ನಟ ದರ್ಶನ್‌ಗೆ ಬಿಗ್ ಶಾಕ್.. ನಾಳೆ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ವಿಚಾರಣೆ; ಜಾಮೀನು ರದ್ದಾಗುತ್ತಾ?

author-image
admin
Updated On
ನಟ ದರ್ಶನ್​​ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್​​ ಮೊರೆ ಹೋಗುತ್ತಾ ಸರ್ಕಾರ? ಕೇಸ್​ಗೆ ಮತ್ತೆ ಟ್ವಿಸ್ಟ್​
Advertisment
  • ನಾಳೆ ಸುಪ್ರೀಂಕೋರ್ಟ್​ನಲ್ಲಿ ದರ್ಶನ್​ ಬೇಲ್ ಅರ್ಜಿ ವಿಚಾರಣೆ
  • ದರ್ಶನ್‌ಗೆ ಜಾಮೀನು ನೀಡಿದ್ದಾಗಲೂ ಶಸ್ತ್ರಚಿಕಿತ್ಸೆ ಮಾಡಿಸಿಲ್ಲ
  • ಹೈಕೋರ್ಟ್ ಜಾಮೀನು ಆದೇಶಕ್ಕೆ ತಡೆ ನೀಡುವಂತೆ ಮನವಿ

ಪಟ್ಟಣಗೆರೆ ಶೆಡ್‌ನಲ್ಲಿ ನೆತ್ತರು ಹರಿಸಿದ್ದ ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದರು. 131 ದಿನಗಳ ಬಳಿಕ ಸೆರೆವಾಸದಿಂದ ಮುಕ್ತಿ ಪಡೆದಿರುವ ದರ್ಶನ್​ಗೆ ಇದೀಗ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ನಾಳೆ ಸುಪ್ರೀಂಕೋರ್ಟ್‌ನಲ್ಲಿ ದರ್ಶನ್ ಅವರ ಬೇಲ್ ಭವಿಷ್ಯ ನಿರ್ಧಾರವಾಗಲಿದೆ.

ನಾಳೆ ಸುಪ್ರೀಂಕೋರ್ಟ್​ನಲ್ಲಿ ದರ್ಶನ್​ ಬೇಲ್ ಅರ್ಜಿ ವಿಚಾರಣೆ ನಡೆಯುತ್ತಿದೆ. ಇಂದು ಸರ್ಕಾರಿ ಪರ ವಕೀಲರು ದರ್ಶನ್ ಪ್ರಕರಣ ಅರ್ಜಿ ವಿಚಾರವನ್ನು ಪ್ರಸ್ತಾಪ ಮಾಡಿದರು. ಶೀಘ್ರವೇ ವಿಚಾರಣೆಗೆ ಕೈಗೆತ್ತಿಕೊಳ್ಳಲು ಮನವಿ ಮಾಡಿದರು.

ನ್ಯಾ. ಪರ್ದೀವಾಲ ಅವರು ನಾಳೆ ನ್ಯಾಯಪೀಠದ ಮುಂದೆ ಪ್ರಸ್ತಾಪಿಸಲು ಸೂಚನೆ ನೀಡಿದರು. ಸುಪ್ರೀಂಕೋರ್ಟ್‌ ನ್ಯಾ. ಪರ್ದೀವಾಲ, ನ್ಯಾ. ಮಹದೇವನ್ ಪೀಠ ನಾಳೆ ದರ್ಶನ್ ಬೇಲ್ ಅರ್ಜಿ ವಿಚಾರಣೆ ಕೈಗೆತ್ತಿಕೊಳ್ಳಲಿದೆ.

ಜಾಮೀನು ಪಡೆದಿದ್ರೂ ತಪ್ಪದ ಸಂಕಷ್ಟ!
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ತೂಗುದೀಪ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್‌ 2024 ಡಿಸೆಂಬರ್ 13ರಂದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ನೀಡಿರುವ ಜಾಮೀನು ರದ್ದು ಕೋರಿ ಸರ್ಕಾರ ಸುಪ್ರೀಂಕೋರ್ಟ್​​ ಮೊರೆ ಹೋಗಿದೆ.

ದರ್ಶನ್ ಜಾಮೀನು ರದ್ದು ಮಾಡಲು ರಾಜ್ಯ ಸರ್ಕಾರದ ಪ್ರಾಸಿಕ್ಯೂಷನ್ ಮನವಿ ಮಾಡಿದ್ದು, ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್‌, ಎ7 ಅನುಕುಮಾರ್‌, ಎ11 ನಾಗರಾಜ್, ಎ12 ಎಂ.ಲಕ್ಷ್ಮಣ್‌ ಹಾಗೋ ಎ 14 ಪ್ರದೂಶ್​ಗೆ ಮತ್ತೆ ಸಂಕಷ್ಟ ಎದುರಾಗಿದೆ.

ಇದನ್ನೂ ಓದಿ: ಕಿಚ್ಚ ಸುದೀಪ್ ಕರೆಗೆ ಸ್ಪಂದಿಸಿದ ಕನ್ನಡಿಗರು.. ಒಂದೇ ದಿನದಲ್ಲಿ ಕೀರ್ತನಾ ಚಿಕಿತ್ಸೆಗೆ ಹರಿದು ಬಂದ ಹಣ ಎಷ್ಟು? 

ಪ್ರಾಸಿಕ್ಯೂಷನ್ ಮನವಿ ಏನು?
ಹೈಕೋರ್ಟ್‌ ನೀಡಿರುವ ಜಾಮೀನು​ ಅವಸರದಿಂದ ಕೂಡಿದಂತಿದೆ. ಯಾಕಂದ್ರೆ ಖ್ಯಾತ ನಟ ದರ್ಶನ್ ಸಾಕ್ಷ್ಯಗಳನ್ನು ತಿರುಚುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಸೆಷನ್ಸ್ ಕೋರ್ಟ್​ನಲ್ಲಿ ಕೇಸ್ ಚಾರ್ಜ್ ಫ್ರೇಮ್ ಇನ್ನೂ ಹಂತಕ್ಕೆ ಬಂದಿಲ್ಲ. ನಟ ದರ್ಶನ್​ಗೆ 6 ವಾರಗಳು ಮಧ್ಯಂತರ ಬೇಲ್ ನೀಡಿದ್ದಾಗಲೂ ಶಸ್ತ್ರಚಿಕಿತ್ಸೆ ಮಾಡಿಸಿಲ್ಲ. ನಟ ದರ್ಶನ್​ & ಗ್ಯಾಂಗ್ ಹೈಕೋರ್ಟ್​ ಜಾಮೀನಿಗೆ ಅರ್ಹರಾಗಿಲ್ಲ. ಕೇಸ್​​ನಲ್ಲಿ ಪ್ರಬಲ ಸಾಕ್ಷಿಗಳಿದ್ದರೂ ಪರಿಗಣಿಸಲು ಕೋರ್ಟ್​​​​ ವಿಫಲವಾಗಿದೆ. ಹೀಗಾಗಿ ಹೈಕೋರ್ಟ್ ಜಾಮೀನು ಆದೇಶಕ್ಕೆ ತಡೆ ನೀಡುವಂತೆ ವಕೀಲರು ಸುಪ್ರೀಂಕೋರ್ಟ್‌ಗೆ ಮನವಿ ಮಾಡಲಿದ್ದಾರೆ.

ಕೇಸ್​ನಲ್ಲಿ ಟೆಕ್ನಿಕಲ್ ಹಾಗೂ ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಲು ಹೈಕೋರ್ಟ್​ ವಿಫಲವಾಗಿದೆ. ಹೀಗಾಗಿ ಮಧ್ಯಂತರ ಪರಿಹಾರವಾಗಿ ಏಕಪಕ್ಷೀಯ ಆದೇಶ ನೀಡಬೇಕು ಅಂತ ರಾಜ್ಯ ಸರ್ಕಾರದ ಪ್ರಾಸಿಕ್ಯೂಷನ್ ಅರ್ಜಿಯಲ್ಲಿ ಕೋರಲಾಗಿದೆ. ಒಂದು ವೇಳೆ ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿದ್ರೆ ಮತ್ತೆ ನಟ ದರ್ಶನ್ ಅಂಡ್ ಗ್ಯಾಂಗ್‌ಗೆ ಸಂಕಷ್ಟ ಎದುರಾಗಲಿದೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment