/newsfirstlive-kannada/media/post_attachments/wp-content/uploads/2024/04/ACCIDENT-4-1.jpg)
ಹೆದ್ದಾರಿಯ ಮೇಲ್ಸೇತುವೆಯಿಂದ ಬಸ್ ಪಲ್ಟಿಯಾಗಿ ಐವರು ಮೃತಪಟ್ಟು 38ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಒಡಿಶಾದ ಜಾಜ್​ಪುರ ಜಿಲ್ಲೆಯಲ್ಲಿ ನಡೆದಿದೆ.
ಬಸ್​​ನಲ್ಲಿ ಮಹಿಳೆಯರು, ಮಕ್ಕಳು ಸೇರಿ ಸುಮಾರು 55 ಪ್ರಯಾಣಿಕರಿದ್ದರು. ಈ ಬಸ್ ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ಹಾಲ್ದಿಯಾಗೆ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ಬಸ್ ಬಾರಾಬತಿ ಚೌಕ್ ಬಳಿಯ ಮೇಲ್ಸೇತುವೆಯಿಂದ ಉರುಳಿ ದುರ್ಘಟನೆ ಸಂಭವಿಸಿದೆ.
ನ್ಯಾಷನಲ್ ಹೈವೇ 16 ಬಳಿಯ ಬಾರ್ಬತಿಯಲ್ಲಿ ದುರ್ಘಟನೆ ನಡೆದಿದೆ. ಜಾಜ್​ಪುರ ಜಿಲ್ಲಾ ಆರೋಗ್ಯಾಧಿಕಾರಿಗಳು ಘಟನೆ ಬಗ್ಗೆ ಮಾತನಾಡಿ.. ಬಸ್​​ನ ಡ್ರೈವರ್ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು SCB ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯರು ಅಪಘಾತವನ್ನು ನೋಡಿದ್ದಾರೆ. ಡ್ರೈವರ್​​​ ಮದ್ಯಪಾನ ಸೇವನೆ ಮಾಡಿ ವಾಹನ ಚಲಾಯಿಸಿದ್ದಾನೆ ಎನ್ನುತ್ತಿದ್ದಾರೆ. ಈ ಬಗ್ಗೆಯೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು ಎಂದಿದ್ದಾರೆ.
ಬಸ್​ ನಿಲ್ದಾಣ ಸಮೀಪವೇ ಇತ್ತು. ಹೀಗಿದ್ದೂ ಆತ ಬಸ್​​ ಅನ್ನು ಅಜಾಗರೂಕತೆಯಿಂದ ಡ್ರೈವ್ ಮಾಡಿಕೊಂಡು ಹೋಗಿದ್ದಾನೆ. ಆತ ಡ್ರೈವ್ ಮಾಡುತ್ತಿದ್ದ ರೀತಿ ನೋಡಿದ್ರೆ ಮದ್ಯಪಾನ ಮಾಡಿದಂತೆ ಕಾಣುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮೃತರ ಕುಟುಂಬಕ್ಕೆ 3 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಘೋಷಣೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us