/newsfirstlive-kannada/media/post_attachments/wp-content/uploads/2025/02/DARSHAN_2-1.jpg)
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಆ್ಯಂಡ್ ಗ್ಯಾಂಗ್ ಇಂದು ನಗರದ 57ನೇ ಸಿಸಿಹೆಚ್ ಕೋರ್ಟ್ಗೆ ಹಾಜರಾಗಿದ್ದಾರೆ. ಎ1 ಆರೋಪಿ ಆಗಿರುವ ಪವಿತ್ರಾ ಗೌಡ, ದರ್ಶನ್ ಅವರು ಈಗಾಗಲೇ ಕೋರ್ಟ್ಗೆ ಕಾರಿನಲ್ಲಿ ಬಂದು ನ್ಯಾಯಾಲಯದ ಒಳಗಡೆ ಹೋಗಿದ್ದಾರೆ.
ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಕೆಲ ಆರೋಪಿಗಳು ಪ್ರಕರಣದಲ್ಲಿ ಜಾಮೀನು ಪಡೆದು ಹೊರಗಿದ್ದಾರೆ. ಹೀಗಾಗಿ ಪ್ರತಿ ತಿಂಗಳು ನ್ಯಾಯಾಲಯಕ್ಕೆ ಹಾಜರಾಗಬೇಕು ಎಂಬ ಷರತ್ತು ಹಿನ್ನೆಲೆಯಲ್ಲಿ ಇಂದು ಎಲ್ಲರೂ ಕೋರ್ಟ್ಗೆ ಹಾಜರಾಗಿದ್ದಾರೆ.
ಇದನ್ನೂ ಓದಿ: ಪಾಕ್ ಟೀಮ್ ವೇತನಕ್ಕಿಂತ ಹಾರ್ದಿಕ್ ಪಾಂಡ್ಯ ವಾಚ್ ದುಬಾರಿ.. ಬೆಲೆ ಕೇಳಿದ್ರೆ, ಶಾಕ್ ಆಗುತ್ತೆ!
ದರ್ಶನ್ ಅವರು ನ್ಯಾಯಾಲಯಕ್ಕೆ ಹಾಜರಾಗುವ ಮೊದಲೇ ಆರ್.ಆರ್ ನಗರದ ತಮ್ಮ ನಿವಾಸದ ಬಳಿ ಅಭಿಮಾನಿಗಳನ್ನು ಭೇಟಿ ಮಾಡಿದ್ದಾರೆ. ಇದಾದ ಮೇಲೆ ಕೋರ್ಟ್ನತ್ತ ದರ್ಶನ್ ತೆರಳಿದರು. ಕೋರ್ಟ್ಗೆ ಹೋಗುವಾಗ ದರ್ಶನ್ ಅವರು ಕುಂಟುತ್ತಾ ನಡೆದುಕೊಂಡು ಹೋಗಿರುವುದು ಕಂಡುಬಂತು. 57ನೇ ಸೆಷನ್ಸ್ ಕೋರ್ಟ್ನ ನ್ಯಾಯಾಧೀಶ ಜೈ ಶಂಕರ್ ಪೀಠದಲ್ಲಿ ಪ್ರಕರಣದ ಎಲ್ಲ ಆರೋಪಿಗಳ ವಿಚಾರಣೆ ನಡೆಯಲಿದೆ.
ಪವಿತ್ರಾ ಗೌಡ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವಾಗ ನ್ಯಾಯಾಲಯ ಅವರಿಗೆ ಷರತ್ತುಬದ್ಧ ಜಾಮೀನು ನೀಡಿತ್ತು. ಇದರಂತೆ ಬಳ್ಳಾರಿ ಜೈಲಿನಲ್ಲಿದ್ದ ದರ್ಶನ್ಗೂ ಷರತ್ತುಬದ್ಧ ಜಾಮೀನು ಅನ್ನು ಕೋರ್ಟ್ ನೀಡಿತ್ತು. ಹೀಗಾಗಿ ವಿಚಾರಣೆ ಹಿನ್ನೆಲೆಯಲ್ಲಿ ಇಂದು ಕೋರ್ಟ್ಗೆ ಹಾಜರು ಆಗಿದ್ದಾರೆ.
ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ