newsfirstkannada.com

ಮಕ್ಕಳಾಗಿಲ್ಲ ಎಂದು ಗಂಡನ ಮನೆಯವರಿಂದ ಕಿರುಕುಳ ಆರೋಪ.. ಆತ್ಮಹತ್ಯೆ ಮಾಡಿಕೊಂಡ ಮಹಿಳೆ

Share :

Published April 18, 2024 at 1:25pm

    ಸೊಸೆಯ ಮೇಲೆ ಅತ್ತೆಯಿಂದ ಕಿರುಕುಳ ಆರೋಪ

    ಮಕ್ಕಳಾಗಿಲ್ಲ ಎಂದು ಸೊಸೆಗೆ ಹಿಂಸೆ ನೀಡುತ್ತಿದ್ದ ಅತ್ತೆ

    ಆತ್ಮಹತ್ಯೆ ಮಾಡಿಕೊಂಡು ಬದುಕು ಮುಗಿಸಿದ ಸೊಸೆ

ಚಿತ್ರದುರ್ಗ: ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪವೊಂದು ಕೇಳಿಬಂದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದೆ

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಆಶಾ (26) ಎಂದು ಗುರುತಿಸಲಾಗಿದೆ. ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆಶಾ ಸಾವನ್ನಪ್ಪಿದ್ದಾರೆ.

ಗಂಡನ ಮನೆಯವರು ಮಕ್ಕಳಾಗಿಲ್ಲ ಎಂದು ಕಿರುಕುಳ ನೀಡುತ್ತಿದ್ದರು. ಮದ್ವೆ ಆಗಿ 5 ವರ್ಷವಾದರೂ ಆಶಾಗೆ ಮಕ್ಕಳಾಗಿಲ್ಲ ಎಂದು ಅತ್ತೆಯಿಂದ ಕಿರುಕುಳವಿತ್ತು. ಹೀಗಾಗಿ ಆಕೆಗೆ ಹಿಂಸೆ ನೀಡುತ್ತಿದ್ದರು ಎಂಬ ಆರೋಪ ಗಂಡನ ಮನೆಯವರ ಮೇಲೆ ಕೇಳಿಬಂದಿದೆ.

ಇದನ್ನೂ ಓದಿ: ವಿಶ್ವದ ಶ್ರೀಮಂತ CEOಗಳು ಬಳಸೋ ಫೋನ್​ ಯಾವುದು ? ಕುತೂಹಲಕಾರಿ ಮಾಹಿತಿ ಇಲ್ಲಿದೆ

ಆಶಾ ಅತ್ತೆ ತವರು ಮನೆಗೆ ವಾಪಸ್ ಕಳಿಸುತ್ತೇನೆ ಎಂದು ಹೆದರಿಸುತ್ತಿದ್ದರು. ಹೀಗಾಗಿ ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಆಶಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಮಕ್ಕಳಾಗಿಲ್ಲ ಎಂದು ಗಂಡನ ಮನೆಯವರಿಂದ ಕಿರುಕುಳ ಆರೋಪ.. ಆತ್ಮಹತ್ಯೆ ಮಾಡಿಕೊಂಡ ಮಹಿಳೆ

https://newsfirstlive.com/wp-content/uploads/2024/04/Asha.jpg

    ಸೊಸೆಯ ಮೇಲೆ ಅತ್ತೆಯಿಂದ ಕಿರುಕುಳ ಆರೋಪ

    ಮಕ್ಕಳಾಗಿಲ್ಲ ಎಂದು ಸೊಸೆಗೆ ಹಿಂಸೆ ನೀಡುತ್ತಿದ್ದ ಅತ್ತೆ

    ಆತ್ಮಹತ್ಯೆ ಮಾಡಿಕೊಂಡು ಬದುಕು ಮುಗಿಸಿದ ಸೊಸೆ

ಚಿತ್ರದುರ್ಗ: ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪವೊಂದು ಕೇಳಿಬಂದಿದೆ. ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಮತ್ತೋಡು ಗ್ರಾಮದಲ್ಲಿ ಘಟನೆ ಬೆಳಕಿಗೆ ಬಂದಿದೆ

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಆಶಾ (26) ಎಂದು ಗುರುತಿಸಲಾಗಿದೆ. ಬೇಕರಿಯಲ್ಲಿ ಕೆಲಸ ಮಾಡಿಕೊಂಡಿದ್ದ ಆಶಾ ಸಾವನ್ನಪ್ಪಿದ್ದಾರೆ.

ಗಂಡನ ಮನೆಯವರು ಮಕ್ಕಳಾಗಿಲ್ಲ ಎಂದು ಕಿರುಕುಳ ನೀಡುತ್ತಿದ್ದರು. ಮದ್ವೆ ಆಗಿ 5 ವರ್ಷವಾದರೂ ಆಶಾಗೆ ಮಕ್ಕಳಾಗಿಲ್ಲ ಎಂದು ಅತ್ತೆಯಿಂದ ಕಿರುಕುಳವಿತ್ತು. ಹೀಗಾಗಿ ಆಕೆಗೆ ಹಿಂಸೆ ನೀಡುತ್ತಿದ್ದರು ಎಂಬ ಆರೋಪ ಗಂಡನ ಮನೆಯವರ ಮೇಲೆ ಕೇಳಿಬಂದಿದೆ.

ಇದನ್ನೂ ಓದಿ: ವಿಶ್ವದ ಶ್ರೀಮಂತ CEOಗಳು ಬಳಸೋ ಫೋನ್​ ಯಾವುದು ? ಕುತೂಹಲಕಾರಿ ಮಾಹಿತಿ ಇಲ್ಲಿದೆ

ಆಶಾ ಅತ್ತೆ ತವರು ಮನೆಗೆ ವಾಪಸ್ ಕಳಿಸುತ್ತೇನೆ ಎಂದು ಹೆದರಿಸುತ್ತಿದ್ದರು. ಹೀಗಾಗಿ ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು ಆಶಾ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More