/newsfirstlive-kannada/media/post_attachments/wp-content/uploads/2025/03/KLR-ACCIDENT-1.jpg)
ಕೋಲಾರ: ಕಾರು ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಜೀವ ಕಳೆದುಕೊಂಡ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕು ಕುಪ್ಪನಹಳ್ಳಿ ಬಳಿ ನಡೆದಿದೆ.
ನೂತನ ಚೆನ್ನೈ-ಬೆಂಗಳೂರು ಎಕ್ಸ್ಪ್ರೆಸ್ ಹೈವೇಯಲ್ಲಿ ಅಪಘಾತ ನಡೆದಿದೆ. ಕಾರಿನಲ್ಲಿದ್ದ ಮಹೇಶ್ (45) , ಉದ್ವಿತ್ (2), ರತ್ನಮ್ಮ (60) ಹಾಗೂ ಬೈಕ್ ಸವಾರ ಪ್ರಾಣ ಬಿಟ್ಟಿದ್ದಾರೆ. ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ.
ಇದನ್ನೂ ಓದಿ: ಕರಾವಳಿಗೆ ಮತ್ತೆ ಉಷ್ಣ ಅಲೆ ಎಚ್ಚರಿಕೆ; ಕಾರವಾರದಲ್ಲಿ ಗರಿಷ್ಠ ತಾಪಮಾನ ದಾಖಲು
/newsfirstlive-kannada/media/post_attachments/wp-content/uploads/2025/03/KLR-ACCIDENT.jpg)
ಸುಶ್ಮಿತಾ, ವಿರುತ್, ಸುಜಾತ, ಸುನಿಲ್​ಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೆಜಿಎಫ್ ತಾಲೂಕಿನ ಕಮ್ಮಸಂದ್ರ ಗ್ರಾಮದ ಇವರು, ಬೆಂಗಳೂರಿನಿಂದ ಗ್ರಾಮಕ್ಕೆ ವಾಪಸ್ ಆಗ್ತಿದ್ದಾಗ ದುರ್ಘಟನೆ ನಡೆದಿದೆ. ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us