newsfirstkannada.com

ಟಗರು ಪಲ್ಯ ನಟ ನಾಗಭೂಷಣ್​ಗೆ ಸಂಕಷ್ಟ; ಅಪಘಾತ ಕೇಸ್‌ನಲ್ಲಿ ಮಹತ್ವದ ಸಾಕ್ಷಿ ಪೊಲೀಸ್‌ ವಶ; ಏನದು?

Share :

12-11-2023

    ನಾಗಭೂಷಣ್ ವಿರುದ್ಧ ಚಾರ್ಜ್​ಶೀಟ್ ಹಾಕಿರುವ ಪೊಲೀಸರು

    60 ಸಾಕ್ಷಿಗಳನ್ನು ಕಲೆ ಹಾಕಿದ ಕುಮಾರಸ್ವಾಮಿ ಟ್ರಾಫಿಕ್ ಪೊಲೀಸ್​

    80 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿರುವ ಸಂಚಾರಿ ಪೊಲೀಸರು​

ಬೆಂಗಳೂರು: ಟಗರು ಪಲ್ಯ ನಟ ನಾಗಭೂಷಣ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಪಘಾತ ಕೇಸ್​ಗೆ ಸಂಬಂಧಪಟ್ಟಂತೆ ನಟ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ. ಸದ್ಯ 60 ಸಾಕ್ಷಿಗಳನ್ನು ಪೊಲೀಸರು ಕಲೆ ಹಾಕಿದ್ದಾರೆ.

ಕಳೆದ ಅಕ್ಟೋಬರ್ 30ರಂದು ಬೆಂಗಳೂರಿನ ಕೋಣನ ಕುಂಟೆ ಸಮೀಪ ಕಾರು ಅಪಘಾತ ಸಂಭವಿಸಿತ್ತು. ನಾಗಭೂಷಣ್ ಓಡಿಸುತ್ತಿದ್ದ ಕಾರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಗುದ್ದಿತ್ತು. ಈ ವೇಳೆ ಪ್ರೇಮಾ ಎಂಬುವವರು ಮೃತಪಟ್ಟರೆ, ಅವರ ಪತಿ ಕೃಷ್ಣ ಅವರಿಗೆ ಗಂಭೀರ ಗಾಯವಾಗಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಚೇತರಿಕೆ ಕಂಡಿದ್ದು, ಅವರು ಹೇಳಿಕೆ ದಾಖಲು ಮಾಡಿದ್ದಾರೆ.

ಸದ್ಯ ಆ್ಯಕ್ಸಿಡೆಂಟ್ ಪ್ರಕರಣ ಸಂಬಂಧ ಕುಮಾರಸ್ವಾಮಿ ಲೇಔಟ್​ ಟ್ರಾಫಿಕ್ ಪೊಲೀಸರು 80 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 60 ಸಾಕ್ಷಿಗಳನ್ನು ಕಲೆಹಾಕಲಾಗಿದೆ. ಸಿಸಿಟಿವಿ ಮಾತ್ರವಲ್ಲದೆ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನ ದಾಖಲಿಸಿದ್ದಾರೆ. ಈ ಅಪಘಾತದ ವೇಳೆ ಪ್ರೇಮ ಅವರು ಸ್ಥಳದಲ್ಲೇ ಮೃತಪಟ್ಟಿದರು. ಅವರ ಪತಿ ಕೃಷ್ಣ ಅವರು ಚೇತರಿಕೆ ಕಂಡಿದ್ದಾರೆ. ಈ ಹಿನ್ನೆಲೆ ಮುಖ್ಯವಾಗಿ ಕೃಷ್ಣಾ ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

ಟಗರು ಪಲ್ಯ ನಟ ನಾಗಭೂಷಣ್​ಗೆ ಸಂಕಷ್ಟ; ಅಪಘಾತ ಕೇಸ್‌ನಲ್ಲಿ ಮಹತ್ವದ ಸಾಕ್ಷಿ ಪೊಲೀಸ್‌ ವಶ; ಏನದು?

https://newsfirstlive.com/wp-content/uploads/2023/10/NAGABHUSHAN-1.jpg

    ನಾಗಭೂಷಣ್ ವಿರುದ್ಧ ಚಾರ್ಜ್​ಶೀಟ್ ಹಾಕಿರುವ ಪೊಲೀಸರು

    60 ಸಾಕ್ಷಿಗಳನ್ನು ಕಲೆ ಹಾಕಿದ ಕುಮಾರಸ್ವಾಮಿ ಟ್ರಾಫಿಕ್ ಪೊಲೀಸ್​

    80 ಪುಟಗಳ ಚಾರ್ಜ್​ಶೀಟ್ ಸಲ್ಲಿಸಿರುವ ಸಂಚಾರಿ ಪೊಲೀಸರು​

ಬೆಂಗಳೂರು: ಟಗರು ಪಲ್ಯ ನಟ ನಾಗಭೂಷಣ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಪಘಾತ ಕೇಸ್​ಗೆ ಸಂಬಂಧಪಟ್ಟಂತೆ ನಟ ನಾಗಭೂಷಣ್ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಕೆ ಮಾಡಲಾಗಿದೆ. ಸದ್ಯ 60 ಸಾಕ್ಷಿಗಳನ್ನು ಪೊಲೀಸರು ಕಲೆ ಹಾಕಿದ್ದಾರೆ.

ಕಳೆದ ಅಕ್ಟೋಬರ್ 30ರಂದು ಬೆಂಗಳೂರಿನ ಕೋಣನ ಕುಂಟೆ ಸಮೀಪ ಕಾರು ಅಪಘಾತ ಸಂಭವಿಸಿತ್ತು. ನಾಗಭೂಷಣ್ ಓಡಿಸುತ್ತಿದ್ದ ಕಾರು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಗುದ್ದಿತ್ತು. ಈ ವೇಳೆ ಪ್ರೇಮಾ ಎಂಬುವವರು ಮೃತಪಟ್ಟರೆ, ಅವರ ಪತಿ ಕೃಷ್ಣ ಅವರಿಗೆ ಗಂಭೀರ ಗಾಯವಾಗಿತ್ತು. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈಗ ಚೇತರಿಕೆ ಕಂಡಿದ್ದು, ಅವರು ಹೇಳಿಕೆ ದಾಖಲು ಮಾಡಿದ್ದಾರೆ.

ಸದ್ಯ ಆ್ಯಕ್ಸಿಡೆಂಟ್ ಪ್ರಕರಣ ಸಂಬಂಧ ಕುಮಾರಸ್ವಾಮಿ ಲೇಔಟ್​ ಟ್ರಾಫಿಕ್ ಪೊಲೀಸರು 80 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 60 ಸಾಕ್ಷಿಗಳನ್ನು ಕಲೆಹಾಕಲಾಗಿದೆ. ಸಿಸಿಟಿವಿ ಮಾತ್ರವಲ್ಲದೆ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನ ದಾಖಲಿಸಿದ್ದಾರೆ. ಈ ಅಪಘಾತದ ವೇಳೆ ಪ್ರೇಮ ಅವರು ಸ್ಥಳದಲ್ಲೇ ಮೃತಪಟ್ಟಿದರು. ಅವರ ಪತಿ ಕೃಷ್ಣ ಅವರು ಚೇತರಿಕೆ ಕಂಡಿದ್ದಾರೆ. ಈ ಹಿನ್ನೆಲೆ ಮುಖ್ಯವಾಗಿ ಕೃಷ್ಣಾ ಅವರ ಹೇಳಿಕೆಯನ್ನು ಪೊಲೀಸರು ದಾಖಲಿಸಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Load More