ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಜೈಲುಪಾಲು
ಜೈಲಿಗೆ ಹೋಗಿ ದರ್ಶನ್ ಭೇಟಿ ಮಾಡ್ತೀನಿ ಎಂದ ನಟ
ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಗೌಡ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರದ ಪಾಲಾಗಿರುವ ನಟ ದರ್ಶನ್ ಮೂರನೇ ದಿನವನ್ನು ಜೈಲಿನಲ್ಲಿ ಕಳೆದಿದ್ದಾರೆ. ಇತ್ತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಆರೋಪಿ ಸ್ಥಾನದಲ್ಲಿ ನೋಡಿ ಬೇಸರ ಆಗ್ತಿದೆ. ದರ್ಶನ್ ಅಂತಹ ವ್ಯಕ್ತಿ ಅಲ್ಲ ಎಂದು ನಟ ಧರ್ಮ ಕೀರ್ತಿ ರಾಜ್ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಲ್ಲಿ ಮಾತನಾಡಿದ ಅವರು ನಮ್ಮನ್ನೆಲ್ಲ ತಮ್ಮನಂತೆ ನೋಡಿಕೊಳ್ತಿದ್ದರು. ಈ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರಾ..? ಇಲ್ವಾ ಅಂತ ನ್ಯಾಯಾಲಯ ಹೇಳಬೇಕು ಎಂದಿದ್ದಾರೆ. ದರ್ಶನ್ ನೋಡೋಕೆ ಜೈಲಿಗೆ ಹೋಗ್ತೀನಿ ಎಂದಿದ್ದಾರೆ.
ಇದನ್ನೂ ಓದಿ:ಜೈಲಲ್ಲಿ ದರ್ಶನ್ಗೆ ಆತಿಥ್ಯ ನೀಡಲು ಕುಖ್ಯಾತ ರೌಡಿಗಳಿಂದ ಪೈಪೋಟಿ..? ಅಚ್ಚರಿಯ ವಿಷಯ ಬಹಿರಂಗ..!
ಧರ್ಮ ಕೀರ್ತಿ ರಾಜ್ ಹೇಳಿದ್ದೇನು..?
ಚಿತ್ರರಂಗಕ್ಕೆ ಬರೋಕೆ ಮುಂಚೆನೇ ನಾನು ಅವರ ದೊಡ್ಡ ಫ್ಯಾನ್. ಅವರ ಮನೆಯಲ್ಲಿ ಊಟ ಮಾಡಿದ್ದೀನಿ. ವಿಜಯಕ್ಕ ತಮ್ಮ ಕೈಯಿಂದ ನನಗೆ ಹೊಟ್ಟೆ ತುಂಬಾ ಊಟ ಕೊಟ್ಟಿದ್ದಾರೆ. ಇದೆಲ್ಲ ಆಗಬಾರದಿತ್ತು. ಈಗ ನೋಡಿದರೆ ನೋವಾಗುತ್ತೆ. ಎಲ್ಲ ಚೆನ್ನಾಗಿದ್ದರು. ಪೊಲೀಸರು ಅವರ ಕೆಲಸ ಮಾಡಿದ್ದಾರೆ. ಕೇಸ್ ಕೋರ್ಟ್ನಲ್ಲಿದೆ. ಇದು ಆಗಿರೋದು ಆಕಸ್ಮಿಕವಾಗಿ ಆಗಿರುತ್ತೆ. ರೇಣುಕಾಸ್ವಾಮಿ ಕುಟುಂಬಕ್ಕೆ ಭಗವಂತ ಶಕ್ತಿ ಕೊಡಲಿ ಅಂತ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ:ಬೀದರ್ನಲ್ಲಿ ಮಧ್ಯರಾತ್ರಿ ಹರಿದ ನೆತ್ತರು.. ಬಾಲ್ಯದ ಗೆಳೆಯನ ಕತ್ತು ಸೀಳಿ ಬರ್ಬರ ಕೊಲೆ..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಜೈಲುಪಾಲು
ಜೈಲಿಗೆ ಹೋಗಿ ದರ್ಶನ್ ಭೇಟಿ ಮಾಡ್ತೀನಿ ಎಂದ ನಟ
ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಪವಿತ್ರಗೌಡ
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಪರಪ್ಪನ ಅಗ್ರಹಾರದ ಪಾಲಾಗಿರುವ ನಟ ದರ್ಶನ್ ಮೂರನೇ ದಿನವನ್ನು ಜೈಲಿನಲ್ಲಿ ಕಳೆದಿದ್ದಾರೆ. ಇತ್ತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಆರೋಪಿ ಸ್ಥಾನದಲ್ಲಿ ನೋಡಿ ಬೇಸರ ಆಗ್ತಿದೆ. ದರ್ಶನ್ ಅಂತಹ ವ್ಯಕ್ತಿ ಅಲ್ಲ ಎಂದು ನಟ ಧರ್ಮ ಕೀರ್ತಿ ರಾಜ್ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಲ್ಲಿ ಮಾತನಾಡಿದ ಅವರು ನಮ್ಮನ್ನೆಲ್ಲ ತಮ್ಮನಂತೆ ನೋಡಿಕೊಳ್ತಿದ್ದರು. ಈ ಪ್ರಕರಣದಲ್ಲಿ ದರ್ಶನ್ ಭಾಗಿಯಾಗಿದ್ದಾರಾ..? ಇಲ್ವಾ ಅಂತ ನ್ಯಾಯಾಲಯ ಹೇಳಬೇಕು ಎಂದಿದ್ದಾರೆ. ದರ್ಶನ್ ನೋಡೋಕೆ ಜೈಲಿಗೆ ಹೋಗ್ತೀನಿ ಎಂದಿದ್ದಾರೆ.
ಇದನ್ನೂ ಓದಿ:ಜೈಲಲ್ಲಿ ದರ್ಶನ್ಗೆ ಆತಿಥ್ಯ ನೀಡಲು ಕುಖ್ಯಾತ ರೌಡಿಗಳಿಂದ ಪೈಪೋಟಿ..? ಅಚ್ಚರಿಯ ವಿಷಯ ಬಹಿರಂಗ..!
ಧರ್ಮ ಕೀರ್ತಿ ರಾಜ್ ಹೇಳಿದ್ದೇನು..?
ಚಿತ್ರರಂಗಕ್ಕೆ ಬರೋಕೆ ಮುಂಚೆನೇ ನಾನು ಅವರ ದೊಡ್ಡ ಫ್ಯಾನ್. ಅವರ ಮನೆಯಲ್ಲಿ ಊಟ ಮಾಡಿದ್ದೀನಿ. ವಿಜಯಕ್ಕ ತಮ್ಮ ಕೈಯಿಂದ ನನಗೆ ಹೊಟ್ಟೆ ತುಂಬಾ ಊಟ ಕೊಟ್ಟಿದ್ದಾರೆ. ಇದೆಲ್ಲ ಆಗಬಾರದಿತ್ತು. ಈಗ ನೋಡಿದರೆ ನೋವಾಗುತ್ತೆ. ಎಲ್ಲ ಚೆನ್ನಾಗಿದ್ದರು. ಪೊಲೀಸರು ಅವರ ಕೆಲಸ ಮಾಡಿದ್ದಾರೆ. ಕೇಸ್ ಕೋರ್ಟ್ನಲ್ಲಿದೆ. ಇದು ಆಗಿರೋದು ಆಕಸ್ಮಿಕವಾಗಿ ಆಗಿರುತ್ತೆ. ರೇಣುಕಾಸ್ವಾಮಿ ಕುಟುಂಬಕ್ಕೆ ಭಗವಂತ ಶಕ್ತಿ ಕೊಡಲಿ ಅಂತ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ:ಬೀದರ್ನಲ್ಲಿ ಮಧ್ಯರಾತ್ರಿ ಹರಿದ ನೆತ್ತರು.. ಬಾಲ್ಯದ ಗೆಳೆಯನ ಕತ್ತು ಸೀಳಿ ಬರ್ಬರ ಕೊಲೆ..
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ