BBK11; ಶರಣ್, ಅದಿತಿ ಫಿನಾಲೆ ಟಿಕೆಟ್ ಕೊಟ್ಟಿರುವುದು ಯಾರಿಗೆ..? ಫುಲ್ ಸಸ್ಪೆನ್ಸ್​

author-image
Bheemappa
Updated On
BBK11; ಶರಣ್, ಅದಿತಿ ಫಿನಾಲೆ ಟಿಕೆಟ್ ಕೊಟ್ಟಿರುವುದು ಯಾರಿಗೆ..? ಫುಲ್ ಸಸ್ಪೆನ್ಸ್​
Advertisment
  • ನಾಲ್ವರು ಸ್ಪರ್ಧಿಗಳಲ್ಲಿ ಫಿನಾಲೆ ಟಿಕೆಟ್ ಪಡೆದವರು ಯಾರು?
  • ಇನ್ನೇನು ಕೆಲವು ದಿನಗಳು ಮಾತ್ರ ಬಿಗ್​ಬಾಸ್ ಶೋ ಇರುತ್ತೆ
  • ಹಗ್ಗದ ಬಲೆಯನ್ನ ಏರಿ ಬಾವುಟವಿಟ್ಟು ಬಿಗ್​ಬಾಸ್ ಎನ್ನಬೇಕು

100 ದಿನಗಳನ್ನು ಪೂರೈಸಿ ಯಶಸ್ವಿಯಾಗಿ ಬಿಗ್​ ಬಾಸ್​ ಶೋ ಸಾಗುತ್ತಿದೆ. ಇನ್ನೇನು ಕೆಲವು ದಿನಗಳು ಮಾತ್ರ ಈ ಶೋ ನಡೆಯಲಿದ್ದು ಅಷ್ಟರಲ್ಲೇ ಅದೃಷ್ಟಶಾಲಿ ಯಾರೆಂದು ಆಯ್ಕೆ ಮಾಡಬೇಕಿದೆ. ಈ ಸಂಬಂಧ ಈ ವಾರದ ಫಿನಾಲೆಗೆ ಹೋಗುವ ಒಬ್ಬ ಆಟಗಾರರ ಹೆಸರು ಹೇಳಲು ನಟ ಶರಣ್ ಹಾಗೂ ಅದಿತಿ ಪ್ರಭುದೇವ ಅವರು ಬಿಗ್​ಬಾಸ್ ಮನೆಗೆ ಆಗಮಿಸಿದ್ದಾರೆ.

ಬಿಗ್​ಬಾಸ್ ಕೊಟ್ಟಿರುವ ಟಾಸ್ಕ್ ಅನ್ನು ರಜತ್ ಕಿಶನ್, ಹನುಮಂತು, ಭವ್ಯ ಹಾಗೂ ತ್ರಿವಿಕ್ರಮ್ ಈ ನಾಲ್ವರು ಸರದಿಯಲ್ಲಿ ಆಡಬೇಕಾಗಿದೆ. ಟ್ರಂಕ್​ನಲ್ಲಿರುವ ಬಾವುಟ ಇರುವ ಸ್ಟಿಕ್ ತೆಗೆದುಕೊಂಡು ಹಗ್ಗಗಳಿಂದ ಮಾಡಿದ ಬಲೆಯನ್ನು ಹಿಡಿದು ಮೇಲಕ್ಕೆ ಏರಬೇಕಿದೆ. ಬಳಿಕ ಅಲ್ಲಿ ಹೋಗಿ ಬಾವುಟದ ಸ್ಟಿಕ್ ಇಟ್ಟು ಬಿಗ್​ಬಾಸ್ ಎಂದು ಕೂಗಿ ಹೇಳಬೇಕು. ಈ ಟಾಸ್ಕ್ ಅನ್ನು ಸ್ಪರ್ಧಿಗಳು ಅತಿ ಕಡಿಮೆ ಅವಧಿಯಲ್ಲಿ ಪೂರ್ಣಗೊಳಿಸಬೇಕು. ​

publive-image

ಇದನ್ನೂ ಓದಿ:Bigg Boss ಮನೆಗೆ ಎಂಟ್ರಿ ಕೊಟ್ಟ ಚರಣ್, ಅದಿತಿ ಪ್ರಭುದೇವ.. ಕಾರಣವೇನು?

ಸದ್ಯ ಈ ಟಾಸ್ಕ್​ಗೆ ಅಣಿಯಾಗಿರುವ ತ್ರಿವಿಕ್ರಮ್, ರಜತ್ ಕಿಶನ್, ಭವ್ಯ ಹಾಗೂ ಹನುಮಂತು ಇವರಲ್ಲಿ ಯಾರು ಅತ್ಯಂತ ಕಡಿಮೆ ಅವಧಿಯಲ್ಲಿ ಆಟ ಮುಗಿಸುತ್ತಾರೋ ಅವರು ಫಿನಾಲೆಗೆ ಗ್ರ್ಯಾಂಡ್​ ಆಗಿ ಎಂಟ್ರಿ ಕೊಡಲಿದ್ದಾರೆ. ಮನೆಗೆ ಅತಿಥಿಯಾಗಿ ಆಗಮಿಸಿರುವ ಅದಿತಿ ಹಾಗೂ ಚರಣ್ ಅವರು ಸ್ಪರ್ಧಿಯನ್ನು ಗುರುತಿಸಿದ್ದಾರೆ. ನೇರವಾಗಿ ಫಿನಾಲೆಗೆ ಹೋಗುವಂತ ಒಬ್ಬ ಸ್ಪರ್ಧಿ ಎಂದು ಶರಣ್ ಹೇಳಿದ್ದಾರೆ. ಆದರೆ ಸ್ಪರ್ಧಿ ಯಾರು ಎಂದು ಹೆಸರನ್ನು ಬಹಿರಂಗ ಪಡಿಸಿಲ್ಲ.

ಇನ್ನು ಗೇಮ್​ನಲ್ಲಿ ಭವ್ಯ, ಹನುಮಂತು, ತ್ರಿವಿಕ್ರಮ್, ಕ್ಯಾಪ್ಟನ್ ರಜತ್ ಎಲ್ಲರೂ ಮೇಲೆ ಏರಿ ಟಾಸ್ಕ್ ಪೂರ್ಣಗೊಳಿಸಿ, ಬಾವುಟವನ್ನಿಟ್ಟು ಬಿಗ್​ಬಾಸ್ ಎಂದು ಕೂಗಿದ್ದಾರೆ. ಆದರೆ ಯಾರು ಕಡಿಮೆ ಅವಧಿಯಲ್ಲಿ ಟಾಸ್ಕ್ ಪೂರ್ಣಗೊಳಸಿದ್ದಾರೆ, ಯಾರು ಗೆಲುವು ಪಡೆದಿದ್ದಾರೆ ಎನ್ನುವುದು ಮಾತ್ರ ಸಸ್ಪೆನ್ಸ್ ಆಗಿ ಇಟ್ಟಿದ್ದಾರೆ. ಅದನ್ನು ಇಂದು ನಡೆಯುವ ಶೋನಲ್ಲಿ ತಿಳಿಸಬಹುದು.

​ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment