ಡ್ರೈವರ್ ವಿರುದ್ಧ ಮದ್ಯಪಾನ ಮಾಡಿದ ಆರೋಪ
ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಬಸ್
ಮೃತರ ಕುಟುಂಬಕ್ಕೆ 3 ಲಕ್ಷ ರೂಪಾಯಿ ಪರಿಹಾರ
ಹೆದ್ದಾರಿಯ ಮೇಲ್ಸೇತುವೆಯಿಂದ ಬಸ್ ಪಲ್ಟಿಯಾಗಿ ಐವರು ಮೃತಪಟ್ಟು 38ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಒಡಿಶಾದ ಜಾಜ್ಪುರ ಜಿಲ್ಲೆಯಲ್ಲಿ ನಡೆದಿದೆ.
ಬಸ್ನಲ್ಲಿ ಮಹಿಳೆಯರು, ಮಕ್ಕಳು ಸೇರಿ ಸುಮಾರು 55 ಪ್ರಯಾಣಿಕರಿದ್ದರು. ಈ ಬಸ್ ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ಹಾಲ್ದಿಯಾಗೆ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ಬಸ್ ಬಾರಾಬತಿ ಚೌಕ್ ಬಳಿಯ ಮೇಲ್ಸೇತುವೆಯಿಂದ ಉರುಳಿ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ:RCB ಪ್ಲೇಯಿಂಗ್-11ನಲ್ಲಿ ಭಾರೀ ಬದಲಾವಣೆ; ಕಳೆದ 5 ಪಂದ್ಯಗಳಲ್ಲಿ SRHಗಿಂತ ಆರ್ಸಿಬಿಯೇ ಹೆಚ್ಚು ಸ್ಟ್ರಾಂಗ್..!
ನ್ಯಾಷನಲ್ ಹೈವೇ 16 ಬಳಿಯ ಬಾರ್ಬತಿಯಲ್ಲಿ ದುರ್ಘಟನೆ ನಡೆದಿದೆ. ಜಾಜ್ಪುರ ಜಿಲ್ಲಾ ಆರೋಗ್ಯಾಧಿಕಾರಿಗಳು ಘಟನೆ ಬಗ್ಗೆ ಮಾತನಾಡಿ.. ಬಸ್ನ ಡ್ರೈವರ್ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು SCB ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯರು ಅಪಘಾತವನ್ನು ನೋಡಿದ್ದಾರೆ. ಡ್ರೈವರ್ ಮದ್ಯಪಾನ ಸೇವನೆ ಮಾಡಿ ವಾಹನ ಚಲಾಯಿಸಿದ್ದಾನೆ ಎನ್ನುತ್ತಿದ್ದಾರೆ. ಈ ಬಗ್ಗೆಯೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು ಎಂದಿದ್ದಾರೆ.
ಬಸ್ ನಿಲ್ದಾಣ ಸಮೀಪವೇ ಇತ್ತು. ಹೀಗಿದ್ದೂ ಆತ ಬಸ್ ಅನ್ನು ಅಜಾಗರೂಕತೆಯಿಂದ ಡ್ರೈವ್ ಮಾಡಿಕೊಂಡು ಹೋಗಿದ್ದಾನೆ. ಆತ ಡ್ರೈವ್ ಮಾಡುತ್ತಿದ್ದ ರೀತಿ ನೋಡಿದ್ರೆ ಮದ್ಯಪಾನ ಮಾಡಿದಂತೆ ಕಾಣುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮೃತರ ಕುಟುಂಬಕ್ಕೆ 3 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಘೋಷಣೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಡ್ರೈವರ್ ವಿರುದ್ಧ ಮದ್ಯಪಾನ ಮಾಡಿದ ಆರೋಪ
ಚಾಲಕನ ನಿಯಂತ್ರಣ ತಪ್ಪಿ ಉರುಳಿದ ಬಸ್
ಮೃತರ ಕುಟುಂಬಕ್ಕೆ 3 ಲಕ್ಷ ರೂಪಾಯಿ ಪರಿಹಾರ
ಹೆದ್ದಾರಿಯ ಮೇಲ್ಸೇತುವೆಯಿಂದ ಬಸ್ ಪಲ್ಟಿಯಾಗಿ ಐವರು ಮೃತಪಟ್ಟು 38ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಒಡಿಶಾದ ಜಾಜ್ಪುರ ಜಿಲ್ಲೆಯಲ್ಲಿ ನಡೆದಿದೆ.
ಬಸ್ನಲ್ಲಿ ಮಹಿಳೆಯರು, ಮಕ್ಕಳು ಸೇರಿ ಸುಮಾರು 55 ಪ್ರಯಾಣಿಕರಿದ್ದರು. ಈ ಬಸ್ ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ಹಾಲ್ದಿಯಾಗೆ ತೆರಳುತ್ತಿತ್ತು. ಚಾಲಕನ ನಿಯಂತ್ರಣ ತಪ್ಪಿದ ಬಸ್ ಬಾರಾಬತಿ ಚೌಕ್ ಬಳಿಯ ಮೇಲ್ಸೇತುವೆಯಿಂದ ಉರುಳಿ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿ:RCB ಪ್ಲೇಯಿಂಗ್-11ನಲ್ಲಿ ಭಾರೀ ಬದಲಾವಣೆ; ಕಳೆದ 5 ಪಂದ್ಯಗಳಲ್ಲಿ SRHಗಿಂತ ಆರ್ಸಿಬಿಯೇ ಹೆಚ್ಚು ಸ್ಟ್ರಾಂಗ್..!
ನ್ಯಾಷನಲ್ ಹೈವೇ 16 ಬಳಿಯ ಬಾರ್ಬತಿಯಲ್ಲಿ ದುರ್ಘಟನೆ ನಡೆದಿದೆ. ಜಾಜ್ಪುರ ಜಿಲ್ಲಾ ಆರೋಗ್ಯಾಧಿಕಾರಿಗಳು ಘಟನೆ ಬಗ್ಗೆ ಮಾತನಾಡಿ.. ಬಸ್ನ ಡ್ರೈವರ್ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲ್ಲಾ ಗಾಯಾಳುಗಳನ್ನು SCB ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳೀಯರು ಅಪಘಾತವನ್ನು ನೋಡಿದ್ದಾರೆ. ಡ್ರೈವರ್ ಮದ್ಯಪಾನ ಸೇವನೆ ಮಾಡಿ ವಾಹನ ಚಲಾಯಿಸಿದ್ದಾನೆ ಎನ್ನುತ್ತಿದ್ದಾರೆ. ಈ ಬಗ್ಗೆಯೂ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು ಎಂದಿದ್ದಾರೆ.
ಬಸ್ ನಿಲ್ದಾಣ ಸಮೀಪವೇ ಇತ್ತು. ಹೀಗಿದ್ದೂ ಆತ ಬಸ್ ಅನ್ನು ಅಜಾಗರೂಕತೆಯಿಂದ ಡ್ರೈವ್ ಮಾಡಿಕೊಂಡು ಹೋಗಿದ್ದಾನೆ. ಆತ ಡ್ರೈವ್ ಮಾಡುತ್ತಿದ್ದ ರೀತಿ ನೋಡಿದ್ರೆ ಮದ್ಯಪಾನ ಮಾಡಿದಂತೆ ಕಾಣುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಮೃತರ ಕುಟುಂಬಕ್ಕೆ 3 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಘೋಷಣೆ ಮಾಡಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ