/newsfirstlive-kannada/media/post_attachments/wp-content/uploads/2024/06/darshan43.jpg)
ಬೆಂಗಳೂರು: ನಗರದ 24ನೇ ಎಸಿಎಂಎಂ ಕೋರ್ಟ್ ಆದೇಶದಂತೆ ದರ್ಶನ್ರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. ಈ ಆದೇಶದ ಪ್ರತಿ ಜೈಲು ಅಧಿಕಾರಿಗಳ ಕೈ ಸೇರಿದರೆ ಸುರಕ್ಷತೆಯ ದೃಷ್ಟಿಯಿಂದ ಇಂದು ರಾತ್ರಿಯೇ ದರ್ಶನ್ರನ್ನ ಬಳ್ಳಾರಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ.
ನಟ ದರ್ಶನ್ ಅವರ ಜೈಲಿನಲ್ಲಿನ ಸಿಗರೇಟ್ ಪಾರ್ಟಿ ಫೋಟೋ ರಾಜ್ಯಾದ್ಯಂತ ಭಾರೀ ಸೌಂಡ್ ಮಾಡಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡ ಜೈಲು ಅಧಿಕಾರಿಗಳು ದರ್ಶನ್ರನ್ನ ಬೇರೆ ಜೈಲಿಗೆ ಸ್ಥಳಾಂತರ ಮಾಡುವಂತೆ ಮನವಿ ಮಾಡಿದ್ದರು. ಅದರಂತೆ ರೇಣುಕಾಸ್ವಾಮಿ ಕೇಸ್ನ ಆರೋಪಿಗಳನ್ನೆಲ್ಲ ರಾಜ್ಯದ ಬೇರೆ ಬೇರೆ ಜೈಲಿಗೆ ಸ್ಥಳಾಂತರ ಮಾಡಿ ನಗರದ 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.
ಇದನ್ನೂ ಓದಿ: ದರ್ಶನ್ ಕೈಯಲ್ಲಿ ಸಿಗರೇಟ್, ಟೀ ಕುಡಿಯೋ ಮಗ್ ಜೊತೆ ಬೆಳ್ಳಿ ಕಡಗ; ಸೆಂಟ್ರಲ್ ಜೈಲ್ ಅಂದ್ರೆ ಹೀಗೆನಾ?
ಒಂದು ವೇಳೆ ಆದೇಶ ಪ್ರತಿ ನಾಳೆ ಬೆಳಗ್ಗೆ ಜೈಲು ಅಧಿಕಾರಿಗಳ ಕೈ ಸೇರಿದರೆ 11 ಗಂಟೆಗೆ ದರ್ಶನ್ರನ್ನ ಬಳ್ಳಾರಿ ಜೈಲಿಗೆ ಕರೆದೊಯ್ಯಲಾಗುತ್ತದೆ. ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನ ಅಧಿಕಾರಿಗಳು ರೇಣುಕಾಸ್ವಾಮಿ ಪ್ರಕರಣದ ಆರೋಪಿಗಳನ್ನು ಸ್ಥಳಾಂತರ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇನ್ನು ದರ್ಶನ್ ಅವರು ಬಳ್ಳಾರಿಯ ಬಿರು ಬಿಸಿಲಿನ ಅನುಭವ ಪಡೆಯಲಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ