/newsfirstlive-kannada/media/post_attachments/wp-content/uploads/2024/06/DARSHAN-JAIL-2-1.jpg)
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿದ ನಟ ದರ್ಶನ್ ತಮಗೆ ಜೈಲೂಟ ಬೇಡ ಮನೆಯೂಟಕ್ಕೆ ಅವಕಾಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ 24ನೇ ಎಸಿಎಂಎಂ ನ್ಯಾಯಾಲಯ ದರ್ಶನ್ ಮನೆಯೂಟದ ಅರ್ಜಿಯನ್ನು ವಜಾ ಮಾಡಿ ಮಹತ್ವದ ಆದೇಶ ನೀಡಿದೆ.
ಇದನ್ನೂ ಓದಿ:‘ದರ್ಶನ್ ತುಂಬಾ ಮುಗ್ಧ ಹುಡುಗ’.. ದಾಸನ ಸ್ಥಿತಿ ನೆನೆದು ಕಣ್ಣೀರು ಹಾಕಿದ ಹಿರಿಯ ನಟಿ ಗಿರಿಜಾ ಲೋಕೇಶ್
ನನಗೆ ಜೈಲೂಟ ಸೇವಿಸಲು ಆಗುತ್ತಿಲ್ಲ. ಬದಲಾಗಿ ಮನೆಯೂಟಕ್ಕೆ ಅವಕಾಶ ನೀಡುವಂತೆ ನಟ ದರ್ಶನ್ ಅವರು ಅರ್ಜಿ ಸಲ್ಲಿಸಿದ್ದರು. ಆದರೆ ವಾದ, ಪ್ರತಿವಾದ ಆಲಿಸಿದ 24ನೇ ಎಸಿಎಂಎಂ ಕೋರ್ಟ್ನಿಂದ ಅರ್ಜಿಯನ್ನು ವಜಾ ಮಾಡಿದೆ. ಈ ಹಿಂದೆ ನಟ ದರ್ಶನ್ ಪರ ವಕೀಲರು ಜೈಲೂಟದಿಂದ ತಮ್ಮ ಕಕ್ಷಿದಾರರು ತೂಕ ಇಳಿಕೆಯಾಗಿದ್ದಾರೆ. ಅವರಿಗೆ ಮನೆಯೂಟಕ್ಕೆ ಅವಕಾಶ ನೀಡಬೇಕು. ಜೊತೆಗೆ ಓದೋದಕ್ಕೆ ಪುಸ್ತಕ ಹಾಸಿಗೆ ಅವಕಾಶ ನೀಡಬೇಕು ಅಂತ ನ್ಯಾಯಪೀಠವನ್ನು ಕೋರಿದ್ದರು. ಆದರೆ ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ಆ ಅರ್ಜಿಯನ್ನು ವಜಾಗೊಳಿಸುವ ಮೂಲಕ ಮಹತ್ವದ ತೀರ್ಪು ನೀಡಿದೆ.
ಮನೆಯೂಟದ ಅರ್ಜಿ ವಜಾ ಆಗಲು ಕಾರಣ ಏನು?
- ಕಾರಣ 01: ಕರ್ನಾಟಕ ಪ್ರಿಸನ್ಸ್ ಕರೆಕ್ಷನ್ ಮ್ಯಾನ್ಯುಲ್ 2021 ರ ಸೆಕ್ಷನ್ 728 ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ.
- ಕಾರಣ 02: ಜೈಲು ಅಧಿಕಾರಿಗಳ ವರದಿಯಲ್ಲಿ ಮನೆಯೂಟ ಅವಶ್ಯಕತೆ ಕಾಣಿಸ್ತಿಲ್ಲ. ದರ್ಶನ್ ಊಟದ ಬಗ್ಗೆ ವರದಿ ನೀಡಿದ್ದ ಜೈಲಿನ ಅಧಿಕಾರಿಗಳು.
- ಕಾರಣ 03: ಮನೆಯೂಟ ಪೂರೈಕೆ ಸಂಬಂಧ ಪೂರಕವಾದ ಪ್ರಮಾಣ ಪತ್ರಗಳಿಲ್ಲ. ಮನೆ ಊಟದ ಅವಶ್ಯಕತೆ ಸಂಬಂಧ ವೈದ್ಯಕೀಯ ಪ್ರಮಾಣಪತ್ರಗಳಿಲ್ಲ.
ಈ ಮೇಲಿನ ಮೂರು ಅಂಶಗಳನ್ನು ಇಟ್ಟುಕೊಂಡು ನಟ ದರ್ಶನ್ ಅವರ ಅರ್ಜಿಯನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ವಜಾ ಮಾಡಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ