ಮೈಸೂರಿನಿಂದ ಬೆಂಗಳೂರಿಗೆ ತೆರಳುವಾಗ ಅಪಘಾತ
ಮದುವೆ ಮುಗಿಸಿಕೊಂಡು ವಾಪಾಸ್ಸಾಗುತ್ತಿದ್ದ ಕುಟುಂಬ
ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಟಿಟಿ ವಾಹನ
ರಾಮನಗರ: ಲಾರಿ ಮತ್ತು ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣದ ಚಾಮುಂಡೇಶ್ವರಿ ವೈದ್ಯಕೀಯ ಕಾಲೇಜು ಬಳಿ ನಡೆದಿದೆ. ಟಿಟಿ ವಾಹನದಲ್ಲಿದ್ದ ಉಳಿದ ಆರು ಮಂದಿಗೆ ಗಾಯವಾಗಿದೆ. ಅದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.
ಮೈಸೂರಿನಿಂದ ಬೆಂಗಳೂರಿಗೆ ತೆರಳುವಾಗ ಈ ಘಟನೆ ನಡೆದಿದೆ. ಸೋಮಲಿಂಗಪ್ಪ (70), ಶಿವಲಿಂಗಪ್ಪ (66), ರಾಜೇಶ್ವರಿ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮದುವೆ ಮುಗಿಸಿಕೊಂಡು ಕುಟುಂಬ ಸಮೇತ ವಾಪಸ್ ಹೋಗುವಾಗ ಅಪಘಾತ ಸಂಭವಿಸಿದೆ. ಟಿಟಿ ವಾಹನ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ಮೃತ ದೇಹಗಳು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮೈಸೂರಿನಿಂದ ಬೆಂಗಳೂರಿಗೆ ತೆರಳುವಾಗ ಅಪಘಾತ
ಮದುವೆ ಮುಗಿಸಿಕೊಂಡು ವಾಪಾಸ್ಸಾಗುತ್ತಿದ್ದ ಕುಟುಂಬ
ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಟಿಟಿ ವಾಹನ
ರಾಮನಗರ: ಲಾರಿ ಮತ್ತು ಟಿಟಿ ವಾಹನ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ ಘಟನೆ ಚನ್ನಪಟ್ಟಣ ತಾಲ್ಲೂಕಿನ ಬೈರಾಪಟ್ಟಣದ ಚಾಮುಂಡೇಶ್ವರಿ ವೈದ್ಯಕೀಯ ಕಾಲೇಜು ಬಳಿ ನಡೆದಿದೆ. ಟಿಟಿ ವಾಹನದಲ್ಲಿದ್ದ ಉಳಿದ ಆರು ಮಂದಿಗೆ ಗಾಯವಾಗಿದೆ. ಅದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ.
ಮೈಸೂರಿನಿಂದ ಬೆಂಗಳೂರಿಗೆ ತೆರಳುವಾಗ ಈ ಘಟನೆ ನಡೆದಿದೆ. ಸೋಮಲಿಂಗಪ್ಪ (70), ಶಿವಲಿಂಗಪ್ಪ (66), ರಾಜೇಶ್ವರಿ ಸೇರಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮದುವೆ ಮುಗಿಸಿಕೊಂಡು ಕುಟುಂಬ ಸಮೇತ ವಾಪಸ್ ಹೋಗುವಾಗ ಅಪಘಾತ ಸಂಭವಿಸಿದೆ. ಟಿಟಿ ವಾಹನ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ಮೃತ ದೇಹಗಳು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚನ್ನಪಟ್ಟಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ