ದೂರು ದಾಖಲಾಗ್ತಿದ್ದಂತೆ ನಟ ಮಡೆನೂರು ಮನು ಬಂಧನ..!

author-image
Veena Gangani
Updated On
‘ಸರ್ಪ್ರೈಸ್ ಕೊಡ್ತೀನಿ ಕಣ್ಣು ಮುಚ್ಚಿಕೋ ಅಂದ, ಆಮೇಲೆ ನೋಡಿದ್ರೆ..’ ನಟ ಮನು ಬಗ್ಗೆ ಸಂತ್ರಸ್ತೆ ಮತ್ತಷ್ಟು ಆರೋಪ
Advertisment
  • ಸಂತ್ರಸ್ತೆಗೆ ಮೋಸ ಮಾಡಿದ ಆರೋಪ ಬೆನ್ನಲ್ಲೇ ನಟ ಅರೆಸ್ಟ್
  • ಶಾಂತಿಗ್ರಾಮ ಬಳಿ ನಟ ಮನುನನ್ನು ಬಂಧಿಸಿದ ಪೊಲೀಸರು
  • ಆರೋಪಿಯನ್ನ ಬಂಧಿಸಿ ವಿಚಾರಣೆ ನಡೆಸ್ತಿರೋ ಅಧಿಕಾರಿಗಳು

ಕಾಮಿಡಿ ಕಿಲಾಡಿಗಳು ಸೀಸನ್​ 2ರ ವಿನ್ನರ್​, ಹಾಸ್ಯ ನಟ ಮಡೆನೂರು ಮನು ಮೇಲೆ ಕಿರುತೆರೆ ನಟಿ ಗಂಭೀರ ಆರೋಪ ಮಾಡಿದ್ದರು. ‘ಕಾಮಿಡಿ ಕಿಲಾಡಿಗಳು’ ಮೂಲಕ ಫೇಮಸ್​ ಆಗಿದ್ದ ಮಡೆನೂರು ಮನು ವಿರುದ್ಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು.

ಇದನ್ನೂ ಓದಿ:ನಟ ಮಡೆನೂರು ಮನು ಮೋಸದಾಟದ ಬಗ್ಗೆ ಸಂತ್ರಸ್ತೆ ಹೇಳಿದ್ದೇನು?

publive-image

ಸಂತ್ರಸ್ತೆ ದೂರು ದಾಖಲಿಸುತ್ತಿದ್ದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸರು ನಟ ಮಡೆನೂರು ಮನು ಬಂಧಿಸಿದ್ದಾರೆ. ಹಾಸನದ ಶಾಂತಿಗ್ರಾಮದ ಬಳಿ ಮಡೆನೂರು ಮನುರನ್ನ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಸದ್ಯ ಆರೋಪಿಯನ್ನ ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

publive-image

ಪೊಲೀಸರಿಗೆ ನೀಡಿದ ದೂರಿ​ನಲ್ಲಿ ಸಂತ್ರಸ್ತೆಯೂ ತನಗಾದ ಮೋಸವನ್ನು ಬಿಚ್ಚಿಟ್ಟಿದ್ದಾರೆ. ಅಲ್ಲದೇ ಈ ಬಗ್ಗೆ ನ್ಯೂಸ್​ಫಸ್ಟ್​ಗೆ ದೂರವಾಣಿ ಕರೆ ಮೂಲಕ ಸಂತ್ರಸ್ತೆ ಪ್ರತಿಕ್ರಿಯೆ ನೀಡಿದ್ದಾರೆ. ಮಡೆನೂರು ಮನು ನನ್ನ ಮೇಲೆ ಅತ್ಯಾಚಾರ ಮಾಡಿರೋದು ನಿಜ. ನನ್ನ ಮೇಲೆ ಕೊಲೆ ಬೆದರಿಕೆ ಹಾಕಿದ್ದಾರೆ. ನನ್ನ ಬಳಿ ಎಲ್ಲಾ ದಾಖಲೆಗಳಿವೆ. ಎಲ್ಲವನ್ನೂ ಕೊಡ್ತೀನಿ. ನನ್ನ ಬಳಿ ಎಲ್ಲಾ ಸಾಕ್ಷಿಗಳಿವೆ. ಸಾಕ್ಷಿ ಇಲ್ಲದೆ ನಾನು ಮಾತನಾಡುತ್ತಿಲ್ಲ. ಪೊಲೀಸರಿಗೆ ದೂರು ನೀಡುವುದಾಗಿ ಮನುಗೆ ಮೊದಲೇ ಹೇಳಿದ್ದೆ ಅಂತ ಮಾಹಿತಿ ಹಂಚಿಕೊಂಡಿದ್ದರು.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment