Subscribe

0

user
  • Manage Subscription
  • Bookmarks
  • My Profile
  • Log Out
  • LIVE
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸಿನಿಮಾ
  • ಸೀರಿಯಲ್
  • ವಿದೇಶ
  • ಸ್ಪೋರ್ಟ್ಸ್
  • ಆರೋಗ್ಯ
  • ಲೈಫ್‌ಸ್ಟೈಲ್
  • ಎಜುಕೇಶನ್
  • ಟೆಕ್
  • Sign in with Email

By clicking the button, I accept the Terms of Use of the service and its Privacy Policy, as well as consent to the processing of personal data.

Don’t have an account? Signup

ad_close_btn
  • ಟಾಪ್ ನ್ಯೂಸ್
  • ರಾಜ್ಯ
  • ರಾಜಕೀಯ
  • ದೇಶ
  • ಸ್ಪೋರ್ಟ್ಸ್
  • ಆರೋಗ್ಯ

Powered by :

ಟಾಪ್ ನ್ಯೂಸ್ ರಾಜ್ಯ

ದರ್ಶನ್​ಗೆ ಜೈಲೂಟ ಫಿಕ್ಸ್‌.. ಮನೆಯೂಟ ಕೇಳಿದ್ದಕ್ಕೆ ಕೋರ್ಟ್‌ ಬಿಗ್ ಶಾಕ್‌; ಕಾರಣವೇನು?

author-image
Veena Gangani
25 Jul 2024 16:34 IST
Updated On 25 Jul 2024 16:37 IST
Follow Us
ಕೈಯಲ್ಲಿ ಸಿಗರೇಟ್ ಹಿಡಿದ ದರ್ಶನ್ ಮುಖದಲ್ಲಿ ನಗು.. ಡಿ ಬಾಸ್​ ಫೋಟೋ ಹಿಂದಿನ 7 ರಹಸ್ಯಗಳು ಇಲ್ಲಿವೆ!
Advertisment
  • ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್​ ಅಂಡ್​ ಗ್ಯಾಂಗ್​ ಜೈಲುವಾಸ
  • ನಟ ದರ್ಶನ್ ಮನೆ ಊಟದ ಅರ್ಜಿ ವಜಾ ಆಗಲು ಕಾರಣ ಏನು ಗೊತ್ತಾ?
  • ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯದಿಂದ ಅರ್ಜಿ ವಜಾ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲು ಸೇರಿದ ನಟ ದರ್ಶನ್ ತಮಗೆ ಜೈಲೂಟ ಬೇಡ ಮನೆಯೂಟಕ್ಕೆ ಅವಕಾಶ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ 24ನೇ ಎಸಿಎಂಎಂ ನ್ಯಾಯಾಲಯ ದರ್ಶನ್​ ಮನೆಯೂಟದ ಅರ್ಜಿಯನ್ನು ವಜಾ ಮಾಡಿ ಮಹತ್ವದ ಆದೇಶ ನೀಡಿದೆ.

ಇದನ್ನೂ ಓದಿ:‘ದರ್ಶನ್ ತುಂಬಾ ಮುಗ್ಧ ಹುಡುಗ’.. ದಾಸನ ಸ್ಥಿತಿ ನೆನೆದು ಕಣ್ಣೀರು ಹಾಕಿದ ಹಿರಿಯ ನಟಿ ಗಿರಿಜಾ ಲೋಕೇಶ್​

ನನಗೆ ಜೈಲೂಟ ಸೇವಿಸಲು ಆಗುತ್ತಿಲ್ಲ. ಬದಲಾಗಿ ಮನೆಯೂಟಕ್ಕೆ ಅವಕಾಶ ನೀಡುವಂತೆ ನಟ ದರ್ಶನ್​ ಅವರು ಅರ್ಜಿ ಸಲ್ಲಿಸಿದ್ದರು. ಆದರೆ ವಾದ, ಪ್ರತಿವಾದ ಆಲಿಸಿದ 24ನೇ ಎಸಿಎಂಎಂ ಕೋರ್ಟ್​ನಿಂದ ಅರ್ಜಿಯನ್ನು ವಜಾ ಮಾಡಿದೆ. ಈ ಹಿಂದೆ ನಟ ದರ್ಶನ್ ಪರ ವಕೀಲರು ಜೈಲೂಟದಿಂದ ತಮ್ಮ ಕಕ್ಷಿದಾರರು ತೂಕ ಇಳಿಕೆಯಾಗಿದ್ದಾರೆ. ಅವರಿಗೆ ಮನೆಯೂಟಕ್ಕೆ ಅವಕಾಶ ನೀಡಬೇಕು. ಜೊತೆಗೆ ಓದೋದಕ್ಕೆ ಪುಸ್ತಕ ಹಾಸಿಗೆ ಅವಕಾಶ ನೀಡಬೇಕು ಅಂತ ನ್ಯಾಯಪೀಠವನ್ನು ಕೋರಿದ್ದರು. ಆದರೆ ಇಂದು ಬೆಂಗಳೂರಿನ ಆರ್ಥಿಕ ಅಪರಾಧಗಳ ನ್ಯಾಯಾಲಯ ಆ ಅರ್ಜಿಯನ್ನು ವಜಾಗೊಳಿಸುವ ಮೂಲಕ ಮಹತ್ವದ ತೀರ್ಪು ನೀಡಿದೆ.

publive-image

ಮನೆಯೂಟದ ಅರ್ಜಿ ವಜಾ ಆಗಲು ಕಾರಣ ಏನು?

  • ಕಾರಣ 01: ಕರ್ನಾಟಕ ಪ್ರಿಸನ್ಸ್ ಕರೆಕ್ಷನ್ ಮ್ಯಾನ್ಯುಲ್ 2021 ರ ಸೆಕ್ಷನ್ 728 ರ ಪ್ರಕಾರ ಕೊಲೆ ಆರೋಪಿಗೆ ಮನೆ ಊಟಕ್ಕೆ ಅವಕಾಶ ಇಲ್ಲ.
  • ಕಾರಣ 02: ಜೈಲು ಅಧಿಕಾರಿಗಳ ವರದಿಯಲ್ಲಿ ಮನೆಯೂಟ ಅವಶ್ಯಕತೆ ಕಾಣಿಸ್ತಿಲ್ಲ. ದರ್ಶನ್​​ ಊಟದ ಬಗ್ಗೆ ವರದಿ ನೀಡಿದ್ದ ಜೈಲಿನ ಅಧಿಕಾರಿಗಳು.
  • ಕಾರಣ 03: ಮನೆಯೂಟ ಪೂರೈಕೆ ಸಂಬಂಧ ಪೂರಕವಾದ ಪ್ರಮಾಣ ಪತ್ರಗಳಿಲ್ಲ. ಮನೆ ಊಟದ ಅವಶ್ಯಕತೆ ಸಂಬಂಧ ವೈದ್ಯಕೀಯ ಪ್ರಮಾಣಪತ್ರಗಳಿಲ್ಲ.
    ಈ ಮೇಲಿನ ಮೂರು ಅಂಶಗಳನ್ನು ಇಟ್ಟುಕೊಂಡು ನಟ ದರ್ಶನ್ ಅವರ ಅರ್ಜಿಯನ್ನು ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ವಜಾ ಮಾಡಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment
FOLLOW NEWSFIRST FOR
LATEST UPDATES
YouTubeFacebookTwitterInstagram
Subscribe to our Newsletter! Be the first to get exclusive offers and the latest news
logo

Related Articles
Read the Next Article
Latest Stories
Subscribe to our Newsletter! Be the first to get exclusive offers and the latest news



Quick Links

  • IC
  • GRIEVANCE
  • FEED
  • CONTACT US

Olecom Media Pvt Ltd. © 2025

Powered by