Big Breaking: ಆರೋಪಿ ದರ್ಶನ್​​​ಗೆ ಜೈಲೇ ಗತಿ.. ಜಾಮೀನು ಅರ್ಜಿ ವಜಾ!

author-image
Ganesh
Updated On
ದರ್ಶನ್‌ ಕಾಯುತ್ತಿದ್ದ ದಿನ ಬಂದೇ ಬಿಡ್ತಾ.. 3 ತಿಂಗಳ ಜಾಮೀನು ಸಿಗುತ್ತಾ? ಮೈಸೂರಿಗೆ ಶಿಫ್ಟ್ ಆಗ್ತಾರಾ?
Advertisment
  • ಜೈಲಲ್ಲಿರುವ ಆರೋಪಿ ದರ್ಶನ್​ ಬೇಲ್ ‘ಭವಿಷ್ಯ’ ನಿರ್ಧಾರ ಆಗಿದೆ
  • ಬೆಂಗಳೂರಿನ 57ನೇ CCH ಕೋರ್ಟ್​ನಿಂದ ಮಹತ್ವದ ತೀರ್ಪು ಪ್ರಕಟ
  • ಜಾಮೀನು ಕೊಡಲೇಬೇಕೆಂದು ವಕೀಲ ಸಿ.ವಿ ನಾಗೇಶ್ ವಾದಿಸಿದ್ದರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲು ಸೇರಿರುವ A-2 ದರ್ಶನ್​ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ ಆಗಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ಬೆಂಗಳೂರಿನ 57ನೇ CCH ಕೋರ್ಟ್ ಜಾಮೀನು ನೀಡಲು ನಿರಾಕರಿಸಿದೆ. ಆ ಮೂಲಕ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್​ಗೆ ಬಿಗ್ ಶಾಕ್ ಆಗಿದೆ.

publive-image

ಏನಿದು ಪ್ರಕರಣ..?
ರೇಣುಕಾಸ್ವಾಮಿ ವಿರುದ್ಧ ನಟಿ ಪವಿತ್ರಗೌಡಗೆ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ ಆರೋಪ ಇತ್ತು. ಇದೇ ಕಾರಣಕ್ಕೆ ಕಳೆದ ಜೂನ್​​ನಲ್ಲಿ ರೇಣುಕಾಸ್ವಾಮಿಯನ್ನು ದರ್ಶನ್ ಅಂಡ್​ ಗ್ಯಾಂಗ್ ಅಪಹರಿಸಿ ಬೆಂಗಳೂರಿಗೆ ಕರೆದುಕೊಂಡು ಬಂದಿತ್ತು. ಈ ವೇಳೆ ದರ್ಶನ್ ಅಂಡ್​ ಗ್ಯಾಂಗ್​ ನಡೆಸಿದ್ದ ಮಾರಣಾಂತಿಕ ಹಲ್ಲೆಗೆ ರೇಣುಕಾಸ್ವಾಮಿ ಜೀವ ಕಳೆದುಕೊಂಡಿದ್ದರು ಎಂಬ ಆರೋಪ ಇತ್ತು. ಇದರ ತನಿಖೆ ನಡೆಸಿದ್ದ ಬೆಂಗಳೂರು ಪೊಲೀಸರು ಒಟ್ಟು 17 ಆರೋಪಿಗಳನ್ನು ಬಂಧಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ್ದ ಪೊಲೀಸರು, 3,991 ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಈ ಬೆನ್ನಲ್ಲೇ ದರ್ಶನ್ ಪರ ವಕೀಲರು ಬೆಂಗಳೂರಿನ ಕೋರ್ಟ್​ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ:ದರ್ಶನ್ ಸಿಗ್ನಲ್ ಬಳಿಕ DBoss ಸೆಲೆಬ್ರಿಟಿಸ್‌ಗೆ ವಿಜಯಲಕ್ಷ್ಮಿ ಮೆಸೇಜ್‌.. ಫ್ಯಾನ್ಸ್‌ಗೆ ಗುಡ್‌ನ್ಯೂಸ್‌!

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment