newsfirstkannada.com

ಸರ್ಕಾರಿ ಬಸ್​ ಮತ್ತು ಸ್ಕೂಟರ್​ ನಡುವೆ ಅಪಘಾತ; ಮಹಿಳೆ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ

Share :

Published January 30, 2024 at 12:45pm

Update January 30, 2024 at 12:46pm

    ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಡೆದ ಭೀಕರ ಅಪಘಾತ

    ಸರ್ಕಾರಿ ಬಸ್​ಗೆ ಡಿಕ್ಕಿ ಹೊಡೆದ ಸ್ಕೂಟರ್; ಮಹಿಳೆ ಸಾವು​

    ಬಸ್ಸಿನಡಿ ಸಿಲುಕಿ ನಜ್ಜುಗುಜ್ಜಾಗಿದ ದ್ವಿಚಕ್ರ ವಾಹನ

ಕೊಡಗು: ಸರ್ಕಾರಿ ಬಸ್ ಮತ್ತು ಸ್ಕೂಟರ್​ ನಡುವೆ ಅಪಘಾತ ಸಂಭವಿಸಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 275ರ ಗುಡ್ಡೆಹೊಸೂರು ಬಳಿ ನಡೆದಿದೆ. ಸಿದ್ದಾಪುರ ಗ್ರಾಮದ ಲಲಿತಾ (53) ಮೃತಪಟ್ಟಿದ್ದು, ಸ್ಕೂಟರ್​ ಚಲಾಯಿಸುತ್ತಿದ್ದ ಸಿಂಚನಾ ಎಂಬ ಯುವತಿ ಸ್ಥಿತಿ ಗಂಭೀರವಾಗಿದೆ.

ಕೆಎಸ್ಆರ್‌ಟಿಸಿ ಬಸ್ ಮಡಿಕೇರಿಯಿಂದ ಮೈಸೂರಿಗೆ ಬರುತ್ತಿತ್ತು. ಅತ್ತೂರು ಕಡೆಯಿಂದ ಗುಡ್ಡೆಹೊಸೂರು ಕಡೆಗೆ ಬರುತ್ತಿದ್ದ ಸ್ಕೂಟಿ ಚಲಾಯಿಸಿಕೊಂಡು ಇಬ್ಬರು ಬರುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಮೃತ ಮಹಿಳೆ ಪರ್ಪಲ್ ಪಾಮ್ ರೆಸಾರ್ಟ್ ಸಿಬ್ಬಂದಿ ಎಂದು ತಿಳಿದುಬಂದಿದೆ.

ಇನ್ನು ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಬಸ್ಸಿನಡಿ ಸಿಲುಕಿ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕುಶಾಲನಗರ ಟ್ರಾಫಿಕ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಸರ್ಕಾರಿ ಬಸ್​ ಮತ್ತು ಸ್ಕೂಟರ್​ ನಡುವೆ ಅಪಘಾತ; ಮಹಿಳೆ ಸಾವು, ಮತ್ತೊಬ್ಬರ ಸ್ಥಿತಿ ಗಂಭೀರ

https://newsfirstlive.com/wp-content/uploads/2024/01/kodagu-6.jpg

    ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಡೆದ ಭೀಕರ ಅಪಘಾತ

    ಸರ್ಕಾರಿ ಬಸ್​ಗೆ ಡಿಕ್ಕಿ ಹೊಡೆದ ಸ್ಕೂಟರ್; ಮಹಿಳೆ ಸಾವು​

    ಬಸ್ಸಿನಡಿ ಸಿಲುಕಿ ನಜ್ಜುಗುಜ್ಜಾಗಿದ ದ್ವಿಚಕ್ರ ವಾಹನ

ಕೊಡಗು: ಸರ್ಕಾರಿ ಬಸ್ ಮತ್ತು ಸ್ಕೂಟರ್​ ನಡುವೆ ಅಪಘಾತ ಸಂಭವಿಸಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 275ರ ಗುಡ್ಡೆಹೊಸೂರು ಬಳಿ ನಡೆದಿದೆ. ಸಿದ್ದಾಪುರ ಗ್ರಾಮದ ಲಲಿತಾ (53) ಮೃತಪಟ್ಟಿದ್ದು, ಸ್ಕೂಟರ್​ ಚಲಾಯಿಸುತ್ತಿದ್ದ ಸಿಂಚನಾ ಎಂಬ ಯುವತಿ ಸ್ಥಿತಿ ಗಂಭೀರವಾಗಿದೆ.

ಕೆಎಸ್ಆರ್‌ಟಿಸಿ ಬಸ್ ಮಡಿಕೇರಿಯಿಂದ ಮೈಸೂರಿಗೆ ಬರುತ್ತಿತ್ತು. ಅತ್ತೂರು ಕಡೆಯಿಂದ ಗುಡ್ಡೆಹೊಸೂರು ಕಡೆಗೆ ಬರುತ್ತಿದ್ದ ಸ್ಕೂಟಿ ಚಲಾಯಿಸಿಕೊಂಡು ಇಬ್ಬರು ಬರುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಮೃತ ಮಹಿಳೆ ಪರ್ಪಲ್ ಪಾಮ್ ರೆಸಾರ್ಟ್ ಸಿಬ್ಬಂದಿ ಎಂದು ತಿಳಿದುಬಂದಿದೆ.

ಇನ್ನು ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಬಸ್ಸಿನಡಿ ಸಿಲುಕಿ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕುಶಾಲನಗರ ಟ್ರಾಫಿಕ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More