newsfirstkannada.com

ಕರ್ನಾಟಕದಿಂದ ತಿರುಪತಿಗೆ ಹೊರಟಿದ್ದ ಕಾರು ಭೀಕರ ಅಪಘಾತ.. ನಾಲ್ವರು ಸಾವು

Share :

Published May 24, 2024 at 9:00am

    6 ಭಕ್ತರಿಗೆ ಗಂಭೀರ ಗಾಯ, ಆಸ್ಪತ್ರೆಯಲ್ಲಿ ಚಿಕಿತ್ಸೆ

    ಎರಡು ಕುಟುಂಬಗಳು ಸೇರಿ ತಿರುಪತಿಗೆ ಹೊರಟಿದ್ದರು

    ದುರ್ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ

ಹಾವೇರಿ: ತಿರುಪತಿಗೆ ಹೋಗುತ್ತಿದ್ದ ಕಾರು ನಸುಕಿನ ಜಾವ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿ ಆರು ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಲಗೇರಿ ಬೈಪಾಸ್ ಬಳಿ ನಡೆದಿದೆ.

ಹಾವೇರಿಯ ಸಮಗಂಡಿ ಮತ್ತು ಬಾರ್ಕಿ ಎಂಬ 2 ಕುಟುಂಬಗಳು ದೇವರ ದರ್ಶನಕ್ಕೆಂದು ತಿರುಪತಿಗೆ ತೆರಳುತ್ತಿದ್ದರು. ಸುರೇಶ ವೀರಪ್ಪ ಜಾಡಿ, ಐಶ್ವರ್ಯ ಈರಪ್ಪ ಬಾರ್ಕಿ, ಚೇತನಾ ಪ್ರಭುರಾಜ ಸಮಗಂಡಿ, ಪವಿತ್ರಾ ಪ್ರಭುರಾಜ ಸಮಗಂಡಿ ಮೃತ ದುರ್ದೈವಿಗಳು.

ಇದನ್ನೂ ಓದಿ:ಆರ್​ಸಿಬಿಯಲ್ಲಿ ಕಾರ್ತಿಕ್​​ಗೆ ಮಹತ್ವದ ಜವಾಬ್ದಾರಿ..? ಕುತೂಹಲ ಮೂಡಿಸಿದ RCB ಮುಖ್ಯ ಕೋಚ್ ನೀಡಿದ ಹೇಳಿಕೆ

ಚನ್ನವೀರಪ್ಪ ಜಾಡಿ, ಸಾವಿತ್ರ ಜಾಡಿ, ವಿಕಾಶ ಹೊನ್ನಪ್ಪ ಬಾರ್ಕಿ, ಹೊ‌ನ್ನಪ್ಪ ನೀಲಪ್ಪ ಬಾರ್ಕಿ, ಪ್ರಭುರಾಜ ಈರಪ್ಪ ಸಮಗಂಡಿ, ಗೀತಾ ಹೊನ್ನಪ್ಪ ಬಾರ್ಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು FSL ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಣೇಬೆನ್ನೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ:ಮಳೆಗೆ 7 ಬಲಿ.. ಐದು ಜಿಲ್ಲೆಗಳಿಗೆ ರೆಡ್​​ ಅಲರ್ಟ್​.. ಮುಂದಿನ 5 ದಿನಗಳ ಕಾಲ ಮಳೆ ಮಳೆ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಕರ್ನಾಟಕದಿಂದ ತಿರುಪತಿಗೆ ಹೊರಟಿದ್ದ ಕಾರು ಭೀಕರ ಅಪಘಾತ.. ನಾಲ್ವರು ಸಾವು

https://newsfirstlive.com/wp-content/uploads/2024/05/HVR-ACCIDENT.jpg

    6 ಭಕ್ತರಿಗೆ ಗಂಭೀರ ಗಾಯ, ಆಸ್ಪತ್ರೆಯಲ್ಲಿ ಚಿಕಿತ್ಸೆ

    ಎರಡು ಕುಟುಂಬಗಳು ಸೇರಿ ತಿರುಪತಿಗೆ ಹೊರಟಿದ್ದರು

    ದುರ್ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ

ಹಾವೇರಿ: ತಿರುಪತಿಗೆ ಹೋಗುತ್ತಿದ್ದ ಕಾರು ನಸುಕಿನ ಜಾವ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲಿ ಸಾವನ್ನಪ್ಪಿ ಆರು ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಹಲಗೇರಿ ಬೈಪಾಸ್ ಬಳಿ ನಡೆದಿದೆ.

ಹಾವೇರಿಯ ಸಮಗಂಡಿ ಮತ್ತು ಬಾರ್ಕಿ ಎಂಬ 2 ಕುಟುಂಬಗಳು ದೇವರ ದರ್ಶನಕ್ಕೆಂದು ತಿರುಪತಿಗೆ ತೆರಳುತ್ತಿದ್ದರು. ಸುರೇಶ ವೀರಪ್ಪ ಜಾಡಿ, ಐಶ್ವರ್ಯ ಈರಪ್ಪ ಬಾರ್ಕಿ, ಚೇತನಾ ಪ್ರಭುರಾಜ ಸಮಗಂಡಿ, ಪವಿತ್ರಾ ಪ್ರಭುರಾಜ ಸಮಗಂಡಿ ಮೃತ ದುರ್ದೈವಿಗಳು.

ಇದನ್ನೂ ಓದಿ:ಆರ್​ಸಿಬಿಯಲ್ಲಿ ಕಾರ್ತಿಕ್​​ಗೆ ಮಹತ್ವದ ಜವಾಬ್ದಾರಿ..? ಕುತೂಹಲ ಮೂಡಿಸಿದ RCB ಮುಖ್ಯ ಕೋಚ್ ನೀಡಿದ ಹೇಳಿಕೆ

ಚನ್ನವೀರಪ್ಪ ಜಾಡಿ, ಸಾವಿತ್ರ ಜಾಡಿ, ವಿಕಾಶ ಹೊನ್ನಪ್ಪ ಬಾರ್ಕಿ, ಹೊ‌ನ್ನಪ್ಪ ನೀಲಪ್ಪ ಬಾರ್ಕಿ, ಪ್ರಭುರಾಜ ಈರಪ್ಪ ಸಮಗಂಡಿ, ಗೀತಾ ಹೊನ್ನಪ್ಪ ಬಾರ್ಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು FSL ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಣೇಬೆನ್ನೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ:ಮಳೆಗೆ 7 ಬಲಿ.. ಐದು ಜಿಲ್ಲೆಗಳಿಗೆ ರೆಡ್​​ ಅಲರ್ಟ್​.. ಮುಂದಿನ 5 ದಿನಗಳ ಕಾಲ ಮಳೆ ಮಳೆ..!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More