ಮಾರ್ಚ್ 17ಕ್ಕೆ ನಾನು ರಾಜಕೀಯದಿಂದ ನಿವೃತ್ತಿ ಘೋಷಿಸುತ್ತೇನೆ
ಮಾರ್ಚ್ 17ಕ್ಕೆ ಚುನಾವಣ ರಾಜಕೀಯಕ್ಕೆ ಬಂದು 50 ವರ್ಷ
ಬೃಹತ್ ಕಾರ್ಯಕ್ರಮ ಮಾಡಿ ನಿವೃತ್ತಿ ಘೋಷಣೆ ಮಾಡಲಿರುವ ಸಂಸದ
ಮೈಸೂರು: ಮಾರ್ಚ್ 17 ಕ್ಕೆ ನಾನು ರಾಜಕೀಯದಿಂದ ನಿವೃತ್ತಿ ಘೋಷಿಸುತ್ತೇನೆ. ಮಾರ್ಚ್ 17 ರ ನಂತರ ನಾನು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ. ಯಾವ ಪಕ್ಷಕ್ಕೂ ಸಲಹೆ ಸೂಚನೆ ನೀಡುವುದಿಲ್ಲ ಎಂದು ಚಾಮರಾಜನಗರದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ವಿ.ಶ್ರೀನಿವಾಸ್ ಪ್ರಸಾದ್, ರಾಜಕೀಯದ ಎಲ್ಲಾ ಚಟುವಟಿಕೆಗಳಿಂದ ಸಂಪೂರ್ಣ ದೂರ ಉಳಿಯುತ್ತೇನೆ. ಮಾರ್ಚ್ 17 ಕ್ಕೆ ಚುನಾವಣ ರಾಜಕೀಯಕ್ಕೆ ಬಂದು 50 ವರ್ಷ. ಅಂದೆ ಬೃಹತ್ ಕಾರ್ಯಕ್ರಮ ಮಾಡಿ ನಿವೃತ್ತಿ ಘೋಷಣೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ವಿಚಾರವಾಗಿ ಮಾತಾಡಿದ ಅವರು, ವಿಜಯೇಂದ್ರ ಮುಂದೆ ಬೆಟ್ಟದಂತ ಸವಾಲಿದೆ. ಬಿಜೆಪಿ ಹೈಕಮಾಂಡ್ ಕೊನೆಗೆ ಗಜಪ್ರಸವ ಮಾಡಿದೆ. ವಿರೋಧ ಪಕ್ಷದ ನಾಯಕ ಸ್ಥಾನ ಆಯ್ಕೆ ಮಾಡಿ ಗಜೇಂದ್ರ ಮೋಕ್ಷ ಮಾಡಲಿ ಎಂದು ಹೇಳಿದ್ದಾರೆ.
ಇದನ್ನು ಓದಿ: ಗುರುವಿದ್ದರೆ ಗುರಿ ಪಕ್ಕಾ! ಟೀಂ ಇಂಡಿಯಾದ ಆನ್ಫೀಲ್ಡ್ ಸಕ್ಸಸ್ ಹಿಂದೆ ಇರೋ ಈ ಪರಾಸ್ ಮಾಂಬ್ರೆ ಯಾರು ಗೊತ್ತಾ?
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಬಿರುಸಿನಲ್ಲಿ ಓಡುತ್ತಿದೆ. ಅದನ್ನೆಲ್ಲ ತಡೆಯುವ ಪಕ್ಷ ಸಂಘಟಿಸ ಬೇಕಿದೆ. ಇಲ್ಲಿ ಕುಟುಂಬ ರಾಜಕಾರಣ ಪ್ರಶ್ನೆ ಇಲ್ಲ. ದೇವೆಗೌಡರು, ಸಿದ್ದರಾಮಯ್ಯ ಎಲ್ಲರೂ ಕುಟುಂಬ ರಾಜಕಾರಣ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರು ರಾಜಕಾರಣ ಮಾಡುತ್ತಾರೆ. ಆದರೆ ಎಲ್ಲರು ಒಳ್ಳೆಯ ರಾಜಕಾರಣ ಮಾಡಲಿ. ಲೋಕಸಭಾ ಚುನಾವಣೆಗೆ ಅನುಕೂಲವಾಗುತ್ತೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ಮಾರ್ಚ್ 17ಕ್ಕೆ ನಾನು ರಾಜಕೀಯದಿಂದ ನಿವೃತ್ತಿ ಘೋಷಿಸುತ್ತೇನೆ
ಮಾರ್ಚ್ 17ಕ್ಕೆ ಚುನಾವಣ ರಾಜಕೀಯಕ್ಕೆ ಬಂದು 50 ವರ್ಷ
ಬೃಹತ್ ಕಾರ್ಯಕ್ರಮ ಮಾಡಿ ನಿವೃತ್ತಿ ಘೋಷಣೆ ಮಾಡಲಿರುವ ಸಂಸದ
ಮೈಸೂರು: ಮಾರ್ಚ್ 17 ಕ್ಕೆ ನಾನು ರಾಜಕೀಯದಿಂದ ನಿವೃತ್ತಿ ಘೋಷಿಸುತ್ತೇನೆ. ಮಾರ್ಚ್ 17 ರ ನಂತರ ನಾನು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ. ಯಾವ ಪಕ್ಷಕ್ಕೂ ಸಲಹೆ ಸೂಚನೆ ನೀಡುವುದಿಲ್ಲ ಎಂದು ಚಾಮರಾಜನಗರದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ವಿ.ಶ್ರೀನಿವಾಸ್ ಪ್ರಸಾದ್, ರಾಜಕೀಯದ ಎಲ್ಲಾ ಚಟುವಟಿಕೆಗಳಿಂದ ಸಂಪೂರ್ಣ ದೂರ ಉಳಿಯುತ್ತೇನೆ. ಮಾರ್ಚ್ 17 ಕ್ಕೆ ಚುನಾವಣ ರಾಜಕೀಯಕ್ಕೆ ಬಂದು 50 ವರ್ಷ. ಅಂದೆ ಬೃಹತ್ ಕಾರ್ಯಕ್ರಮ ಮಾಡಿ ನಿವೃತ್ತಿ ಘೋಷಣೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡ ವಿಚಾರವಾಗಿ ಮಾತಾಡಿದ ಅವರು, ವಿಜಯೇಂದ್ರ ಮುಂದೆ ಬೆಟ್ಟದಂತ ಸವಾಲಿದೆ. ಬಿಜೆಪಿ ಹೈಕಮಾಂಡ್ ಕೊನೆಗೆ ಗಜಪ್ರಸವ ಮಾಡಿದೆ. ವಿರೋಧ ಪಕ್ಷದ ನಾಯಕ ಸ್ಥಾನ ಆಯ್ಕೆ ಮಾಡಿ ಗಜೇಂದ್ರ ಮೋಕ್ಷ ಮಾಡಲಿ ಎಂದು ಹೇಳಿದ್ದಾರೆ.
ಇದನ್ನು ಓದಿ: ಗುರುವಿದ್ದರೆ ಗುರಿ ಪಕ್ಕಾ! ಟೀಂ ಇಂಡಿಯಾದ ಆನ್ಫೀಲ್ಡ್ ಸಕ್ಸಸ್ ಹಿಂದೆ ಇರೋ ಈ ಪರಾಸ್ ಮಾಂಬ್ರೆ ಯಾರು ಗೊತ್ತಾ?
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಬಿರುಸಿನಲ್ಲಿ ಓಡುತ್ತಿದೆ. ಅದನ್ನೆಲ್ಲ ತಡೆಯುವ ಪಕ್ಷ ಸಂಘಟಿಸ ಬೇಕಿದೆ. ಇಲ್ಲಿ ಕುಟುಂಬ ರಾಜಕಾರಣ ಪ್ರಶ್ನೆ ಇಲ್ಲ. ದೇವೆಗೌಡರು, ಸಿದ್ದರಾಮಯ್ಯ ಎಲ್ಲರೂ ಕುಟುಂಬ ರಾಜಕಾರಣ ಮಾಡಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರು ರಾಜಕಾರಣ ಮಾಡುತ್ತಾರೆ. ಆದರೆ ಎಲ್ಲರು ಒಳ್ಳೆಯ ರಾಜಕಾರಣ ಮಾಡಲಿ. ಲೋಕಸಭಾ ಚುನಾವಣೆಗೆ ಅನುಕೂಲವಾಗುತ್ತೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ವಿ.ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ