Advertisment

ಪತ್ನಿ ವಿಜಯಲಕ್ಷ್ಮೀ ಜೊತೆ ಚಾಮುಂಡಿ ಬೆಟ್ಟಕ್ಕೆ ಬಂದ ನಟ ದರ್ಶನ್.. ಏನು ವಿಶೇಷ ಗೊತ್ತಾ..?

author-image
Ganesh
Updated On
ಒಂದೇ ಫ್ರೇಮ್​ನಲ್ಲಿ ನಟ ದರ್ಶನ್​ ಇಡೀ ಕುಟುಂಬ.. ಫೋಟೋ ಇಲ್ಲಿದೆ..
Advertisment
  • ಚಾಮುಂಡೇಶ್ವರಿ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ
  • ಮುಂಜಾನೆ 3:30 ರಿಂದ ವಿವಿಧ ಪೂಜಾ ಕಾರ್ಯಕ್ರಮ
  • ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ನಿಷೇಧ

ಮೈಸೂರು: ಆಷಾಢ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ನಟ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ್ದರು. ದಂಪತಿ ಸಮೇತ ಚಾಮುಂಡಿ ತಾಯಿಯ ದರ್ಶನ ಪಡೆದು ವಾಪಸ್ ಆಗಿದ್ದಾರೆ. ಪ್ರತಿ ವರ್ಷವೂ ಆಷಾಢದಲ್ಲಿ ದರ್ಶನ್ ಚಾಮುಂಡಿಯ ಆಶೀರ್ವಾದ ಪಡೆಯುತ್ತಾರೆ. ಕಳೆದ ಬಾರಿ ಜೈಲಿನಲ್ಲಿದ್ದ ಕಾರಣ ದೇವಿಯ ದರ್ಶನ ಮಾಡಿರಲಿಲ್ಲ.

Advertisment

publive-image

ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ

ನಟ ದರ್ಶನ್ ಮಾತ್ರವಲ್ಲ, ನಾಡ ಅದಿದೇವತೆಯ ದರ್ಶನಕ್ಕೆ ಭಕ್ತ ಸಾಗರವೇ ಹರಿದುಬಂದಿದೆ. ದೇಗುಲದಲ್ಲಿ ಬೆಳಗಿನ ಜಾವದಿಂದಲೇ ವಿಶೇಷ ಪೂಜಾ ಕೈಂಕಾರ್ಯ ಶುರುವಾಗಿವೆ. ಮುಂಜಾನೆ 3:30ಕ್ಕೆ ವಿವಿಧ ಅಭಿಷೇಕಗಳು ನಡೆದಿವೆ. ಬೆಳಗ್ಗೆ 6ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಹೀಗಾಗಿ ಸಾವಿರಾರು ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೆ ಜೋರು ಮಳೆ.. ಎರಡು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

publive-image

ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ವಿವಿಧ ಬಗೆಯ ಹಣ್ಣುಗಳಿಂದ ಅಲಂಕಾರ ಮಾಡಲಾಗಿದೆ. ನೂಕು-ನುಗ್ಗುಲು ಉಂಟಾಗದ ರೀತಿಯಲ್ಲಿ ಬ್ಯಾರಿಕೆಡ್ ವ್ಯವಸ್ಥೆ ಮಾಡಲಾಗಿದೆ. ಟಿಕೆಟ್ ಖರೀದಿ ಮಾಡಿ ಬರುವವರಿಗೆ ಪ್ರತ್ಯೇಕ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಧರ್ಮ ದರ್ಶನ ಹಾಗೂ ಮೆಟ್ಟಿಲುಗಳ ಮೂಲಕವೂ ಭಕ್ತರು ಹರಿದು ಬರುತ್ತಿದ್ದಾರೆ. ಇನ್ನು ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ನಿಷೇಧ ಮಾಡಲಾಗಿದೆ. ಲಲಿತಮಹಲ್ ಮೈದಾನದಿಂದ ಉಚಿತ ಸಾರಿಗೆ ಬಸ್ ವ್ಯವಸ್ಥೆ ಇದೆ. ಕುಡಿಯುವ ನೀರು, ಶೌಚಾಲಯ, ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.

Advertisment

ಇದ್ನೂ ಓದಿ: ಗಿಲ್​ ದ್ವಿಶತಕ ಬೆನ್ನಲ್ಲೇ ಇಂಗ್ಲೆಂಡ್​ ಮೇಲೆ ಆಕಾಶ್ ದೀಪ್ ಸ್ಟ್ರೈಕ್.. ಫುಲ್ ಶಾಕ್ ಟ್ರೀಟ್​ಮೆಂಟ್..! 

ವಿಶೇಷ ಸೂಚನೆ: ಕ್ರಿಕೆಟ್‌ನ ಸುದ್ದಿಗಳಿಗಾಗಿ ಪ್ರತಿದಿನ ಬೆಳಗ್ಗೆ 8.30ಕ್ಕೆ ನ್ಯೂಸ್‌ಫಸ್ಟ್‌ಚಾನೆಲ್​​ನಲ್ಲಿ ‘ರನ್ ಭೂಮಿ’ ವೀಕ್ಷಿಸಿ

Advertisment
Advertisment
Advertisment