Breaking: ದರ್ಶನ್​​ಗೆ ಬಿಗ್​ ರಿಲೀಫ್; ಹೈಕೋರ್ಟ್​ನಿಂದ ಷರತ್ತುಬದ್ಧ ಜಾಮೀನು ಮಂಜೂರು

author-image
Ganesh
Updated On
ಸುಪ್ರೀಂ ಕಟಕಟೆಗೆ ಹೋಗುತ್ತಾ ದರ್ಶನ್ ಕೇಸ್..? ಬೆಂಗಳೂರು ಪೊಲೀಸರಿಂದ ಮಹತ್ವದ ಪ್ಲಾನ್
Advertisment
  • ರೇಣುಕಾಸ್ವಾಮಿ ಕೇಸ್​ನಲ್ಲಿ ದರ್ಶನ್​​ಗೆ ಜಾಮೀನು ಮಂಜೂರು
  • ಪವಿತ್ರ ಗೌಡಗೂ ರಿಲೀಫ್, ಒಟ್ಟು 7 ಮಂದಿಗೆ ಬಿಗ್ ರಿಲೀಫ್
  • ಹೈಕೋರ್ಟ್​ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿಯವರಿಂದ ಆದೇಶ

ಬೆಂಗಳೂರು: ರೇಣುಕ ಸ್ವಾಮಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಅವರಿಗೆ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ.

ನಟ ದರ್ಶನ್ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎ1 ಪವಿತ್ರಗೌಡ, ಎ2 ದರ್ಶನ್, ಎ4 ಜಗದೀಶ್, ಎ7 ಅನುಕುಮಾರ್ ಅಲಿಯಾಸ್ ಅನು, ಎ 12 ಲಕ್ಷ್ಮಣ್, ಎ 11ನಾಗರಾಜ್, ಎ 14 ಪ್ರದೋಷ್​ಗೆ ಜಾಮಿನು ಸಿಕ್ಕಿದೆ. ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರು ಜಾಮೀನು ಮಂಜೂರು ಮಾಡಿ ಆದೇಶ ನೀಡಿದ್ದಾರೆ.

ಇದನ್ನೂ ಓದಿ:ಕೋರ್ಟ್​​ನಲ್ಲಿ ಹೀಗಾದರೆ ಜೈಲೇ ಗತಿ.. ಅಲ್ಲು ಅರ್ಜುನ್​​​​​ ಯಾವ ಜೈಲು ಸೇರ್ತಾರೆ..?

ದರ್ಶನ್ ಅವರು ಈಗಾಗಲೇ ಮಧ್ಯಂತರ ಜಾಮೀನು ಪಡೆದುಕೊಂಡಿದ್ದರು. ಇದೀಗ ಅವರಿಗೆ ಪೂರ್ಣಾವಧಿಗೆ ಜಾಮೀನು ಮಂಜೂರು ಆಗಿದೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ದರ್ಶನ್​ ಚಿಕಿತ್ಸೆಗಾಗಿ ಮಧ್ಯಂತರ ಜಾಮೀನು ಪಡೆದು ಬೆಂಗಳೂರಿನ ಬಿಜಿಎಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment