/newsfirstlive-kannada/media/post_attachments/wp-content/uploads/2025/02/Darshan-in-Court.jpg)
ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮತ್ತೆ ಕೋರ್ಟ್ ಮೆಟ್ಟಿಲೇರಿದ್ದಾರೆ. ವಿದೇಶಕ್ಕೆ ಹಾರಲು ನಟ ಸಿದ್ಧತೆ ಮಾಡಿಕೊಂಡಿದ್ದು, ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾರೆ.
ಅವರ ಬಹು ನಿರೀಕ್ಷಿತ ಸಿನಿಮಾ ಡೆವಿಲ್ ಚಿತ್ರೀಕರಣ ಸಂಬಂಧ ವಿದೇಶಕ್ಕೆ ತೆರಳಲು ನಿರ್ಧರಿಸಲಾಗಿದೆ. ದುಬೈ ಮತ್ತು ಯೂರೋಪ್ಗೆ ತೆರಳಲು ಅವಕಾಶ ಕೋರಿ ಸಿಆರ್ಪಿಸಿ ಸೆಕ್ಷನ್ 439(1) (b) ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಒಟ್ಟು 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಲಾಗಿದೆ. ಜೂನ್ 1 ರಿಂದ 25 ರವರೆಗೆ ವಿದೇಶಕ್ಕೆ ತೆರಳಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಅಬ್ದುಲ್ ರಹಿಮಾನ್ನ ಬರ್ಬರ ಹತ್ಯೆ.. ಸದ್ಯ ಹೇಗಿದೆ ಮಂಗಳೂರು ಪರಿಸ್ಥಿತಿ..?
ಈ ಹಿಂದೆ ಹೈಕೋರ್ಟ್ ಜಾಮೀನು ನೀಡುವಾಗ ಬೆಂಗಳೂರು ಬಿಡುವಂತಿಲ್ಲ ಎಂಬ ಷರತ್ತು ವಿಧಿಸಿತ್ತು. ಕೊನೆಗೆ ದೇಶಾದ್ಯಂತ ಪ್ರಯಾಣಕ್ಕೆ ಅನುಮತಿ ನೀಡಿತ್ತು. ಸಿನಿಮಾ ಚಿತ್ರೀಕರಣ ಕಾರಣ ನೀಡಿ ಷರತ್ತುಗಳನ್ನು ಸಡಿಸಿಲಿಕೊಂಡಿದ್ದರು. ಇದೀಗ ಅದೇ ಚಿತ್ರೀಕರಣ ಕಾರಣ ವಿದೇಶಕ್ಕೆ ತೆರಳಲು ಅನುಮತಿ ಕೇಳಿದ್ದಾರೆ.
ಇದನ್ನೂ ಓದಿ: ಅಬ್ದುಲ್ ರಹೀಮಾನ್ ಪ್ರಕರಣಕ್ಕೆ ಟ್ವಿಸ್ಟ್ -ಗಾಯಾಳು ಶಫಿಯಿಂದ ಮಹತ್ವದ ಮಾಹಿತಿ..
ವಿಶೇಷ ಸೂಚನೆ: ಕ್ರಿಕೆಟ್ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್ಫಸ್ಟ್ಚಾನೆಲ್ನಲ್ಲಿ ‘ರನ್ ಭೂಮಿ’ ವೀಕ್ಷಿಸಿ