newsfirstkannada.com

ದರ್ಶನ್​ಗೆ ಜೈಲೂಟ ಫಿಕ್ಸ್‌.. ಮನೆಯೂಟ ಕೇಳಿದ್ದಕ್ಕೆ ಕೋರ್ಟ್‌ ಬಿಗ್ ಶಾಕ್‌; ಕಾರಣವೇನು?

Share :

Published July 25, 2024 at 4:34pm

Update July 25, 2024 at 4:37pm

    ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಅಂಡ್​ ಗ್ಯಾಂಗ್​ ಜೈಲುವಾಸ

    ನಟ ದರ್ಶನ್ ಮನೆ ಊಟದ ಅರ್ಜಿ ವಜಾ ಆಗಲು ಕಾರಣ ಏನು ಗೊತ್ತಾ?

    ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯದಿಂದ ಅರ್ಜಿ ವಜಾ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ ನಟ ದರ್ಶನ್ ತಮಗೆ ಜೈಲೂಟ ಬೇಡ ಮನೆಯೂಟಕ್ಕೆ ಅವಕಾಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ 24ನೇ ಎಸಿಎಂಎಂ ನ್ಯಾಯಾಲಯ ದರ್ಶನ್​ ಮನೆಯೂಟದ ಅರ್ಜಿಯನ್ನು ವಜಾ ಮಾಡಿ ಮಹತ್ವದ ಆದೇಶ ನೀಡಿದೆ.

ಇದನ್ನೂ ಓದಿ: ‘ದರ್ಶನ್ ತುಂಬಾ ಮುಗ್ಧ ಹುಡುಗ’.. ದಾಸನ ಸ್ಥಿತಿ ನೆನೆದು ಕಣ್ಣೀರು ಹಾಕಿದ ಹಿರಿಯ ನಟಿ ಗಿರಿಜಾ ಲೋಕೇಶ್​

ನನಗೆ ಜೈಲೂಟ ಸೇವಿಸಲು ಆಗುತ್ತಿಲ್ಲ. ಬದಲಾಗಿ ಮನೆಯೂಟಕ್ಕೆ ಅವಕಾಶ ನೀಡುವಂತೆ ನಟ ದರ್ಶನ್​ ಅವರು ಅರ್ಜಿ ಸಲ್ಲಿಸಿದ್ದರು. ಆದರೆ ವಾದ, ಪ್ರತಿವಾದ ಆಲಿಸಿದ 24ನೇ ಎಸಿಎಂಎಂ ಕೋರ್ಟ್​ನಿಂದ ಅರ್ಜಿಯನ್ನು ವಜಾ ಮಾಡಿದೆ. ಈ ಹಿಂದೆ ನಟ ದರ್ಶನ್ ಪರ ವಕೀಲರು ಜೈಲೂಟದಿಂದ ತಮ್ಮ ಕಕ್ಷಿದಾರರು ತೂಕ ಇಳಿಕೆಯಾಗಿದ್ದಾರೆ. ಅವರಿಗೆ ಮನೆಯೂಟಕ್ಕೆ ಅವಕಾಶ ನೀಡಬೇಕು. ಜೊತೆಗೆ ಓದೋದಕ್ಕೆ ಪುಸ್ತಕ ಹಾಸಿಗೆ ಅವಕಾಶ ನೀಡಬೇಕು ಅಂತ ನ್ಯಾಯಪೀಠವನ್ನು ಕೋರಿದ್ದರು. ಆದರೆ ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ಆ ಅರ್ಜಿಯನ್ನು ವಜಾಗೊಳಿಸುವ ಮೂಲಕ ಮಹತ್ವದ ತೀರ್ಪು ನೀಡಿದೆ.

ಮನೆಯೂಟದ ಅರ್ಜಿ ವಜಾ ಆಗಲು ಕಾರಣ ಏನು?

  • ಕಾರಣ 01: ಕರ್ನಾಟಕ ಪ್ರಿಸನ್ಸ್ ಕರೆಕ್ಷನ್ ಮ್ಯಾನ್ಯುಲ್ 2021 ರ ಸೆಕ್ಷನ್ 728 ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ.
  • ಕಾರಣ 02: ಜೈಲು ಅಧಿಕಾರಿಗಳ ವರದಿಯಲ್ಲಿ ಮನೆಯೂಟ ಅವಶ್ಯಕತೆ ಕಾಣಿಸ್ತಿಲ್ಲ. ದರ್ಶನ್​​ ಊಟದ ಬಗ್ಗೆ ವರದಿ ನೀಡಿದ್ದ ಜೈಲಿನ ಅಧಿಕಾರಿಗಳು.
  • ಕಾರಣ 03: ಮನೆಯೂಟ ಪೂರೈಕೆ ಸಂಬಂಧ ಪೂರಕವಾದ ಪ್ರಮಾಣ ಪತ್ರಗಳಿಲ್ಲ. ಮನೆ ಊಟದ ಅವಶ್ಯಕತೆ ಸಂಬಂಧ ವೈದ್ಯಕೀಯ ಪ್ರಮಾಣಪತ್ರಗಳಿಲ್ಲ.
    ಈ ಮೇಲಿನ ಮೂರು ಅಂಶಗಳನ್ನು ಇಟ್ಟುಕೊಂಡು ನಟ ದರ್ಶನ್ ಅವರ ಅರ್ಜಿಯನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ವಜಾ ಮಾಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ದರ್ಶನ್​ಗೆ ಜೈಲೂಟ ಫಿಕ್ಸ್‌.. ಮನೆಯೂಟ ಕೇಳಿದ್ದಕ್ಕೆ ಕೋರ್ಟ್‌ ಬಿಗ್ ಶಾಕ್‌; ಕಾರಣವೇನು?

https://newsfirstlive.com/wp-content/uploads/2024/06/DARSHAN-JAIL-2-1.jpg

    ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಅಂಡ್​ ಗ್ಯಾಂಗ್​ ಜೈಲುವಾಸ

    ನಟ ದರ್ಶನ್ ಮನೆ ಊಟದ ಅರ್ಜಿ ವಜಾ ಆಗಲು ಕಾರಣ ಏನು ಗೊತ್ತಾ?

    ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯದಿಂದ ಅರ್ಜಿ ವಜಾ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ ನಟ ದರ್ಶನ್ ತಮಗೆ ಜೈಲೂಟ ಬೇಡ ಮನೆಯೂಟಕ್ಕೆ ಅವಕಾಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ 24ನೇ ಎಸಿಎಂಎಂ ನ್ಯಾಯಾಲಯ ದರ್ಶನ್​ ಮನೆಯೂಟದ ಅರ್ಜಿಯನ್ನು ವಜಾ ಮಾಡಿ ಮಹತ್ವದ ಆದೇಶ ನೀಡಿದೆ.

ಇದನ್ನೂ ಓದಿ: ‘ದರ್ಶನ್ ತುಂಬಾ ಮುಗ್ಧ ಹುಡುಗ’.. ದಾಸನ ಸ್ಥಿತಿ ನೆನೆದು ಕಣ್ಣೀರು ಹಾಕಿದ ಹಿರಿಯ ನಟಿ ಗಿರಿಜಾ ಲೋಕೇಶ್​

ನನಗೆ ಜೈಲೂಟ ಸೇವಿಸಲು ಆಗುತ್ತಿಲ್ಲ. ಬದಲಾಗಿ ಮನೆಯೂಟಕ್ಕೆ ಅವಕಾಶ ನೀಡುವಂತೆ ನಟ ದರ್ಶನ್​ ಅವರು ಅರ್ಜಿ ಸಲ್ಲಿಸಿದ್ದರು. ಆದರೆ ವಾದ, ಪ್ರತಿವಾದ ಆಲಿಸಿದ 24ನೇ ಎಸಿಎಂಎಂ ಕೋರ್ಟ್​ನಿಂದ ಅರ್ಜಿಯನ್ನು ವಜಾ ಮಾಡಿದೆ. ಈ ಹಿಂದೆ ನಟ ದರ್ಶನ್ ಪರ ವಕೀಲರು ಜೈಲೂಟದಿಂದ ತಮ್ಮ ಕಕ್ಷಿದಾರರು ತೂಕ ಇಳಿಕೆಯಾಗಿದ್ದಾರೆ. ಅವರಿಗೆ ಮನೆಯೂಟಕ್ಕೆ ಅವಕಾಶ ನೀಡಬೇಕು. ಜೊತೆಗೆ ಓದೋದಕ್ಕೆ ಪುಸ್ತಕ ಹಾಸಿಗೆ ಅವಕಾಶ ನೀಡಬೇಕು ಅಂತ ನ್ಯಾಯಪೀಠವನ್ನು ಕೋರಿದ್ದರು. ಆದರೆ ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ಆ ಅರ್ಜಿಯನ್ನು ವಜಾಗೊಳಿಸುವ ಮೂಲಕ ಮಹತ್ವದ ತೀರ್ಪು ನೀಡಿದೆ.

ಮನೆಯೂಟದ ಅರ್ಜಿ ವಜಾ ಆಗಲು ಕಾರಣ ಏನು?

  • ಕಾರಣ 01: ಕರ್ನಾಟಕ ಪ್ರಿಸನ್ಸ್ ಕರೆಕ್ಷನ್ ಮ್ಯಾನ್ಯುಲ್ 2021 ರ ಸೆಕ್ಷನ್ 728 ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ.
  • ಕಾರಣ 02: ಜೈಲು ಅಧಿಕಾರಿಗಳ ವರದಿಯಲ್ಲಿ ಮನೆಯೂಟ ಅವಶ್ಯಕತೆ ಕಾಣಿಸ್ತಿಲ್ಲ. ದರ್ಶನ್​​ ಊಟದ ಬಗ್ಗೆ ವರದಿ ನೀಡಿದ್ದ ಜೈಲಿನ ಅಧಿಕಾರಿಗಳು.
  • ಕಾರಣ 03: ಮನೆಯೂಟ ಪೂರೈಕೆ ಸಂಬಂಧ ಪೂರಕವಾದ ಪ್ರಮಾಣ ಪತ್ರಗಳಿಲ್ಲ. ಮನೆ ಊಟದ ಅವಶ್ಯಕತೆ ಸಂಬಂಧ ವೈದ್ಯಕೀಯ ಪ್ರಮಾಣಪತ್ರಗಳಿಲ್ಲ.
    ಈ ಮೇಲಿನ ಮೂರು ಅಂಶಗಳನ್ನು ಇಟ್ಟುಕೊಂಡು ನಟ ದರ್ಶನ್ ಅವರ ಅರ್ಜಿಯನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ವಜಾ ಮಾಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More