ಅಲ್ಪನಿಗೆ ಐಶ್ವರ್ಯ ಬಂದ್ರೆ.. ಮಡೆನೂರು ಮನುಗೆ ಸಖತ್‌ ಟಾಂಗ್ ಕೊಟ್ಟ ನಟ ಜಗ್ಗೇಶ್‌; ಹೇಳಿದ್ದೇನು?

author-image
admin
Updated On
ಅಲ್ಪನಿಗೆ ಐಶ್ವರ್ಯ ಬಂದ್ರೆ.. ಮಡೆನೂರು ಮನುಗೆ ಸಖತ್‌ ಟಾಂಗ್ ಕೊಟ್ಟ ನಟ ಜಗ್ಗೇಶ್‌; ಹೇಳಿದ್ದೇನು?
Advertisment
  • ಶಿವಣ್ಣ, ದರ್ಶನ್, ಧ್ರುವ ಸರ್ಜಾ ಬಗ್ಗೆ ಅವಹೇಳನಕಾರಿಯಾಗಿ ಮಾತು
  • ಇವರೆಲ್ಲಾ ಸ್ವಲ್ಪ ದಿನವೇ ಇರ್ತಾರೆ ಇನ್ಮುಂದೆ ನಾನೇ ಹೀರೋ ಎಂದಿದ್ದ ಆಡಿಯೋ
  • ಆರೋಪಿ ಮಡೆನೂರು ಮನು ವಿರುದ್ಧ ತಿರುಗಿಬಿದ್ದ ಸ್ಯಾಂಡಲ್‌ವುಡ್‌!

ಬೆಂಗಳೂರು: ಸಹನಟಿಗೆ ಕಿರುಕುಳ ಹಾಗೂ ವಂಚನೆ ಆರೋಪದಲ್ಲಿ ನಟ ಮಡೆನೂರು ಮನು ಅವರನ್ನ ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇಂದು 3ನೇ ಎಸಿಜೆಎಂ ನ್ಯಾಯಾಧೀಶರ ಮುಂದೆ ಪೊಲೀಸರು ಆರೋಪಿಯನ್ನ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿ ಮನುಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ನೀಡಿ ಆದೇಶಿಸಿದ್ದಾರೆ.

ಅತ್ಯಾ*ಚಾರದಂತ ಗಂಭೀರ ಆರೋಪ ಎದುರಿಸುತ್ತಿರುವ ಮಡೆನೂರು ಮನುಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮಡೆನೂರು ಮನು ಬಂಧನದ ಬಳಿಕ ನಟ ಶಿವರಾಜ್‌ಕುಮಾರ್, ದರ್ಶನ್, ಧ್ರುವ ಸರ್ಜಾ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಎನ್ನಲಾಗಿರುವ ಆಡಿಯೋ ವೈರಲ್ ಆಗಿತ್ತು. ಆ ಆಡಿಯೋದಲ್ಲಿ ಶಿವಣ್ಣ, ದರ್ಶನ್, ಧ್ರುವ ಸರ್ಜಾ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದ್ದಕ್ಕೆ ಡಾ. ರಾಜ್‌ ಕುಮಾರ್‌ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

publive-image

ಶಿವಣ್ಣ, ದರ್ಶನ್, ಧ್ರುವ ಸರ್ಜಾ ಅಭಿಮಾನಿಗಳ ಆಕ್ರೋಶದ ಬೆನ್ನಲ್ಲೇ ನಟ ಜಗ್ಗೇಶ್ ಅವರು ಈ ಬಗ್ಗೆ ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಬೆಳಿಬೇಕು ಅಂತ ಬಂದವ ಮಡೆನೂರು ಮನು ವಿರುದ್ಧ ಈಗ ಇಡೀ ಸ್ಯಾಂಡಲ್‌ವುಡ್‌ ತಿರುಗಿ ಬೀಳುವಂತಾಗಿದೆ.

ಇದನ್ನೂ ಓದಿ: ಮಡೆನೂರು ಮನು ಮೇಲೆ ಶಿವಣ್ಣ ಫ್ಯಾನ್ಸ್ ಆಕ್ರೋಶ.. ಕನ್ನಡ ಕಿರುತೆರೆ, ಸ್ಯಾಂಡಲ್‌ವುಡ್‌ನಿಂದಲೇ ಬ್ಯಾನ್? 

ಮಡೆನೂರು ಮನು ಮಾತುಗಳು ಎನ್ನಲಾಗುತ್ತಿರುವ ಆಡಿಯೋ ಒಂದು ವೈರಲ್ ಆಗಿದ್ದು, ಆ ಆಡಿಯೋದಲ್ಲಿ ಕನ್ನಡ ಚಿತ್ರರಂಗದ ಸ್ಟಾರ್ ನಟರ ಬಗ್ಗೆ ಅತ್ಯಂತ ತುಚ್ಛವಾಗಿ, ಅಹಂಕಾರದಿಂದ ಮಾತನಾಡಿದ್ದಾರೆ. ಶಿವರಾಜ್ ಕುಮಾರ್, ಧ್ರುವ ಸರ್ಜಾ, ದರ್ಶನ್ ಬಗ್ಗೆ ಇವರೆಲ್ಲಾ ಸ್ವಲ್ಪ ದಿನವೇ ಇರ್ತಾರೆ ಇನ್ಮುಂದೆ ನಾನೇ ಹೀರೋ ಅನ್ನೋ ಅರ್ಥದಲ್ಲಿ ಮಾತನಾಡಲಾಗಿದೆ. ಇದರ ಬೆನ್ನಲ್ಲೇ ಮಡೆನೂರು ಮನು ವಿರುದ್ಧ X ಖಾತೆಯಲ್ಲಿ ನಟ ಜಗ್ಗೇಶ್ ಕಿಡಿಕಾರಿದ್ದಾರೆ.

publive-image

X ಖಾತೆಯಲ್ಲಿ ನಟ ಜಗ್ಗೇಶ್​​ ಡಿಚ್ಚಿ!
ಒಂದು ಗಾದೆ ಮಾತು ನೆನಪಾಯಿತು.. "ಅಲ್ಪನಿಗೆ ಐಶ್ವರ್ಯ ಬಂದ್ರೆ ಅರ್ಧ ರಾತ್ರೀಲಿ ಕೊಡೆ ಹಿಡಿದಂಗೆ", ಗುರುಹಿರಿಯರ ಮೇಲೆ ಗೌರವ ತೋರದವನು ಗೆದ್ದ ಇತಿಹಾಸ ಇಲ್ಲ. ಇಂದು ಇದ್ದದ್ದು ನಾಳೆ ಇರದು ಅಹಂಕಾರ ಬಿಡಿ ಅಂಬೆಗಾಲು ಇಡುತ್ತಿರುವ ಕೂಸುಗಳೆ! ಆಯುಷ್ಯ ಬರೆಯೋದು ಬ್ರಹ್ಮ, ಚಿಲ್ಲರೆ ಮನುಷ್ಯರಲ್ಲ. ಇಂದಿನ ಚಿತ್ರರಂಗದ ಅಸಹ್ಯ ಕಂಡು ದುಃಖವಾಯಿತು.

ಶಿವರಾಜ್ ಕುಮಾರ್ ಚಿತ್ರರಂಗದ ಕಿರೀಟ ಇದ್ದಂತೆ. ಎಲ್ಲರನ್ನು ಪ್ರೀತಿಸುವ ಜೀವ ಅಂಥವರ ಸಾವು ಬಯಸಿದವರಿಗೆ ಕೇಡುಗಾಲ ಕಾದಿದೆ. ನೊಂದುಕೊಳ್ಳದಿರಿ ಶಿವಣ್ಣ ನೀವು ಹಿಮಾಲಯ, ನಿಮಗೆ ದೀರ್ಘಾಯುಷ್ಯ ಪ್ರಾಪ್ತಿ ಇದೆ. ನಿಮ್ಮ ಹೆತ್ತವರು ಕನ್ನಡಿಗರ ಆಶೀರ್ವಾದ ಇದೆ. ಹೀಗೆ ಸುದೀರ್ಘವಾಗಿ ಬರೆದು, ಮಡೆನೂರ್​ ಮನುಗೆ ನಟ ಜಗ್ಗೇಶ್ ಅವರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment