ಇಂದು ಬೆಳಗ್ಗೆ ಕಾಮಾಕ್ಷಿಪಾಳ್ಯ ಪೊಲೀಸರಿಂದ ನಟ ದರ್ಶನ್ ಬಂಧನ
ಅನ್ನಪೂರ್ಣ ನಗರ ಪೊಲೀಸ್ ಠಾಣೆಯಲ್ಲಿ ನಟ ದರ್ಶನ್ ವಿಚಾರಣೆ
ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಬಂದ ಕಾಮಾಕ್ಷಿಪಾಳ್ಯ ಪೊಲೀಸರು
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರೋ ನಟ ದರ್ಶನ್ ಅವರಿಗೆ ಮೆಡಿಕಲ್ ಚೆಕಪ್ ಮಾಡಲಾಗಿದೆ. ಪೊಲೀಸ್ ಠಾಣೆಯಲ್ಲಿ ದರ್ಶನ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ.
ಇದನ್ನೂ ಓದಿ: ಮರ್ಮಾಂಗಕ್ಕೆ ಹೊಡೆತ, ಮೂಗು ಓಪನ್, ಪಕ್ಕೆಲುಬು ಕಟ್; ಅತ್ಯಂತ ಕ್ರೂರವಾಗಿ ರೇಣುಕಾಸ್ವಾಮಿ ಕೊಲೆ!
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಇಂದು ಬೆಳಗ್ಗೆ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು. ಅನ್ನಪೂರ್ಣ ನಗರ ಪೊಲೀಸ್ ಠಾಣೆಯಲ್ಲಿ ದರ್ಶನ್ ಅವರ ಪ್ರಾಥಮಿಕ ವಿಚಾರಣೆ ನಡೆಸಲಾಯಿತು. ಪೊಲೀಸರ ವಿಚಾರಣೆ ವೇಳೆ ದರ್ಶನ್ ಅವರು ಗ್ಯಾಸ್ಟ್ರಿಕ್ ಹಾಗೂ ಸ್ವಲ್ಪ ಎದೆನೋವು ಇದೆ ಎಂದಿದ್ದರು.
ಎದೆನೋವು ಎಂದು ಹೇಳಿದ ಹಿನ್ನೆಲೆಯಲ್ಲಿ ಅನ್ನಪೂರ್ಣ ನಗರ ಪೊಲೀಸ್ ಠಾಣೆಯಿಂದ ಬಿಗಿ ಭದ್ರತೆಯಲ್ಲಿ ದರ್ಶನ್ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆತರಲಾಯಿತು. ಇದರ ಜೊತೆಗೆ ಇಸಿಜಿ, ಬಿಪಿ, ಶುಗರ್, ಯೂರಿನ್ ಟೆಸ್ಟ್, ಪಲ್ಸ್ ರೇಟ್ ಸೇರಿ ಜನರಲ್ ಚೆಕಪ್ ಮಾಡಲಾಗಿದೆ. ಬೌರಿಂಗ್ ಆಸ್ಪತ್ರೆಯ ಎಂಎಸ್ ಡಾ. ಕೆಂಪರಾಜುರಿಂದ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ.
ಇದನ್ನೂ ಓದಿ: ಕೊಲೆ ಪ್ರಕರಣದಲ್ಲಿ ದರ್ಶನ್ಗೆ ಜೀವಾವಧಿ ಶಿಕ್ಷೆ ಆಗುತ್ತಾ? ಸೆಕ್ಷನ್ 302 ಬಗ್ಗೆ ರಮ್ಯಾ ಧ್ವನಿ ಎತ್ತಿದ್ದೇಕೆ?
ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್ ಮುಗಿದ ನಂತರ ದರ್ಶನ್ ಅವರನ್ನು ಜಡ್ಜ್ ಮುಂದೆ ಹಾಜರುಪಡಿಸಲಾಗುತ್ತಿದೆ. ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಬಳಿಕ ನಟ ದರ್ಶನ್ ಅವರಿಗೆ ಜೈಲಾ ಅಥವಾ ಪೊಲೀಸ್ ಕಸ್ಟಡಿಯ ಅನ್ನೋದು ನಿರ್ಧಾರವಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಇಂದು ಬೆಳಗ್ಗೆ ಕಾಮಾಕ್ಷಿಪಾಳ್ಯ ಪೊಲೀಸರಿಂದ ನಟ ದರ್ಶನ್ ಬಂಧನ
ಅನ್ನಪೂರ್ಣ ನಗರ ಪೊಲೀಸ್ ಠಾಣೆಯಲ್ಲಿ ನಟ ದರ್ಶನ್ ವಿಚಾರಣೆ
ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಬಂದ ಕಾಮಾಕ್ಷಿಪಾಳ್ಯ ಪೊಲೀಸರು
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನದಲ್ಲಿರೋ ನಟ ದರ್ಶನ್ ಅವರಿಗೆ ಮೆಡಿಕಲ್ ಚೆಕಪ್ ಮಾಡಲಾಗಿದೆ. ಪೊಲೀಸ್ ಠಾಣೆಯಲ್ಲಿ ದರ್ಶನ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೌರಿಂಗ್ ಆಸ್ಪತ್ರೆ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ.
ಇದನ್ನೂ ಓದಿ: ಮರ್ಮಾಂಗಕ್ಕೆ ಹೊಡೆತ, ಮೂಗು ಓಪನ್, ಪಕ್ಕೆಲುಬು ಕಟ್; ಅತ್ಯಂತ ಕ್ರೂರವಾಗಿ ರೇಣುಕಾಸ್ವಾಮಿ ಕೊಲೆ!
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಇಂದು ಬೆಳಗ್ಗೆ ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು. ಅನ್ನಪೂರ್ಣ ನಗರ ಪೊಲೀಸ್ ಠಾಣೆಯಲ್ಲಿ ದರ್ಶನ್ ಅವರ ಪ್ರಾಥಮಿಕ ವಿಚಾರಣೆ ನಡೆಸಲಾಯಿತು. ಪೊಲೀಸರ ವಿಚಾರಣೆ ವೇಳೆ ದರ್ಶನ್ ಅವರು ಗ್ಯಾಸ್ಟ್ರಿಕ್ ಹಾಗೂ ಸ್ವಲ್ಪ ಎದೆನೋವು ಇದೆ ಎಂದಿದ್ದರು.
ಎದೆನೋವು ಎಂದು ಹೇಳಿದ ಹಿನ್ನೆಲೆಯಲ್ಲಿ ಅನ್ನಪೂರ್ಣ ನಗರ ಪೊಲೀಸ್ ಠಾಣೆಯಿಂದ ಬಿಗಿ ಭದ್ರತೆಯಲ್ಲಿ ದರ್ಶನ್ ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆತರಲಾಯಿತು. ಇದರ ಜೊತೆಗೆ ಇಸಿಜಿ, ಬಿಪಿ, ಶುಗರ್, ಯೂರಿನ್ ಟೆಸ್ಟ್, ಪಲ್ಸ್ ರೇಟ್ ಸೇರಿ ಜನರಲ್ ಚೆಕಪ್ ಮಾಡಲಾಗಿದೆ. ಬೌರಿಂಗ್ ಆಸ್ಪತ್ರೆಯ ಎಂಎಸ್ ಡಾ. ಕೆಂಪರಾಜುರಿಂದ ವೈದ್ಯಕೀಯ ಪರೀಕ್ಷೆ ಮಾಡಲಾಗಿದೆ.
ಇದನ್ನೂ ಓದಿ: ಕೊಲೆ ಪ್ರಕರಣದಲ್ಲಿ ದರ್ಶನ್ಗೆ ಜೀವಾವಧಿ ಶಿಕ್ಷೆ ಆಗುತ್ತಾ? ಸೆಕ್ಷನ್ 302 ಬಗ್ಗೆ ರಮ್ಯಾ ಧ್ವನಿ ಎತ್ತಿದ್ದೇಕೆ?
ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಚೆಕಪ್ ಮುಗಿದ ನಂತರ ದರ್ಶನ್ ಅವರನ್ನು ಜಡ್ಜ್ ಮುಂದೆ ಹಾಜರುಪಡಿಸಲಾಗುತ್ತಿದೆ. ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಬಳಿಕ ನಟ ದರ್ಶನ್ ಅವರಿಗೆ ಜೈಲಾ ಅಥವಾ ಪೊಲೀಸ್ ಕಸ್ಟಡಿಯ ಅನ್ನೋದು ನಿರ್ಧಾರವಾಗಲಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ