ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ದರ್ಶನ್
ಹತ್ಯೆ ಪ್ರಕರಣದಲ್ಲಿ ಎ2 ಆರೋಪಿ ದರ್ಶನ್, ಎ1 ಪವಿತ್ರಾಗೌಡ
ವಿಚಾರಣಾಧೀನ ಕೈದಿಯಾಗಿ ಪರಪ್ಪನ ಜೈಲಿನಲ್ಲಿರುವ ದರ್ಶನ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರದ ಜೈಲು ಪಾಲಾಗಿದ್ದಾರೆ. ಇತ್ತೀಚೆಗಷ್ಟೇ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ಅವರು ಜೈಲಿಗೆ ಭೇಟಿ ನೀಡಿ ದರ್ಶನ್ ಅವರನ್ನು ನೋಡಿಕೊಂಡು ಹೋಗಿದ್ದರು. ಇದರ ಬೆನ್ನಲ್ಲೇ ದರ್ಶನ್ ಅವರ ತಾಯಿ ಮೀನಾ ಹಾಗೂ ಸಹೋದರ ದಿನಕರ ತೂಗುದೀಪ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ.
ಇದನ್ನೂ ಓದಿ: ಪಾಂಡ್ಯ ಮ್ಯಾಚ್ ವಿನ್ನಿಂಗ್ ಆಟಕ್ಕೆ ಸೆಲ್ಯೂಟ್.. ಗೆಲುವಿನ ಹಿಂದೆ ಹಾರ್ದಿಕ್ ನುಂಗಿರುವ ನೋವುಗಳು ಎಷ್ಟು ಗೊತ್ತಾ..?
ಕೊಲೆ ಕೇಸ್ನಲ್ಲಿ ನಟ ದರ್ಶನ್ ಅವರು ಜೈಲು ಸೇರಿದ ಮೇಲೆ ನಿರ್ದೇಶಕ ಪ್ರೇಮ್, ಇವರ ಪತ್ನಿ ರಕ್ಷಿತಾ ಪ್ರೇಮ್ ಅವರು ಜೈಲಿಗೆ ಭೇಟಿ ನೀಡಿದ್ದರು. ದರ್ಶನ್ ಪುತ್ರ, ಪತ್ನಿ ಕೂಡ ಹೋಗಿ ಮಾತಾಡಿಸಿಕೊಂಡು ಬಂದಿದ್ದರು. ಚಿತ್ರರಂಗದ ಕೆಲವರು ದರ್ಶನ್ರನ್ನು ನೋಡಿಕೊಂಡು ಹೋಗುತ್ತಿದ್ದಾರೆ. ಆದರೆ ಇದುವರೆಗೂ ದರ್ಶನ್ ಅವರನ್ನು ನೋಡಲು ತಾಯಿ, ಸಹೋದರ ಬಂದಿರಲಿಲ್ಲ ಎಂದು ಹೇಳಲಾಗುತ್ತಿತ್ತು. ಇದೀಗ ದರ್ಶನ್ ಅವರ ತಾಯಿ ಮೀನಾ ತೂಗುದೀಪ ಮತ್ತು ಸಹೋದರ ದಿನಕರ ತೂಗುದೀಪ ಅವರು ಜೈಲಿಗೆ ಭೇಟಿ ನೀಡಿದ್ದಾರೆ. ಈ ವೇಳೆ ದರ್ಶನ್ ಅವರನ್ನು ನೋಡಿ ತಾಯಿ ಭಾವುಕರಾಗಿದ್ದಾರೆ.
ಇದನ್ನೂ ಓದಿ: RCB ಫ್ಯಾನ್ಸ್ಗೆ ಗುಡ್ನ್ಯೂಸ್.. ಬೆಂಗಳೂರು ಫ್ರಾಂಚೈಸಿಯಿಂದ ಕಾರ್ತಿಕ್ಗೆ ಮಹತ್ವದ ಜವಾಬ್ದಾರಿ, ಏನದು?
ಪ್ರಕರಣದಲ್ಲಿ ಎ2 ಆರೋಪಿ ಆಗಿರುವ ದರ್ಶನ್ ಅವರು ಜೈಲು ಸೇರಿದ ಮೇಲೆ ತೀರಾ ನೊಂದಿದ್ದ ತಾಯಿ ಹಾಗೂ ಸಹೋದರ ಬೇಸರಗೊಂಡಿದ್ದರು. ಮೈಸೂರಿನ ನಿವಾಸದಲ್ಲಿದ್ದ ಇವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಡಲು ನಿರಾಕರಿಸಿದ್ದರು. ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ದರ್ಶನ್, ಪವಿತ್ರಾಗೌಡ ಸೇರಿ ಒಟ್ಟು 17 ಆರೋಪಿಗಳು ಜೈಲಿಗೆ ಹೋಗಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿರುವ ದರ್ಶನ್
ಹತ್ಯೆ ಪ್ರಕರಣದಲ್ಲಿ ಎ2 ಆರೋಪಿ ದರ್ಶನ್, ಎ1 ಪವಿತ್ರಾಗೌಡ
ವಿಚಾರಣಾಧೀನ ಕೈದಿಯಾಗಿ ಪರಪ್ಪನ ಜೈಲಿನಲ್ಲಿರುವ ದರ್ಶನ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರದ ಜೈಲು ಪಾಲಾಗಿದ್ದಾರೆ. ಇತ್ತೀಚೆಗಷ್ಟೇ ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೀಶ್ ಅವರು ಜೈಲಿಗೆ ಭೇಟಿ ನೀಡಿ ದರ್ಶನ್ ಅವರನ್ನು ನೋಡಿಕೊಂಡು ಹೋಗಿದ್ದರು. ಇದರ ಬೆನ್ನಲ್ಲೇ ದರ್ಶನ್ ಅವರ ತಾಯಿ ಮೀನಾ ಹಾಗೂ ಸಹೋದರ ದಿನಕರ ತೂಗುದೀಪ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದ್ದಾರೆ.
ಇದನ್ನೂ ಓದಿ: ಪಾಂಡ್ಯ ಮ್ಯಾಚ್ ವಿನ್ನಿಂಗ್ ಆಟಕ್ಕೆ ಸೆಲ್ಯೂಟ್.. ಗೆಲುವಿನ ಹಿಂದೆ ಹಾರ್ದಿಕ್ ನುಂಗಿರುವ ನೋವುಗಳು ಎಷ್ಟು ಗೊತ್ತಾ..?
ಕೊಲೆ ಕೇಸ್ನಲ್ಲಿ ನಟ ದರ್ಶನ್ ಅವರು ಜೈಲು ಸೇರಿದ ಮೇಲೆ ನಿರ್ದೇಶಕ ಪ್ರೇಮ್, ಇವರ ಪತ್ನಿ ರಕ್ಷಿತಾ ಪ್ರೇಮ್ ಅವರು ಜೈಲಿಗೆ ಭೇಟಿ ನೀಡಿದ್ದರು. ದರ್ಶನ್ ಪುತ್ರ, ಪತ್ನಿ ಕೂಡ ಹೋಗಿ ಮಾತಾಡಿಸಿಕೊಂಡು ಬಂದಿದ್ದರು. ಚಿತ್ರರಂಗದ ಕೆಲವರು ದರ್ಶನ್ರನ್ನು ನೋಡಿಕೊಂಡು ಹೋಗುತ್ತಿದ್ದಾರೆ. ಆದರೆ ಇದುವರೆಗೂ ದರ್ಶನ್ ಅವರನ್ನು ನೋಡಲು ತಾಯಿ, ಸಹೋದರ ಬಂದಿರಲಿಲ್ಲ ಎಂದು ಹೇಳಲಾಗುತ್ತಿತ್ತು. ಇದೀಗ ದರ್ಶನ್ ಅವರ ತಾಯಿ ಮೀನಾ ತೂಗುದೀಪ ಮತ್ತು ಸಹೋದರ ದಿನಕರ ತೂಗುದೀಪ ಅವರು ಜೈಲಿಗೆ ಭೇಟಿ ನೀಡಿದ್ದಾರೆ. ಈ ವೇಳೆ ದರ್ಶನ್ ಅವರನ್ನು ನೋಡಿ ತಾಯಿ ಭಾವುಕರಾಗಿದ್ದಾರೆ.
ಇದನ್ನೂ ಓದಿ: RCB ಫ್ಯಾನ್ಸ್ಗೆ ಗುಡ್ನ್ಯೂಸ್.. ಬೆಂಗಳೂರು ಫ್ರಾಂಚೈಸಿಯಿಂದ ಕಾರ್ತಿಕ್ಗೆ ಮಹತ್ವದ ಜವಾಬ್ದಾರಿ, ಏನದು?
ಪ್ರಕರಣದಲ್ಲಿ ಎ2 ಆರೋಪಿ ಆಗಿರುವ ದರ್ಶನ್ ಅವರು ಜೈಲು ಸೇರಿದ ಮೇಲೆ ತೀರಾ ನೊಂದಿದ್ದ ತಾಯಿ ಹಾಗೂ ಸಹೋದರ ಬೇಸರಗೊಂಡಿದ್ದರು. ಮೈಸೂರಿನ ನಿವಾಸದಲ್ಲಿದ್ದ ಇವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಡಲು ನಿರಾಕರಿಸಿದ್ದರು. ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ದರ್ಶನ್, ಪವಿತ್ರಾಗೌಡ ಸೇರಿ ಒಟ್ಟು 17 ಆರೋಪಿಗಳು ಜೈಲಿಗೆ ಹೋಗಿದ್ದಾರೆ.
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ