ರಣ ಬಿಸಿನಲ್ಲೇ ಶಿವಮೊಗ್ಗ ಲೋಕಸಭಾ ಚುನಾವಣೆಗೆ ಬಿರುಸಿನ ಪ್ರಚಾರ
ಶಿವರಾಜ್ಕುಮಾರ್ ಭೈರತಿ ರಣಗಲ್ ಸಿನಿಮಾದ ಶೂಟಿಂಗ್ ಕೂಡ ಜೋರು
ಎಲೆಕ್ಷನ್ ಪ್ರಚಾರಕ್ಕೆ ಬ್ರೇಕ್ ಕೊಟ್ಟು ಮನೆಗೆ ತೆರಳಿದ ನಟ ಶಿವರಾಜ್ ಕುಮಾರ್
ಬೆಂಗಳೂರು: ಚುನಾವಣೆಯ ಪ್ರಚಾರ ಹಾಗೂ ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿ ಆಗಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಶಿವಣ್ಣನವರಿಗೆ ರೆಗ್ಯುಲರ್ ಚೆಕ್ ಅಪ್ ಮಾಡಲಾಗಿದೆ.
ಇತ್ತೀಚೆಗೆ ನಟ ಶಿವರಾಜ್ಕುಮಾರ್ ಅವರು ಶಿವಮೊಗ್ಗ ಲೋಕಸಭಾ ಚುನಾವಣೆಯ ಪ್ರಚಾರ ಕೈಗೊಂಡಿದ್ದರು. ಪತ್ನಿ ಗೀತಾ ಶಿವರಾಜ್ಕುಮಾರ್ ಪರ ಬೈಕ್ ಱಲಿ ಹಾಗೂ ಬೃಹತ್ ಸಾರ್ವಜನಿಕ ಸಮಾವೇಶಗಳಲ್ಲಿ ಭಾಗಿಯಾಗಿದ್ದರು. ರಣ ಬಿಸಿನಲ್ಲೇ ಬಿರುಸಿನ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಶಿವಣ್ಣಗೆ ಸದ್ಯ ಆರೋಗ್ಯ ತಪಾಸಣೆ ಮಾಡಲಾಗಿದೆ.
ಇದನ್ನೂ ಓದಿ: ಹೇ ಬರ್ಕೋಳಯ್ಯ, ಶಿವಮೊಗ್ಗ ನಂದು.. ಶಿವಣ್ಣ ಖಡಕ್ ಡೈಲಾಗ್; ಗೀತಾ ಗೆಲುವಿಗೆ ಮಾಸ್ಟರ್ ಪ್ಲಾನ್!
ಲೋಕಸಭಾ ಚುನಾವಣೆಯ ಪ್ರಚಾರದ ಜೊತೆಗೆ ಶಿವರಾಜ್ ಕುಮಾರ್ ಅವರ ಅಭಿನಯದ ಭೈರತಿ ರಣಗಲ್ ಸಿನಿಮಾದ ಶೂಟಿಂಗ್ ಕೂಡ ನಡೀತಿದೆ. ಈ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ಅವರನ್ನ ವೈದ್ಯರು ರೆಗ್ಯುಲರ್ ಚೆಕ್ ಅಪ್ ಮಾಡಿದ್ದು, ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಚುನಾವಣೆಯ ಪ್ರಚಾರಕ್ಕೆ ಬ್ರೇಕ್ ಕೊಟ್ಟಿರುವ ಶಿವರಾಜ್ ಕುಮಾರ್ ಅವರು ಸದ್ಯ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರಣ ಬಿಸಿನಲ್ಲೇ ಶಿವಮೊಗ್ಗ ಲೋಕಸಭಾ ಚುನಾವಣೆಗೆ ಬಿರುಸಿನ ಪ್ರಚಾರ
ಶಿವರಾಜ್ಕುಮಾರ್ ಭೈರತಿ ರಣಗಲ್ ಸಿನಿಮಾದ ಶೂಟಿಂಗ್ ಕೂಡ ಜೋರು
ಎಲೆಕ್ಷನ್ ಪ್ರಚಾರಕ್ಕೆ ಬ್ರೇಕ್ ಕೊಟ್ಟು ಮನೆಗೆ ತೆರಳಿದ ನಟ ಶಿವರಾಜ್ ಕುಮಾರ್
ಬೆಂಗಳೂರು: ಚುನಾವಣೆಯ ಪ್ರಚಾರ ಹಾಗೂ ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿ ಆಗಿದ್ದ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಶಿವಣ್ಣನವರಿಗೆ ರೆಗ್ಯುಲರ್ ಚೆಕ್ ಅಪ್ ಮಾಡಲಾಗಿದೆ.
ಇತ್ತೀಚೆಗೆ ನಟ ಶಿವರಾಜ್ಕುಮಾರ್ ಅವರು ಶಿವಮೊಗ್ಗ ಲೋಕಸಭಾ ಚುನಾವಣೆಯ ಪ್ರಚಾರ ಕೈಗೊಂಡಿದ್ದರು. ಪತ್ನಿ ಗೀತಾ ಶಿವರಾಜ್ಕುಮಾರ್ ಪರ ಬೈಕ್ ಱಲಿ ಹಾಗೂ ಬೃಹತ್ ಸಾರ್ವಜನಿಕ ಸಮಾವೇಶಗಳಲ್ಲಿ ಭಾಗಿಯಾಗಿದ್ದರು. ರಣ ಬಿಸಿನಲ್ಲೇ ಬಿರುಸಿನ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಶಿವಣ್ಣಗೆ ಸದ್ಯ ಆರೋಗ್ಯ ತಪಾಸಣೆ ಮಾಡಲಾಗಿದೆ.
ಇದನ್ನೂ ಓದಿ: ಹೇ ಬರ್ಕೋಳಯ್ಯ, ಶಿವಮೊಗ್ಗ ನಂದು.. ಶಿವಣ್ಣ ಖಡಕ್ ಡೈಲಾಗ್; ಗೀತಾ ಗೆಲುವಿಗೆ ಮಾಸ್ಟರ್ ಪ್ಲಾನ್!
ಲೋಕಸಭಾ ಚುನಾವಣೆಯ ಪ್ರಚಾರದ ಜೊತೆಗೆ ಶಿವರಾಜ್ ಕುಮಾರ್ ಅವರ ಅಭಿನಯದ ಭೈರತಿ ರಣಗಲ್ ಸಿನಿಮಾದ ಶೂಟಿಂಗ್ ಕೂಡ ನಡೀತಿದೆ. ಈ ಹಿನ್ನೆಲೆಯಲ್ಲಿ ಶಿವರಾಜ್ ಕುಮಾರ್ ಅವರನ್ನ ವೈದ್ಯರು ರೆಗ್ಯುಲರ್ ಚೆಕ್ ಅಪ್ ಮಾಡಿದ್ದು, ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಚುನಾವಣೆಯ ಪ್ರಚಾರಕ್ಕೆ ಬ್ರೇಕ್ ಕೊಟ್ಟಿರುವ ಶಿವರಾಜ್ ಕುಮಾರ್ ಅವರು ಸದ್ಯ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ