/newsfirstlive-kannada/media/post_attachments/wp-content/uploads/2025/06/namrutha-gowda2.jpg)
ಕನ್ನಡ ಕಿರುತೆರೆಯಲ್ಲಿ ಬಹುನಿರೀಕ್ಷೆ ಹುಟ್ಟಿಸಿದ್ದ ಧಾರಾವಾಹಿ ಎಂದರೆ ಅದು ಕರ್ಣ. ಅಂದುಕೊಂಡಂತೆ ನಿನ್ನೆ ಅಂದರೆ ಸೋಮವಾರ ಮೊದಲ ಎಪಿಸೋಡ್ ಟೆಲಿಕಾಸ್ಟ್ ಆಗಬೇಕಿತ್ತು. ಭವ್ಯಾ, ಕಿರಣ್ ರಾಜ್ ಹಾಗೂ ನಮ್ರತಾ ಗೌಡ ಜೋಡಿಯ ಪ್ರೋಮೋ ಈಗಾಗಲೇ ಕನ್ನಡ ನಾಡಿನ ಜನರ ಮನ ಗೆದ್ದಿತ್ತು. ಸೋಮವಾರ ರಾತ್ರಿ 8.00 ಗಂಟೆಗೆ ಅದ್ಧೂರಿಯಾಗಿ ತೆರೆಗೆ ಬರಬೇಕಿದ್ದ ಕರ್ಣ ಏಕಾಏಕಿ ಮುಂದೂಡಿಕೆಯಾಗಿದೆ.
ಇದನ್ನೂ ಓದಿ: ಕರ್ಣ ಸೀರಿಯಲ್ ಲಾಂಚ್ ಆಗಲೇ ಇಲ್ಲ.. ಬೇಸರದಲ್ಲೇ ಕ್ಷಮೆ ಕೇಳಿದ ನಟ ಕಿರಣ್ ರಾಜ್
ಈ ಬಗ್ಗೆ ಖುದ್ದು ನಟ ಕಿರಣ್ ರಾಜ್ ಅವರೇ ವೀಕ್ಷಕರಲ್ಲಿ ಕ್ಷಮೆಯಾಚಿಸಿದ್ದರು. ಇದೀಗ ಕರ್ಣ ಸೀರಿಯಲ್ನಲ್ಲಿ ನಿತ್ಯ ಪಾತ್ರದಲ್ಲಿ ನಟಿಸಿರೋ ನಟಿ ನಮ್ರತಾ ಗೌಡ ಅವರು ವೀಕ್ಷಕರಿಗೆ ಕೈ ಮುಗಿದು ಕ್ಷಮೆ ಕೇಳಿದ್ದಾರೆ. ಈ ಬಗ್ಗೆ ವಿಡಿಯೋ ಮಾಡಿ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
View this post on Instagram
ನೀವೆಲ್ಲಾ ಕೇಳುತ್ತಿರೋ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ. ತುಂಬಾ ಜನ ಮೆಸೇಜ್ ಮಾಡಿದ್ರಿ. 16ನೇ ತಾರೀಖು ಪ್ರಸಾರ ಆಗಬೇಕಿದ್ದ ಕರ್ಣ ಧಾರಾವಾಹಿ ಏಕೆ ಪ್ರಸಾರ ಆಗಲಿಲ್ಲ ಅಂತ ಕೇಳಿದ್ರಿ. ಆದ್ರೆ ಇಡೀ ತಂಡದ ಪರವಾಗಿ ನಾನು ನಿಮ್ಮಲ್ಲಿ ಕ್ಷಮೆ ಕೇಳುತ್ತೇನೆ. ಕಾರಣಾಂತರಗಳಿಂದ ನಾವು ಬರೋದಕ್ಕೆ ಆಗಿಲ್ಲ. ಆದ್ರೆ ಪ್ರಾಮಿಸ್ ಮತ್ತೆ 8 ಗಂಟೆಗೆ ನಾವು ಆದಷ್ಟು ಬೇಗನೇ ಬರುತ್ತೇವೆ ಅಂತ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ