ಚಂದ್ರನ ಅಂಗಳಕ್ಕೆ ಕಾಲಿಟ್ಟ ಭಾರತದ ಪ್ರಜ್ಞಾನ್ ರೋವರ್
ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದ ಶತಕೋಟಿ ಭಾರತೀಯರು
ಚಂದ್ರಯಾನ-3 ಯಶಸ್ವಿಯನ್ನು ಹಾಡಿಹೊಗಳಿದ ಪ್ರಕಾಶ್ ರಾಜ್
ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾಗಿ ಪೂರೈಸಿ ಭಾರತದ ಬಗ್ಗೆ ಇಡೀ ಜಗತ್ತೇ ನಿಬ್ಬೆರಗಾಗಿದೆ. ಈ ಬೆನ್ನಲ್ಲೇ ಇದಕ್ಕೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಅಭಿನಂದಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿದ ನಟ ಪ್ರಕಾಶ್ ರಾಜ್, ಭಾರತದ ಮನುಕುಲದ ಹೆಮ್ಮೆಯ ಕ್ಷಣಗಳಿವು. ನಿಮಗೆ ಧನ್ಯವಾದಗಳು ಇಸ್ರೋ. ಚಂದ್ರಯಾನ-3 ಯಶಸ್ವಿಯಾಗಲು ಕಾರಣರಾದ ಮತ್ತು ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ ಅಭಿನಂದನೆಗಳು. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು. ಜತೆಗೆ ಸಂಭ್ರಮಿಸಲು ಇದು ದಾರಿಯಾಗಲಿ ಎಂದರು.
ಭಾರತದ.. ಮನುಕುಲದ ಹೆಮ್ಮೆಯ ಕ್ಷಣಗಳಿವು .. 🙏🏿🙏🏿🙏🏿 ಧನ್ಯವಾದಗಳು #ISRO #Chandrayaan3 #VikramLander ಮತ್ತು ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ .. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು….ಸಂಭ್ರಮಿಸಲು .. ಇದು ದಾರಿಯಾಗಲಿ. #justasking
— Prakash Raj (@prakashraaj) August 23, 2023
ಕೊನೆಗೂ ಕೋಟ್ಯಾಂತರ ಭಾರತೀಯರ ಪ್ರಾರ್ಥನೆ ಫಲಿಸಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 3 ಮಿಷನ್ ಯಶಸ್ವಿಯಾಗಿ ಲ್ಯಾಂಡ್ ಆಗಿದೆ. ವಿಕ್ರಮ್ ಲ್ಯಾಂಡರ್ ಸೇಫ್ ಲ್ಯಾಂಡ್ ಆಗಿದ್ದು ಇಡೀ ದೇಶಾದ್ಯಂತ ಸಂಭ್ರಮಾಚರಣೆ ಶುರುವಾಗಿದೆ.
ಈ ಹಿಂದೆ ಪ್ರಕಾಶ್ ರಾಜ್ ಚಂದ್ರಯಾನ-3 ಬಗ್ಗೆ ವ್ಯಂಗ್ಯಭರಿತ ಟ್ವೀಟ್ ಮಾಡಿ ಟೀಕೆಗೆ ಗುರಿಯಾಗಿದ್ದರು. ಇದಕ್ಕೆ ನಟ ಪ್ರಕಾಶ್ ರಾಜ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಮಧ್ಯೆ ಪ್ರಕಾಶ್ ರಾಜ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಶ್ರೀರಾಮ ಸೇನೆ ಮುಖಂಡರು ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶ್ರೀರಾಮ ಸೇನೆ ಮುಖಂಡ ಶಿವಾನಂದ ಗಾಯಕವಾಡ್ ದೂರು ನೀಡಿದ್ದು, ಪ್ರಕಾಶ್ ರಾಜ್ ಬಂಧನಕ್ಕೆ ಆಗ್ರಹಿಸಿದ್ದರು. ಇನ್ನು, ಈ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಪ್ರಕಾಶ್ ರಾಜ್ ಬಂಧನಕ್ಕೆ ಒತ್ತಾಯಿಸಿ ಹಲವರು ಪೋಸ್ಟ್ ಹಾಕಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಚಂದ್ರನ ಅಂಗಳಕ್ಕೆ ಕಾಲಿಟ್ಟ ಭಾರತದ ಪ್ರಜ್ಞಾನ್ ರೋವರ್
ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದ್ದ ಶತಕೋಟಿ ಭಾರತೀಯರು
ಚಂದ್ರಯಾನ-3 ಯಶಸ್ವಿಯನ್ನು ಹಾಡಿಹೊಗಳಿದ ಪ್ರಕಾಶ್ ರಾಜ್
ಬೆಂಗಳೂರು: ಚಂದ್ರಯಾನ-3 ಯಶಸ್ವಿಯಾಗಿ ಪೂರೈಸಿ ಭಾರತದ ಬಗ್ಗೆ ಇಡೀ ಜಗತ್ತೇ ನಿಬ್ಬೆರಗಾಗಿದೆ. ಈ ಬೆನ್ನಲ್ಲೇ ಇದಕ್ಕೆ ಕಾರಣರಾದ ಇಸ್ರೋ ವಿಜ್ಞಾನಿಗಳನ್ನು ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಅಭಿನಂದಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿದ ನಟ ಪ್ರಕಾಶ್ ರಾಜ್, ಭಾರತದ ಮನುಕುಲದ ಹೆಮ್ಮೆಯ ಕ್ಷಣಗಳಿವು. ನಿಮಗೆ ಧನ್ಯವಾದಗಳು ಇಸ್ರೋ. ಚಂದ್ರಯಾನ-3 ಯಶಸ್ವಿಯಾಗಲು ಕಾರಣರಾದ ಮತ್ತು ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ ಅಭಿನಂದನೆಗಳು. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು. ಜತೆಗೆ ಸಂಭ್ರಮಿಸಲು ಇದು ದಾರಿಯಾಗಲಿ ಎಂದರು.
ಭಾರತದ.. ಮನುಕುಲದ ಹೆಮ್ಮೆಯ ಕ್ಷಣಗಳಿವು .. 🙏🏿🙏🏿🙏🏿 ಧನ್ಯವಾದಗಳು #ISRO #Chandrayaan3 #VikramLander ಮತ್ತು ಇದನ್ನು ಸಾಧ್ಯವಾಗಿಸಿದ ಎಲ್ಲರಿಗೂ .. ವಿಶಾಲ ವಿಶ್ವದ ಇನ್ನಷ್ಟು ವಿಸ್ಮಯಗಳನ್ನು ಅರಿಯಲು….ಸಂಭ್ರಮಿಸಲು .. ಇದು ದಾರಿಯಾಗಲಿ. #justasking
— Prakash Raj (@prakashraaj) August 23, 2023
ಕೊನೆಗೂ ಕೋಟ್ಯಾಂತರ ಭಾರತೀಯರ ಪ್ರಾರ್ಥನೆ ಫಲಿಸಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ 3 ಮಿಷನ್ ಯಶಸ್ವಿಯಾಗಿ ಲ್ಯಾಂಡ್ ಆಗಿದೆ. ವಿಕ್ರಮ್ ಲ್ಯಾಂಡರ್ ಸೇಫ್ ಲ್ಯಾಂಡ್ ಆಗಿದ್ದು ಇಡೀ ದೇಶಾದ್ಯಂತ ಸಂಭ್ರಮಾಚರಣೆ ಶುರುವಾಗಿದೆ.
ಈ ಹಿಂದೆ ಪ್ರಕಾಶ್ ರಾಜ್ ಚಂದ್ರಯಾನ-3 ಬಗ್ಗೆ ವ್ಯಂಗ್ಯಭರಿತ ಟ್ವೀಟ್ ಮಾಡಿ ಟೀಕೆಗೆ ಗುರಿಯಾಗಿದ್ದರು. ಇದಕ್ಕೆ ನಟ ಪ್ರಕಾಶ್ ರಾಜ್ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಮಧ್ಯೆ ಪ್ರಕಾಶ್ ರಾಜ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿ ಶ್ರೀರಾಮ ಸೇನೆ ಮುಖಂಡರು ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶ್ರೀರಾಮ ಸೇನೆ ಮುಖಂಡ ಶಿವಾನಂದ ಗಾಯಕವಾಡ್ ದೂರು ನೀಡಿದ್ದು, ಪ್ರಕಾಶ್ ರಾಜ್ ಬಂಧನಕ್ಕೆ ಆಗ್ರಹಿಸಿದ್ದರು. ಇನ್ನು, ಈ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಪ್ರಕಾಶ್ ರಾಜ್ ಬಂಧನಕ್ಕೆ ಒತ್ತಾಯಿಸಿ ಹಲವರು ಪೋಸ್ಟ್ ಹಾಕಿದ್ದರು.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ