newsfirstkannada.com

ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು; ಯಾಕೆ?

Share :

Published March 31, 2024 at 3:18pm

    ಪೂರ್ಣಸಿದ್ಧತಾ ಸಭೆಯಲ್ಲಿ ಕಾರ್ಯಕರ್ತರ ಬಡಿದಾಟ

    ನಾಯಕರು ಹೋಗುತ್ತಿದ್ದಂತೆ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು

    ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಬಡಿದಾಡಿಕೊಳ್ಳಲು ಕಾರಣ?

ಚಿತ್ರದುರ್ಗ: ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಸಮನ್ವಯ ಸಭೆ ಕರೆಯಲಾಗಿತ್ತು. ಈ ವೇಳೆ ಕಾರ್ಯಕರ್ತರು ಬಡಿದಾಡಿಕೊಂಡ ಘಟನೆ ನಡೆದಿದೆ.

ನಗರದ ಎಸ್ಎಸ್ ಕೆ ಎಸ್ ಸಮುದಾಯ ಭವನದಲ್ಲಿ ಸಮನ್ವಯ ಸಭೆ ಏರ್ಪಡಿಸಿದ್ದರು. ಈ ಸಭೆಯಲ್ಲಿ ಜೆಡಿಎಸ್​ ಮತ್ತು ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದರು. ಆದರೆ ಪೂರ್ಣಸಿದ್ಧತಾ ಸಭೆಯಲ್ಲಿ ಕಾರ್ಯಕರ್ತರು ಬಡಿದಾಡಿಕೊಂಡಿದ್ದಾರೆ.

ವೈಯ್ಯಕ್ತಿಯ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿದೆ. ಬಳಿಕ ಪರಸ್ಪರ ಬಡಿದಾಡಿಕೊಂಡಿದ್ದಾರೆ. ವೇದಿಕೆ‌ ಮೇಲಿಂದ‌ ನಾಯಕರು ಹೋಗುತ್ತಿದ್ದಂತೆ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ್ದಾರೆ.

ಇದನ್ನೂ ಓದಿ: Health Tips: ಎಷ್ಟೇ ತಿಂದರೂ ತೂಕ ಹೆಚ್ಚಾಗದಂತ ಆಹಾರವಿದು! ಆರೋಗ್ಯ ಕಾಳಜಿ ಇದ್ದವರಿಗೆ ಇದೇ ಬೆಸ್ಟ್ ಫುಡ್​​

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿಯಾಗಿ ಸ್ಪರ್ಧಿಸುತ್ತಿದೆ. ಆದರೆ ಚುನಾವಣೆಯ ಪ್ರಚಾರ ಮತ್ತು ಸಮನ್ವಯ ಸಭೆಯಲ್ಲಿ ಕಾರ್ಯಕರ್ತರ ಹೊಡೆದಾಟ ಬಡಿದಾಟದ ಕತೆಗಳು ನಾಯಕರಿಗೆ ಅಚ್ಚರಿ ಮೂಡಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಬಿಜೆಪಿ ಮತ್ತು ಜೆಡಿಎಸ್ ಸಮನ್ವಯ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು; ಯಾಕೆ?

https://newsfirstlive.com/wp-content/uploads/2024/03/Chitradurga-2.jpg

    ಪೂರ್ಣಸಿದ್ಧತಾ ಸಭೆಯಲ್ಲಿ ಕಾರ್ಯಕರ್ತರ ಬಡಿದಾಟ

    ನಾಯಕರು ಹೋಗುತ್ತಿದ್ದಂತೆ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು

    ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಬಡಿದಾಡಿಕೊಳ್ಳಲು ಕಾರಣ?

ಚಿತ್ರದುರ್ಗ: ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಸಮನ್ವಯ ಸಭೆ ಕರೆಯಲಾಗಿತ್ತು. ಈ ವೇಳೆ ಕಾರ್ಯಕರ್ತರು ಬಡಿದಾಡಿಕೊಂಡ ಘಟನೆ ನಡೆದಿದೆ.

ನಗರದ ಎಸ್ಎಸ್ ಕೆ ಎಸ್ ಸಮುದಾಯ ಭವನದಲ್ಲಿ ಸಮನ್ವಯ ಸಭೆ ಏರ್ಪಡಿಸಿದ್ದರು. ಈ ಸಭೆಯಲ್ಲಿ ಜೆಡಿಎಸ್​ ಮತ್ತು ಬಿಜೆಪಿ ಕಾರ್ಯಕರ್ತರು ಆಗಮಿಸಿದ್ದರು. ಆದರೆ ಪೂರ್ಣಸಿದ್ಧತಾ ಸಭೆಯಲ್ಲಿ ಕಾರ್ಯಕರ್ತರು ಬಡಿದಾಡಿಕೊಂಡಿದ್ದಾರೆ.

ವೈಯ್ಯಕ್ತಿಯ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದು ಜಗಳ ಶುರುವಾಗಿದೆ. ಬಳಿಕ ಪರಸ್ಪರ ಬಡಿದಾಡಿಕೊಂಡಿದ್ದಾರೆ. ವೇದಿಕೆ‌ ಮೇಲಿಂದ‌ ನಾಯಕರು ಹೋಗುತ್ತಿದ್ದಂತೆ ಕಾರ್ಯಕರ್ತರು ಕೈ ಕೈ ಮಿಲಾಯಿಸಿದ್ದಾರೆ.

ಇದನ್ನೂ ಓದಿ: Health Tips: ಎಷ್ಟೇ ತಿಂದರೂ ತೂಕ ಹೆಚ್ಚಾಗದಂತ ಆಹಾರವಿದು! ಆರೋಗ್ಯ ಕಾಳಜಿ ಇದ್ದವರಿಗೆ ಇದೇ ಬೆಸ್ಟ್ ಫುಡ್​​

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ರಾಜ್ಯ ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿಯಾಗಿ ಸ್ಪರ್ಧಿಸುತ್ತಿದೆ. ಆದರೆ ಚುನಾವಣೆಯ ಪ್ರಚಾರ ಮತ್ತು ಸಮನ್ವಯ ಸಭೆಯಲ್ಲಿ ಕಾರ್ಯಕರ್ತರ ಹೊಡೆದಾಟ ಬಡಿದಾಟದ ಕತೆಗಳು ನಾಯಕರಿಗೆ ಅಚ್ಚರಿ ಮೂಡಿಸಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More