newsfirstkannada.com

ಹಿಂದೂ ಧರ್ಮಕ್ಕೆ ಅಪಮಾನ.. ಮಂಗಳೂರಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳ ಹೋರಾಟಕ್ಕೆ ಜಯ

Share :

Published February 12, 2024 at 9:04pm

Update February 12, 2024 at 9:06pm

    ಸಿಸ್ಟರ್​ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ಧರಣಿ

    ವಿರೋಧದ ಬೆನ್ನಲ್ಲೇ ಶಿಕ್ಷಕಿ ಸಿಸ್ಟರ್ ಪ್ರಭಾ ತಲೆದಂಡ

    ಆಕ್ರೋಶದ ಬೆನ್ನಲ್ಲೇ ಎಚ್ಚೆತ್ತ ಶಾಲಾ ಆಡಳಿತ ಮಂಡಳಿ

ಮಂಗಳೂರು: ಹಿಂದು ಧರ್ಮದ ಬಗ್ಗೆ ಅವಹೇಳನ ಮಾಡಿದ್ದಾರೆಂದು ಆರೋಪಕ್ಕೀಡಾದ ಶಿಕ್ಷಕಿಯ ವಿರುದ್ಧ ಮಂಗಳೂರಿನಲ್ಲಿ ಆಕ್ರೋಶದ ಕಿಚ್ಚು ಭುಗಿಲೆದ್ದಿದೆ. ಶಿಕ್ಷಕಿಯನ್ನು ವಜಾಗೊಳಿಸುವಂತೆ ಆಗ್ರಹಿಸಿ ಶಾಸಕರೇ ಧರಣಿ ಕುಳಿತಿದ್ದರು. ಸದ್ಯ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿದ್ದಂತೆ ಶಾಲಾ ಆಡಳಿತ ಮಂಡಳಿ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಕ್ರಮ ಕೈಗೊಂಡಿದೆ.

ಪಾಠ ಮಾಡುವಾಗ ಧಾರ್ಮಿಕ ನಿಂದನೆ ಆರೋಪ

ಮಕ್ಕಳು ತಪ್ಪು ಮಾಡಿದಾಗ ತಿದ್ದಿ ಬುದ್ಧಿ ಹೇಳಬೇಕಾದ ಶಿಕ್ಷಕರ ಕರ್ತವ್ಯ. ಅದೇ ಶಿಕ್ಷಕರೇ ತಪ್ಪು ಮಾಡಿದಾಗ ಶಾಲಾ ಆಡಳಿತ ಮಂಡಳಿ ಬುದ್ಧಿ ಹೇಳಬೇಕು. ಆದ್ರೆ ಶಾಲಾ ಆಡಳಿತ ಮಂಡಳಿ ಬೇಜವಾಬ್ದಾರಿ ತೋರಿದ್ರೆ ಇಡೀ ಸಮಾಜವೇ ಎದ್ದು ನಿಲ್ಲುತ್ತೆ. ಹೌದು, ಶ್ರೀರಾಮನಿಗೆ, ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದ ಆರೋಪ ಸಂಬಂಧ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ.

ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಸಿಸ್ಟರ್ ಪ್ರಭಾ, ಫೆ.8 ರಂದು ‘Work is worship’ ಎಂಬ ವಿಷಯ ಬಗ್ಗೆ ಪಾಠ ಮಾಡ್ತಿದ್ರು. ಈ ವೇಳೆ ರಾಮಮಂದಿರ, ಪ್ರಭು ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ ಆರೋಪ. ಈ ಬಗ್ಗೆ ತಮ್ಮ ಪೋಷಕರ ಬಳಿ ವಿದ್ಯಾರ್ಥಿಗಳು ಹೇಳಿಕೊಂಡಿದ್ದರು. ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಬೋಧನೆ ಮಾಡಿದ ಆರೋಪ ಸಂಬಂಧ ಪೋಷಕರು ಶಾಲೆಗೆ ಆಗಮಿಸಿ ಆಡಳಿತ ಮಂಡಳಿ ಗಮನಕ್ಕೂ ತಂದಿದ್ದು, ಶಿಕ್ಷಕಿ ಸಿಸ್ಟರ್ ಪ್ರಭಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಭರತ್‌ ಶೆಟ್ಟಿ ನೇತೃತ್ವದಲ್ಲಿ ಶಿಕ್ಷಣಾಧಿಕಾರಿಗಳನ್ನ ಭೇಟಿ ಮಾಡಿ ಕ್ರಮಕ್ಕೆ ಒತ್ತಾಯಿಸಲಾಗಿದೆ.

ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಶಾಲೆ ಬಳಿ ಪ್ರತಿಭಟನೆ

ಈ ಮಧ್ಯೆ ಶಾಲಾ ಆಡಳಿತ ಮಂಡಳಿ ಶಿಕ್ಷಕಿ ವಿರುದ್ಧ ಕ್ರಮಕೈಗೊಳ್ಳಲು ಮೀನಾಮೇಷ ಎಣಿಸಿದ್ದಕ್ಕೆ ಪೋಷಕರ ಸಿಟ್ಟು ಮತ್ತಷ್ಟು ಹೆಚ್ಚಾಗಿತ್ತು. ಇವತ್ತು ಶಾಸಕ ವೇದವ್ಯಾಸ ಕಾಮತ್​ ನೇತೃತ್ವದಲ್ಲಿ ಪೋಷಕರು ಮತ್ತು ಹಿಂದೂ ಸಂಘಟನೆಗಳು ಶಾಲೆ ಬಳಿಕ ಆಗಮಿಸಿ, ಪ್ರತಿಭಟನೆ ನಡೆಸಿದ್ರು. ಮುಂಜಾಗ್ರತಾ ಕ್ರಮವಾಗಿ ಶಾಲೆ ಬಳಿ ಬಿಗಿ ಭದ್ರತೆ ನಿಯೋಜಿಸಲಾಗಿತ್ತು. ಈ ವೇಳೆ ಶಾಲೆಯ ಗೇಟ್​ ಬಂದ್​ ಮಾಡಿದ್ರಿಂದ ಶಾಸಕರು ಜೆರೋಸಾ ಶಾಲೆಯ ವಿರುದ್ಧ ನಿಗಿನಿಗಿ ಕೆಂಡಕಾರಿದ್ರು. ನಾಳೆಯಿಂದ ಮತ್ತಷ್ಟು ಪ್ರತಿಭಟನೆ ಮಾಡೋದಾಗಿ ಎಚ್ಚರಿಕೆ ನೀಡಿದ್ರು.

ಆಕ್ರೋಶದ ಬೆನ್ನಲ್ಲೇ ಕೊನೆಗೂ ಎಚ್ಚೆತ್ತ ಶಾಲಾ ಆಡಳಿತ ಮಂಡಳಿ

ರಾಜಕೀಯ ತಿರುವು ಪಡೆದುಕೊಂಡು ಆಕ್ರೋಶದ ಕಿಚ್ಚು ಹೆಚ್ಚಾದ ಬೆನ್ನಲೇ ಸಂತ ಜೆರೊಸಾ ಶಾಲಾ ಆಡಳಿತ ಮಂಡಳಿ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಮುಂದಾಯ್ತು. ಹಿಂದೂ ಧರ್ಮಕ್ಕೆ ಅವಹೇಳನ ಮಾಡಿದ ಏಳನೇ ತರಗತಿ ಶಿಕ್ಷಕಿ ಸಿಸ್ಟರ್ ಪ್ರಭಾರನ್ನು ಅಮಾನತು ಮಾಡಿರೋದಾಗಿ ಶಾಲಾ ಆಡಳಿತ ಮಂಡಳಿ ಪೋಷಕರಿಗೆ ತಿಳಿಸಿತು. ಲಿಖಿತ ರೂಪದಲ್ಲಿ ಅಮಾನತು ಆದೇಶ ಹೊರಡಿಸಲಾಗಿದೆಯಾದರೂ ಆಡಳಿತ ಮಂಡಳಿ ತಪ್ಪು ಒಪ್ಪಿಕೊಂಡಿಲ್ಲ. ಹೀಗಾಗಿ ಮುಖ್ಯಶಿಕ್ಷಕಿ‌ ಮತ್ತು ಶಾಲಾ ಆಡಳಿತಕ್ಕೆ ಶಾಸಕರು ಹಿಗ್ಗಾಮುಗ್ಗಾವಾಗಿ ತರಾಟೆಗೆ ತೆಗೆದುಕೊಂಡರು. ಸಂಜೆ ವೇಳೆಗೆ ಶಾಲೆಯಿಂದ ಹೊರಬಂದ ವಿದ್ಯಾರ್ಥಿಗಳು ಕೂಡ ಪೋಷಕರ ಪ್ರತಿಭಟನೆಗೆ ಸಾಥ್ ನೀಡಿದ್ರು. ಹಾಗೂ ಜೈ ಶ್ರೀರಾಮ್ ಘೋಷಣೆ ಕೂಗಿದ್ರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸ್ ಕಮಿಷನರ್ ಮತ್ತು ಜಿಲ್ಲಾಧಿಕಾರಿ ಪೋಷಕರನ್ನು ಮತ್ತು ಶಾಸಕರನ್ನು ಮನವೊಲಿಸಿ, ಸ್ಥಳದಿಂದ ತೆರಳುವಂತೆ ಮನವಿ ಮಾಡಿದ್ರು. ಹಾಗೂ ಶಾಲೆಯ ಆಡಳಿತ ಮಂಡಳಿ ಸದಸ್ಯರ ಜೊತೆಗೆ ಮಾತುಕತೆ ನಡೆಸಿ ಕ್ರಮ ಜರುಗಿಸುವ ಭರವಸೆ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಹಿಂದೂ ಧರ್ಮಕ್ಕೆ ಅಪಮಾನ.. ಮಂಗಳೂರಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳ ಹೋರಾಟಕ್ಕೆ ಜಯ

https://newsfirstlive.com/wp-content/uploads/2024/02/mng-sister.jpg

    ಸಿಸ್ಟರ್​ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರ ಧರಣಿ

    ವಿರೋಧದ ಬೆನ್ನಲ್ಲೇ ಶಿಕ್ಷಕಿ ಸಿಸ್ಟರ್ ಪ್ರಭಾ ತಲೆದಂಡ

    ಆಕ್ರೋಶದ ಬೆನ್ನಲ್ಲೇ ಎಚ್ಚೆತ್ತ ಶಾಲಾ ಆಡಳಿತ ಮಂಡಳಿ

ಮಂಗಳೂರು: ಹಿಂದು ಧರ್ಮದ ಬಗ್ಗೆ ಅವಹೇಳನ ಮಾಡಿದ್ದಾರೆಂದು ಆರೋಪಕ್ಕೀಡಾದ ಶಿಕ್ಷಕಿಯ ವಿರುದ್ಧ ಮಂಗಳೂರಿನಲ್ಲಿ ಆಕ್ರೋಶದ ಕಿಚ್ಚು ಭುಗಿಲೆದ್ದಿದೆ. ಶಿಕ್ಷಕಿಯನ್ನು ವಜಾಗೊಳಿಸುವಂತೆ ಆಗ್ರಹಿಸಿ ಶಾಸಕರೇ ಧರಣಿ ಕುಳಿತಿದ್ದರು. ಸದ್ಯ ಪ್ರಕರಣ ರಾಜಕೀಯ ತಿರುವು ಪಡೆಯುತ್ತಿದ್ದಂತೆ ಶಾಲಾ ಆಡಳಿತ ಮಂಡಳಿ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಕ್ರಮ ಕೈಗೊಂಡಿದೆ.

ಪಾಠ ಮಾಡುವಾಗ ಧಾರ್ಮಿಕ ನಿಂದನೆ ಆರೋಪ

ಮಕ್ಕಳು ತಪ್ಪು ಮಾಡಿದಾಗ ತಿದ್ದಿ ಬುದ್ಧಿ ಹೇಳಬೇಕಾದ ಶಿಕ್ಷಕರ ಕರ್ತವ್ಯ. ಅದೇ ಶಿಕ್ಷಕರೇ ತಪ್ಪು ಮಾಡಿದಾಗ ಶಾಲಾ ಆಡಳಿತ ಮಂಡಳಿ ಬುದ್ಧಿ ಹೇಳಬೇಕು. ಆದ್ರೆ ಶಾಲಾ ಆಡಳಿತ ಮಂಡಳಿ ಬೇಜವಾಬ್ದಾರಿ ತೋರಿದ್ರೆ ಇಡೀ ಸಮಾಜವೇ ಎದ್ದು ನಿಲ್ಲುತ್ತೆ. ಹೌದು, ಶ್ರೀರಾಮನಿಗೆ, ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದ ಆರೋಪ ಸಂಬಂಧ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾರನ್ನು ಆಡಳಿತ ಮಂಡಳಿ ಅಮಾನತು ಮಾಡಿದೆ.

ಜೆರೋಸಾ ಶಾಲೆಯ ಏಳನೇ ತರಗತಿ ಶಿಕ್ಷಕಿ ಸಿಸ್ಟರ್ ಪ್ರಭಾ, ಫೆ.8 ರಂದು ‘Work is worship’ ಎಂಬ ವಿಷಯ ಬಗ್ಗೆ ಪಾಠ ಮಾಡ್ತಿದ್ರು. ಈ ವೇಳೆ ರಾಮಮಂದಿರ, ಪ್ರಭು ಶ್ರೀರಾಮನ ಬಗ್ಗೆ ಅವಹೇಳನ ಮಾಡಿದ ಆರೋಪ. ಈ ಬಗ್ಗೆ ತಮ್ಮ ಪೋಷಕರ ಬಳಿ ವಿದ್ಯಾರ್ಥಿಗಳು ಹೇಳಿಕೊಂಡಿದ್ದರು. ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಬೋಧನೆ ಮಾಡಿದ ಆರೋಪ ಸಂಬಂಧ ಪೋಷಕರು ಶಾಲೆಗೆ ಆಗಮಿಸಿ ಆಡಳಿತ ಮಂಡಳಿ ಗಮನಕ್ಕೂ ತಂದಿದ್ದು, ಶಿಕ್ಷಕಿ ಸಿಸ್ಟರ್ ಪ್ರಭಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ರು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಭರತ್‌ ಶೆಟ್ಟಿ ನೇತೃತ್ವದಲ್ಲಿ ಶಿಕ್ಷಣಾಧಿಕಾರಿಗಳನ್ನ ಭೇಟಿ ಮಾಡಿ ಕ್ರಮಕ್ಕೆ ಒತ್ತಾಯಿಸಲಾಗಿದೆ.

ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಶಾಲೆ ಬಳಿ ಪ್ರತಿಭಟನೆ

ಈ ಮಧ್ಯೆ ಶಾಲಾ ಆಡಳಿತ ಮಂಡಳಿ ಶಿಕ್ಷಕಿ ವಿರುದ್ಧ ಕ್ರಮಕೈಗೊಳ್ಳಲು ಮೀನಾಮೇಷ ಎಣಿಸಿದ್ದಕ್ಕೆ ಪೋಷಕರ ಸಿಟ್ಟು ಮತ್ತಷ್ಟು ಹೆಚ್ಚಾಗಿತ್ತು. ಇವತ್ತು ಶಾಸಕ ವೇದವ್ಯಾಸ ಕಾಮತ್​ ನೇತೃತ್ವದಲ್ಲಿ ಪೋಷಕರು ಮತ್ತು ಹಿಂದೂ ಸಂಘಟನೆಗಳು ಶಾಲೆ ಬಳಿಕ ಆಗಮಿಸಿ, ಪ್ರತಿಭಟನೆ ನಡೆಸಿದ್ರು. ಮುಂಜಾಗ್ರತಾ ಕ್ರಮವಾಗಿ ಶಾಲೆ ಬಳಿ ಬಿಗಿ ಭದ್ರತೆ ನಿಯೋಜಿಸಲಾಗಿತ್ತು. ಈ ವೇಳೆ ಶಾಲೆಯ ಗೇಟ್​ ಬಂದ್​ ಮಾಡಿದ್ರಿಂದ ಶಾಸಕರು ಜೆರೋಸಾ ಶಾಲೆಯ ವಿರುದ್ಧ ನಿಗಿನಿಗಿ ಕೆಂಡಕಾರಿದ್ರು. ನಾಳೆಯಿಂದ ಮತ್ತಷ್ಟು ಪ್ರತಿಭಟನೆ ಮಾಡೋದಾಗಿ ಎಚ್ಚರಿಕೆ ನೀಡಿದ್ರು.

ಆಕ್ರೋಶದ ಬೆನ್ನಲ್ಲೇ ಕೊನೆಗೂ ಎಚ್ಚೆತ್ತ ಶಾಲಾ ಆಡಳಿತ ಮಂಡಳಿ

ರಾಜಕೀಯ ತಿರುವು ಪಡೆದುಕೊಂಡು ಆಕ್ರೋಶದ ಕಿಚ್ಚು ಹೆಚ್ಚಾದ ಬೆನ್ನಲೇ ಸಂತ ಜೆರೊಸಾ ಶಾಲಾ ಆಡಳಿತ ಮಂಡಳಿ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳಲು ಮುಂದಾಯ್ತು. ಹಿಂದೂ ಧರ್ಮಕ್ಕೆ ಅವಹೇಳನ ಮಾಡಿದ ಏಳನೇ ತರಗತಿ ಶಿಕ್ಷಕಿ ಸಿಸ್ಟರ್ ಪ್ರಭಾರನ್ನು ಅಮಾನತು ಮಾಡಿರೋದಾಗಿ ಶಾಲಾ ಆಡಳಿತ ಮಂಡಳಿ ಪೋಷಕರಿಗೆ ತಿಳಿಸಿತು. ಲಿಖಿತ ರೂಪದಲ್ಲಿ ಅಮಾನತು ಆದೇಶ ಹೊರಡಿಸಲಾಗಿದೆಯಾದರೂ ಆಡಳಿತ ಮಂಡಳಿ ತಪ್ಪು ಒಪ್ಪಿಕೊಂಡಿಲ್ಲ. ಹೀಗಾಗಿ ಮುಖ್ಯಶಿಕ್ಷಕಿ‌ ಮತ್ತು ಶಾಲಾ ಆಡಳಿತಕ್ಕೆ ಶಾಸಕರು ಹಿಗ್ಗಾಮುಗ್ಗಾವಾಗಿ ತರಾಟೆಗೆ ತೆಗೆದುಕೊಂಡರು. ಸಂಜೆ ವೇಳೆಗೆ ಶಾಲೆಯಿಂದ ಹೊರಬಂದ ವಿದ್ಯಾರ್ಥಿಗಳು ಕೂಡ ಪೋಷಕರ ಪ್ರತಿಭಟನೆಗೆ ಸಾಥ್ ನೀಡಿದ್ರು. ಹಾಗೂ ಜೈ ಶ್ರೀರಾಮ್ ಘೋಷಣೆ ಕೂಗಿದ್ರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸ್ ಕಮಿಷನರ್ ಮತ್ತು ಜಿಲ್ಲಾಧಿಕಾರಿ ಪೋಷಕರನ್ನು ಮತ್ತು ಶಾಸಕರನ್ನು ಮನವೊಲಿಸಿ, ಸ್ಥಳದಿಂದ ತೆರಳುವಂತೆ ಮನವಿ ಮಾಡಿದ್ರು. ಹಾಗೂ ಶಾಲೆಯ ಆಡಳಿತ ಮಂಡಳಿ ಸದಸ್ಯರ ಜೊತೆಗೆ ಮಾತುಕತೆ ನಡೆಸಿ ಕ್ರಮ ಜರುಗಿಸುವ ಭರವಸೆ ನೀಡಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More