ರೆಸ್ಟೋರೆಂಟ್ಗೆ ಭೇಟಿ ನೀಡಿ ಉಪಹಾರ ಸೇವಿಸಿದ ಓವೈಸಿ
ಇಂತಹ ದಾಳಿಗಳು ಹೇಡಿತನದ ಕೃತ್ಯಗಳಾಗಿವೆ ಎಂದ ಓವೈಸಿ
ಬಾಂಬ್ ದಾಳಿಯನ್ನು ಖಂಡಿಸಿದ ಎಐಎಂಐಎಂ ಮುಖ್ಯಸ್ಥ
ಹೈದರಾಬಾದ್: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟವನ್ನು ಖಂಡಿಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೈದರಾಬಾದ್ನ ರಾಮೇಶ್ವರಂ ಕೆಫೆಗೆ ಭೇಟಿ ನೀಡಿದ್ದಾರೆ. ಇನ್ನೂ ಓವೈಸಿ ರೆಸ್ಟೋರೆಂಟ್ಗೆ ಭೇಟಿ ನೀಡಿ, ಉಪಹಾರ ಸೇವಿಸಿ ಅಲ್ಲಿನ ರುಚಿಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ರಾಜಧಾನಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ದಾಳಿಯನ್ನು ಖಂಡಿಸಿದ ಅಸಾದುದ್ದೀನ್ ಅವರು, ಇಂತಹ ದಾಳಿಗಳು ಹೇಡಿತನದ ಕೃತ್ಯಗಳಾಗಿವೆ. ಇದು ಭಾರತೀಯ ಮೌಲ್ಯಗಳು ಮತ್ತು ವ್ಯವಸ್ಥೆಗಳ ಮೇಲಿನ ದಾಳಿಯಾಗಿದೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಭಾರತದ ಮಾಜಿ ರಾಷ್ಟ್ರಪತಿ ದಿವಂಗತ ಅಬ್ದುಲ್ ಕಲಾಂ ಅವರ ಜನ್ಮಸ್ಥಳದ ಹೆಸರನ್ನು ಈ ರೆಸ್ಟೋರೆಂಟ್ಗೆ ಇಡಲಾಗಿದೆ ಎಂಬುದನ್ನ ಪ್ರತಿಯೊಬ್ಬರೂ ನೆನಪಿನಲ್ಲಿಟ್ಟುಕೊಳ್ಳಬೇಕೆಂದು ಓವೈಸಿ ಮನದಟ್ಟು ಮಾಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ
ರೆಸ್ಟೋರೆಂಟ್ಗೆ ಭೇಟಿ ನೀಡಿ ಉಪಹಾರ ಸೇವಿಸಿದ ಓವೈಸಿ
ಇಂತಹ ದಾಳಿಗಳು ಹೇಡಿತನದ ಕೃತ್ಯಗಳಾಗಿವೆ ಎಂದ ಓವೈಸಿ
ಬಾಂಬ್ ದಾಳಿಯನ್ನು ಖಂಡಿಸಿದ ಎಐಎಂಐಎಂ ಮುಖ್ಯಸ್ಥ
ಹೈದರಾಬಾದ್: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟವನ್ನು ಖಂಡಿಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೈದರಾಬಾದ್ನ ರಾಮೇಶ್ವರಂ ಕೆಫೆಗೆ ಭೇಟಿ ನೀಡಿದ್ದಾರೆ. ಇನ್ನೂ ಓವೈಸಿ ರೆಸ್ಟೋರೆಂಟ್ಗೆ ಭೇಟಿ ನೀಡಿ, ಉಪಹಾರ ಸೇವಿಸಿ ಅಲ್ಲಿನ ರುಚಿಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ರಾಜಧಾನಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ದಾಳಿಯನ್ನು ಖಂಡಿಸಿದ ಅಸಾದುದ್ದೀನ್ ಅವರು, ಇಂತಹ ದಾಳಿಗಳು ಹೇಡಿತನದ ಕೃತ್ಯಗಳಾಗಿವೆ. ಇದು ಭಾರತೀಯ ಮೌಲ್ಯಗಳು ಮತ್ತು ವ್ಯವಸ್ಥೆಗಳ ಮೇಲಿನ ದಾಳಿಯಾಗಿದೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಭಾರತದ ಮಾಜಿ ರಾಷ್ಟ್ರಪತಿ ದಿವಂಗತ ಅಬ್ದುಲ್ ಕಲಾಂ ಅವರ ಜನ್ಮಸ್ಥಳದ ಹೆಸರನ್ನು ಈ ರೆಸ್ಟೋರೆಂಟ್ಗೆ ಇಡಲಾಗಿದೆ ಎಂಬುದನ್ನ ಪ್ರತಿಯೊಬ್ಬರೂ ನೆನಪಿನಲ್ಲಿಟ್ಟುಕೊಳ್ಳಬೇಕೆಂದು ಓವೈಸಿ ಮನದಟ್ಟು ಮಾಡಿಸಿದ್ದಾರೆ.
ವಿಶೇಷ ಸೂಚನೆ: ಎಲ್ಲಾ DTH & Cableನಲ್ಲಿ ನ್ಯೂಸ್ಫಸ್ಟ್ ಚಾನೆಲ್ ಲಭ್ಯ