/newsfirstlive-kannada/media/post_attachments/wp-content/uploads/2024/06/DARSHAN_MURDER_NEW_5.jpg)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರಿಗೆ ಕೋರ್ಟ್​, ನ್ಯಾಯಾಂಗ ಬಂಧನವನ್ನು ವಿಸ್ತರಿಸಿ ಆದೇಶ ನೀಡಿದೆ. ಜುಲೈ 18ರವರೆಗೆ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸ್​ನ ಪ್ರಕರಣದ ಎ2 ಆರೋಪಿ ದರ್ಶನ್ ಹಾಗೂ ಇತರೆ ಕೆಲ ಆರೋಪಿಗಳು ವಿಡಿಯೋ ಕಾನ್ಫೆರೆನ್ಸ್ ಮೂಲಕ ಕೋರ್ಟ್​ಗೆ ಹಾಜರಾಗಿದ್ದರು. ಬೆಂಗಳೂರು ಮತ್ತು ತುಮಕೂರು ಜೈಲಿನಿಂದ ಆರೋಪಿಗಳನ್ನ ಹಾಜರುಪಡಿಸಲಾಗಿತ್ತು. ಮಹಿಳಾ ಎ1 ಆರೋಪಿ ಪವಿತ್ರಾ ಗೌಡ ಪ್ರತ್ಯೇಕವಾಗಿ ಕೋರ್ಟ್​​ಗೆ ಹಾಜರಾಗಿದ್ದರು. ಈ ವೇಳೆ ವಿಚಾರಣೆ ನಡೆಸಿದ ಕೋರ್ಟ್​ ಜುಲೈ 18ರವರೆಗೆ ದರ್ಶನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅಂದರೆ ಇನ್ನು 14 ದಿನಗಳ ಕಾಲ ದರ್ಶನ್ ಅವರು ಜೈಲಿನಲ್ಲೇ ಇರಬೇಕಾಗಿದೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ
/newsfirstlive-kannada/media/agency_attachments/2025/07/28/2025-07-28t072019657z-newsfirst_banner_logo-2025-07-28-12-50-19.png)
Follow Us