ಕಾರು ಡಿಕ್ಕಿಯಾಗಿ ಮಹಿಳೆಗೆ ಗಾಯ.. ಕ್ಷಮೆ ಕೇಳಿ ನಟ ಯುವ ಹೇಳಿದ್ದೇನು..?

author-image
Veena Gangani
Updated On
ಕಾರು ಡಿಕ್ಕಿಯಾಗಿ ಮಹಿಳೆಗೆ ಗಾಯ.. ಕ್ಷಮೆ ಕೇಳಿ ನಟ ಯುವ ಹೇಳಿದ್ದೇನು..?
Advertisment
  • ಸಿದ್ಧಗಂಗಾ ಮಠದಲ್ಲಿ ಮಹಿಳೆ ಕಾಲಿಗೆ ಗಂಭೀರ ಗಾಯವಾಗಿತ್ತು
  • ಸಿನಿಮಾ ಪ್ರಚಾರದ ವೇಳೆ ಮಠಕ್ಕೆ ಭೇಟಿ ಕೊಟ್ಟಿದ್ದ ಎಕ್ಕ ಟೀಂ
  • ಮಹಿಳೆಗೆ ಕಾರು ಡಿಕ್ಕಿಯಾದ ಬಗ್ಗೆ ನಟ ಯುವ ಹೇಳಿದ್ದೇನು?

ನಟ ಯುವರಾಜ್‌ಕುಮಾರ್‌ ನಟನೆಯ ಎಕ್ಕ ಸಿನಿಮಾದ ಹಾಡುಗಳು ಫುಲ್‌ ಟ್ರೆಂಡಿಂಗ್‌ನಲ್ಲಿವೆ. ಇತ್ತೀಚೆಗಷ್ಟೇ ಈ ಸಿನಿಮಾದ ಬ್ಯಾಂಗಲ್‌ ಬಂಗಾರಿ ಹಾಡು ರಿಲೀಸ್‌ ಆಗಿತ್ತು. ಸೋಷಿಯಲ್‌ ಮೀಡಿಯಾದಲ್ಲಿ ಈ ಹಾಡಿಗೆ ಎಲ್ಲರೂ ರೀಲ್ಸ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ:ರೈತರಿಗೆ ಸಿಹಿ ಸುದ್ದಿ.. KRS ಡ್ಯಾಮ್ ತುಂಬಲು ಇನ್ನೂ ಎಷ್ಟು ಅಡಿ ನೀರು ಬೇಕು..?

publive-image

ಆದ್ರೆ, ಮೂರು ದಿನಗಳ ಹಿಂದೆ ನಟ ಯುವರಾಜ್‌ಕುಮಾರ್‌ ಸೇರಿದಂತೆ ಇಡೀ ಎಕ್ಕ ಚಿತ್ರತಂಡವು ತುಮಕೂರಿನ ಪ್ರಸಿದ್ಧ ಕ್ಷೇತ್ರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿತ್ತು. ಈ ವೇಳೆ ಬೌನ್ಸರ್‌ಗಳಿದ್ದ ಕಾರು ಮಹಿಳೆಯೊಬ್ಬರಿಗೆ ಡಿಕ್ಕಿ ಹೊಡೆದಿತ್ತು. ಈ ಘಟನೆಯಲ್ಲಿ ಮಹಿಳೆ ಕಾಲಿಗೆ ಗಂಭೀರ ಗಾಯವಾಗಿತ್ತು.

publive-image

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ನಟ ಯುವ, ಸಿನಿಮಾ ಪ್ರಚಾರದ ವೇಳೆ ಮಠಕ್ಕೆ ಎಕ್ಕ ಟೀಂ ಭೇಟಿ ಕೊಟ್ಟಿತ್ತು. ಜನಸಂದಣಿ ಹೆಚ್ಚಾಗಿದ್ದ ಕಾರಣ ತಳ್ಳಾಟ ನೂಕಾಟ ಆಗಿದೆ. ಈ ಘಟನೆಯಲ್ಲಿ ಮಹಿಳೆ ಕಾಲಿಗೆ ಪೆಟ್ಟು ಬಿದ್ದ ವಿಚಾರ ನನಗೆ ಗೊತ್ತಿರಲಿಲ್ಲ. ಬೆಂಗಳೂರಿಗೆ ವಾಪಸ್ ಆದಾಗ ಮಾಧ್ಯಮದಲ್ಲಿ ನೋಡಿದೆ. ಆನಂತರದಲ್ಲಿ ನಮ್ಮ ಅಭಿಮಾನಿಗಳ ಕಡೆಯಿಂದ ಮಹಿಳೆಗೆ ಎಲ್ಲಾ ಸೌಕರ್ಯ ಮಾಡಿಕೊಡಲಾಯ್ತು. ಬೌನ್ಸರ್ ತಳ್ಳಿದ್ದಾರೆ ಅನ್ನೋ ಮಾತು ಕೇಳಿ ಬಂದಿತ್ತು. ಈ ವಿಚಾರವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದಿದ್ದಾರೆ.

ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್​ಫಸ್ಟ್​ ಚಾನೆಲ್​​​ ಲಭ್ಯ

Advertisment