದು ಬೈಕ್ ಡಿಕ್ಕಿ​.. ಯುವಕ ಸಾವು

Share :

Published May 7, 2024 at 9:13am

    ಕೆಲಸದ ನಿಮಿತ್ತ ತೆರಳುವಾಗ ರಾತ್ರಿಯಲ್ಲಿ ನಡೆದ ಅಪಘಾತ

    ಬೈಕ್​ ಡಿಕ್ಕಿಯಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ಯುವಕ

    ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವು

ಕೋಲಾರ: ಕೆಟ್ಟು ನಿಂತಿದ್ದ ಟಿಪ್ಪರ್​​ಗೆ ಬೈಕ್​ವೊಂದು ಭಯಾನಕವಾಗಿ ಡಿಕ್ಕಿಯಾದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ಕೆಜಿಎಫ್ ತಾಲೂಕಿನ ನಾಗಶೆಟ್ಟಿಹಳ್ಳಿ ಬಳಿ ನಡೆದಿದೆ.

ತಾಲೂಕಿನ ಐಪಲ್ಲಿ ಗ್ರಾಮದ ಬಾಲಾಜಿ (22) ಮೃತ ಯುವಕ. ಕೆಲಸದ ನಿಮಿತ್ತ ತೆರಳುತ್ತಿದ್ದಾಗ ರಾತ್ರಿ ಮಳೆಯಲ್ಲಿ ಕೆಟ್ಟು ನಿಂತಿದ್ದ ಟಿಪ್ಪರ್​ಗೆ ಬೈಕ್ ಭೀಕರವಾಗಿ ಡಿಕ್ಕಿಯಾಗಿದೆ. ಇದರಿಂದಾಗಿ ಯುವಕನು ಗಂಭೀರವಾಗಿ ಗಾಯಗೊಂಡಿದ್ದನು. ತಕ್ಷಣ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಈ ಸಂಬಂಧ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕೆಟ್ಟು ನಿಂತ ಟಿಪ್ಪರ್​ಗೆ ವೇಗವಾಗಿ ಬಂದು ಬೈಕ್ ಡಿಕ್ಕಿ​.. ಯುವಕ ಸಾವು

https://newsfirstlive.com/wp-content/uploads/2024/05/KLR_BOY_DIED.jpg

    ಕೆಲಸದ ನಿಮಿತ್ತ ತೆರಳುವಾಗ ರಾತ್ರಿಯಲ್ಲಿ ನಡೆದ ಅಪಘಾತ

    ಬೈಕ್​ ಡಿಕ್ಕಿಯಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ಯುವಕ

    ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವು

ಕೋಲಾರ: ಕೆಟ್ಟು ನಿಂತಿದ್ದ ಟಿಪ್ಪರ್​​ಗೆ ಬೈಕ್​ವೊಂದು ಭಯಾನಕವಾಗಿ ಡಿಕ್ಕಿಯಾದ ಪರಿಣಾಮ ಯುವಕ ಸಾವನ್ನಪ್ಪಿರುವ ಘಟನೆ ಕೆಜಿಎಫ್ ತಾಲೂಕಿನ ನಾಗಶೆಟ್ಟಿಹಳ್ಳಿ ಬಳಿ ನಡೆದಿದೆ.

ತಾಲೂಕಿನ ಐಪಲ್ಲಿ ಗ್ರಾಮದ ಬಾಲಾಜಿ (22) ಮೃತ ಯುವಕ. ಕೆಲಸದ ನಿಮಿತ್ತ ತೆರಳುತ್ತಿದ್ದಾಗ ರಾತ್ರಿ ಮಳೆಯಲ್ಲಿ ಕೆಟ್ಟು ನಿಂತಿದ್ದ ಟಿಪ್ಪರ್​ಗೆ ಬೈಕ್ ಭೀಕರವಾಗಿ ಡಿಕ್ಕಿಯಾಗಿದೆ. ಇದರಿಂದಾಗಿ ಯುವಕನು ಗಂಭೀರವಾಗಿ ಗಾಯಗೊಂಡಿದ್ದನು. ತಕ್ಷಣ ಯುವಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಈ ಸಂಬಂಧ ಬೇತಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More