newsfirstkannada.com

ಅಂಬೇಡ್ಕರ್ ಜಯಂತಿ ಱಲಿ ವೇಳೆ ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ.. ಓರ್ವ ಸಾವು, ಮತ್ತೊಬ್ಬ ಗಂಭೀರ

Share :

Published April 15, 2024 at 8:29am

    ಪೊಲೀಸರ ತನಿಖೆ ನಂತರವೇ ಎಲ್ಲದಕ್ಕೂ ಉತ್ತರ ಸಿಗಲಿದೆ

    ಯುವಕರ ವೈಷಮ್ಯ, ಹುಡುಗಿ ವಿಚಾರವಾಗಿ ಹತ್ಯೆಯಾಯಿತಾ?

    ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಲಬುರಗಿ: ವೇಳೆ ಮಾರಕಾಸ್ತ್ರಗಳಿಂದ ಯುವಕನನ್ನ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿರುವ ಘಟನೆ ನಗರದ ರಾಷ್ಟ್ರಪತಿ ಚೌಕ್ ಬಳಿ ಈ ಘಟನೆ ನಡೆದಿದೆ

ಕಲಬುರಗಿಯ ಅಶೋಕ್ ನಗರ ಬಡಾವಣೆ ನಿವಾಸಿ 21 ವರ್ಷದ ಆಕಾಶ್ ಕೊಲೆಯಾದ ದುರ್ದೈವಿ. ಮತ್ತೋರ್ವ ಯುವಕನು ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯುವಕರ ಮಧ್ಯೆ ವೈಷಮ್ಯ ಅಥವಾ ಹುಡುಗಿ ವಿಚಾರವಾಗಿ ಈ ಕೊಲೆ ನಡೆದಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: 2013ರಲ್ಲಿ ಪಾಕ್​ ಜೈಲಿನಲ್ಲಿ ಭಾರತದ ರೈತನ ಕೊಲೆ; ಹತ್ಯೆಗೈದಿದ್ದ ಭೂಗತ ಪಾತಕಿ ಇಂದು ಅದೇ ಜೈಲಿನಲ್ಲಿ ಫಿನಿಶ್..!

ಆದರೆ ಕೊಲೆಗೆ ನಿಖರ ಕಾರಣ ಏನೆಂದು ಇನ್ನು ತಿಳಿದು ಬಂದಿಲ್ಲ. ಕೊಲೆ ಮಾಡಿ ಎಸ್ಕೇಪ್ ಆಗಿರುವ ದುಷ್ಕರ್ಮಿಗಳು ಯಾರೆಂದು ಪತ್ತೆ ಹಚ್ಚಬೇಕಾಗಿದೆ. ಹೀಗಾಗಿ ಪೊಲೀಸರ ತನಿಖೆ ನಂತರವೇ ಎಲ್ಲದಕ್ಕೂ ಉತ್ತರ ಸಿಗಲಿದೆ. ಈ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಅಂಬೇಡ್ಕರ್ ಜಯಂತಿ ಱಲಿ ವೇಳೆ ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ.. ಓರ್ವ ಸಾವು, ಮತ್ತೊಬ್ಬ ಗಂಭೀರ

https://newsfirstlive.com/wp-content/uploads/2024/04/KLB_DIED.jpg

    ಪೊಲೀಸರ ತನಿಖೆ ನಂತರವೇ ಎಲ್ಲದಕ್ಕೂ ಉತ್ತರ ಸಿಗಲಿದೆ

    ಯುವಕರ ವೈಷಮ್ಯ, ಹುಡುಗಿ ವಿಚಾರವಾಗಿ ಹತ್ಯೆಯಾಯಿತಾ?

    ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಕಲಬುರಗಿ: ವೇಳೆ ಮಾರಕಾಸ್ತ್ರಗಳಿಂದ ಯುವಕನನ್ನ ಕೊಚ್ಚಿ ಭೀಕರವಾಗಿ ಕೊಲೆ ಮಾಡಲಾಗಿರುವ ಘಟನೆ ನಗರದ ರಾಷ್ಟ್ರಪತಿ ಚೌಕ್ ಬಳಿ ಈ ಘಟನೆ ನಡೆದಿದೆ

ಕಲಬುರಗಿಯ ಅಶೋಕ್ ನಗರ ಬಡಾವಣೆ ನಿವಾಸಿ 21 ವರ್ಷದ ಆಕಾಶ್ ಕೊಲೆಯಾದ ದುರ್ದೈವಿ. ಮತ್ತೋರ್ವ ಯುವಕನು ದಾಳಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯುವಕರ ಮಧ್ಯೆ ವೈಷಮ್ಯ ಅಥವಾ ಹುಡುಗಿ ವಿಚಾರವಾಗಿ ಈ ಕೊಲೆ ನಡೆದಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ: 2013ರಲ್ಲಿ ಪಾಕ್​ ಜೈಲಿನಲ್ಲಿ ಭಾರತದ ರೈತನ ಕೊಲೆ; ಹತ್ಯೆಗೈದಿದ್ದ ಭೂಗತ ಪಾತಕಿ ಇಂದು ಅದೇ ಜೈಲಿನಲ್ಲಿ ಫಿನಿಶ್..!

ಆದರೆ ಕೊಲೆಗೆ ನಿಖರ ಕಾರಣ ಏನೆಂದು ಇನ್ನು ತಿಳಿದು ಬಂದಿಲ್ಲ. ಕೊಲೆ ಮಾಡಿ ಎಸ್ಕೇಪ್ ಆಗಿರುವ ದುಷ್ಕರ್ಮಿಗಳು ಯಾರೆಂದು ಪತ್ತೆ ಹಚ್ಚಬೇಕಾಗಿದೆ. ಹೀಗಾಗಿ ಪೊಲೀಸರ ತನಿಖೆ ನಂತರವೇ ಎಲ್ಲದಕ್ಕೂ ಉತ್ತರ ಸಿಗಲಿದೆ. ಈ ಸಂಬಂಧ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More